ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ
Team Udayavani, Apr 8, 2020, 5:09 PM IST
ಹೊನ್ನಾವರ: ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಅನ್ವಯ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಪಡೆಯಬಹುದಾದ 291 ವಿಧದ ಚಿಕಿತ್ಸೆಯನ್ನು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲೂ ಪಡೆಯಬಹುದಾಗಿದೆ.
ಕೋವಿಡ್ 19 ಸಮಸ್ಯೆಯಿಂದಾಗಿ ಕೆಲವು ಸರ್ಕಾರಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿರುವುದರಿಂದ ಆಯುಷ್ಮಾನ್ ಮತ್ತು ಆರೋಗ್ಯ ಕರ್ನಾಟಕ ಚಿಕಿತ್ಸೆ ಪಡೆಯಲು ಅರ್ಹರಾದವರಿಗೆ ತೊಂದರೆಯಾಗಬಾರದೆಂದು ಈ ತುರ್ತು ಆದೇಶ ಹೊರಡಿಸಲಾಗಿದೆ. ಸಿಜೇರಿಯನ್, ಹರ್ನಿಯಾ ಮೊದಲಾದ 291 ವಿಧದ ಚಿಕಿತ್ಸೆಗಳನ್ನು ತಮ್ಮ ಕಾರ್ಡ್ ಹಾಜರುಪಡಿಸಿ ಪಡೆಯಲು ಅವಕಾಶವಿದೆ. ಹೊನ್ನಾವರದ ಸೇಂಟ್ ಇಗ್ನೇಷಿಯಸ್, ಶಾರದಾ ನರ್ಸಿಂಗ್ ಹೋಂ, ವಿಕೆಬಿ ಬಳಕೂರ ಸ್ಮಾರಕ ಆಸ್ಪತ್ರೆ, ಆರ್.ಎನ್. ಶೆಟ್ಟಿ ಆಸ್ಪತ್ರೆ ಮುಡೇìಶ್ವರ, ಟಿಎಸ್ಎಸ್ ಆಸ್ಪತ್ರೆ ಶಿರಸಿ, ನಾಗಮಂಗಲ ಆಸ್ಪತ್ರೆ ಕಾರವಾರ ಸಹಿತ 10 ಆಸ್ಪತ್ರೆಗಳು ನೋಂದಾಯಿಸಿಕೊಂಡಿದ್ದು ಇನ್ನೂ ಕೆಲವು ಆಸ್ಪತ್ರೆಗಳು ನೋಂದಾಯಿಸಿಕೊಳ್ಳಬೇಕಾಗಿವೆ. ಇದರಿಂದಾಗಿ ಮಧ್ಯಮ ಸ್ಥರದ ಎಲ್ಲ ಚಿಕಿತ್ಸೆಗಳನ್ನು ನೇರ ಇಲ್ಲಿ ಪಡೆಯಬಹುದು. ಇದರಿಂದ ಉತ್ತರ ಕನ್ನಡದ ಜನತೆಗೆ ಉಪಯೋಗವಾಗಲಿದೆ. ಆರೋಗ್ಯ ಮಿತ್ರ ವೆಂಕಟೇಶ ಪಟಗಾರ ಮೊ: 85538 08646 ಇವರಿಂದ ವಿವರ ಪಡೆಯಬಹುದು.
ಜೀಯು ಹೊನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು