ಸೌರಶಕ್ತಿ ಬಹುಪಯೋಗಿ ಉಚಿತ ಇಂಧನ


Team Udayavani, Feb 28, 2020, 4:27 PM IST

28-Febraury-21

ಹೊನ್ನಾವರ: ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಹರೀಶ ಹಂದೆಯವರ ಸೆಲ್ಕೋ ಸೋಲಾರ್‌ ಸಂಸ್ಥೆ ಸೌರಶಕ್ತಿಯನ್ನು ಬಹುಪಯೋಗಿಯಾಗಿ ಗ್ರಾಮೀಣ ಭಾಗದ ಜನತೆಗೆ ಜೀವನಾಧಾರವಾಗಿ ಮಾಡಲು ಹಲವು ಸಂಶೋಧನೆ ನಡೆಸಿ ಯಶಸ್ವಿಯಾಗಿದೆ. ಈ ಕುರಿತು ಜನರಿಗೆ ತಿಳಿವಳಿಕೆ ನೀಡಬೇಕಾದ ಅಗತ್ಯವಿದೆ.

ಆರಂಭದ ದಿನಗಳಲ್ಲಿ ಸೌರಶಕ್ತಿ ದೀಪ ಬೆಳಗಿಸಲು, ಬಿಸಿನೀರು ಕಾಯಿಸಲು ಮಾತ್ರ ಎಂದು ನಂಬಲಾಗಿತ್ತು. ನಂತರದ ದಿನಗಳಲ್ಲಿ ವಿವಿಧ ಫ್ಯಾನ್‌ ಗಳು, ಏರ್‌ ಕಂಡೀಶನರ್‌ಗಳು, ಪ್ರಿಡ್ಜ್ಗಳು ಸೌರಶಕ್ತಿ ಚಾಲಿತವಾದವು. ನಂತರ ಮನೆಯೊಳಗೆ ಹೋದ ಸೌರಶಕ್ತಿ ಮಿಕ್ಸರ್‌, ಗ್ರೈಂಡರ್ , ಓವನ್‌, ಟೋಸ್ಟ್‌ ಮೇಕರ್‌, ಇಸ್ತ್ರಿಪೆಟ್ಟಿಗೆಗಳಿಗೆ ವಿಸ್ತಾರವಾಯಿತು.

ಈ ದಶಕದಲ್ಲಿ ಸೌರಶಕ್ತಿಯಲ್ಲಿ ಕ್ರಾಂತಿಕಾರಕ ಆವಿಷ್ಕಾರಗಳಾಗಿವೆ. ಸಣ್ಣಪುಟ್ಟ ಕೈಗಾರಿಕೆ, ಸ್ವ ಉದ್ಯೋಗಿಗಳಿಗೆ ಸೌರ ವಿದ್ಯುತ್‌ ಉಚಿತವಾಗಿ ದೊರೆಯುವಂತೆ ಉಪಕರಣಗಳು ಸಿದ್ಧವಾಗುತ್ತಿವೆ. ಸೌರಶಕ್ತಿಯಿಂದ ಹಳ್ಳಿಯ ಕುಂಬಾರನ ಚಕ್ರ ತಿರುಗುತ್ತಿದೆ. ಕಮ್ಮಾರನ ತಿದಿ ಉಸಿರಾಡಿ ಬೆಂಕಿ ಉರಿಸುತ್ತದೆ. ಆಕಳು ಹಾಲು ಕರೆಯುತ್ತದೆ, ನಿಶಬ್ಧವಾಗಿ ಕಬ್ಬಿನಗಾಣ ಹಾಲು ಸುರಿಸುತ್ತದೆ, ಕಾಲಿಗೆ ನೋವಿಲ್ಲದೇ ಬಟ್ಟೆ ಹೊಲಿಯುತ್ತದೆ, ಹಪ್ಪಳ ಮಾಡಿ ಒಣಗಿಸಿ ಕೊಡುತ್ತದೆ, ಪ್ರಿಂಟರ್‌ ಬಹುವರ್ಣದ ಮುದ್ರಣ ಮಾಡಿಕೊಡುತ್ತದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೌರಶಕ್ತಿ ಉಪಕರಣ ಕೊಡುವಲ್ಲಿ ಮೊದಲ ಸ್ಥಾನದಲ್ಲಿದೆ. ಹೊನ್ನಾವರ-ಭಟ್ಕಳ ತಾಲೂಕಿನ ಒಟ್ಟೂ 5000 ಕುಟುಂಬಗಳಿಗೆ ಸೋಲಾರ್‌ ವಿದ್ಯುತ್‌, ಸೋಲಾರ್‌ ಶಕ್ತಿಯ ಝೆರಾಕ್ಸ್‌, ಕಮ್ಮಾರನ ತಿದಿ, ಹೊಲಿಗೆಯಂತೆ, ಕಬ್ಬಿನಗಾಣ, ಬಿಸಿನೀರು ಉಪಕರಣ ಮೊದಲಾದವನ್ನು ವಿತರಿಸಿ ಸೆಲ್ಕೋದಿಂದ ಪುರಸ್ಕಾರ ಪಡೆದಿದೆ ಎಂದು ಯೋಜನಾಧಿಕಾರಿ ಈಶ್ವರ ಹೇಳಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದಲ್ಲಿ 1.75ಲಕ್ಷ ಸದಸ್ಯರಿಗೆ ಸೌರಶಕ್ತಿಯ ಉಪಕರಣಗಳನ್ನು ಪಡೆಯುವಲ್ಲಿ ನೆರವು ನೀಡಿದೆ. ಸಹಕಾರಿ ಸಂಘಗಳು ಈ ವಿಷಯದಲ್ಲಿ ತುಂಬ ಹಿಂದಿವೆ. ಉತ್ಪಾದಕ ಉಪಕರಣಗಳಿಗೆ ಸಾಲನೀಡಿ, ಗ್ರಾಮೀಣ ಅಭಿವೃದ್ಧಿಗೆ ನೆರವಾಗಬೇಕಿದೆ. ವಿವರಗಳಿಗೆ ದತ್ತಾರಾಮ ಭಟ್‌, ವ್ಯವಸ್ಥಾಪಕರು,ಸೆಲ್ಕೋ ಸೋಲಾರ್‌, ಕುಮಟಾ ಅವರನ್ನು ಸಂಪರ್ಕಿಸಬಹುದಾಗಿದೆ.

„ಜೀಯು, ಹೊನ್ನಾವರ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.