ಅಂಕೋಲಾದಲ್ಲಿ ಹೊಂಡೆ ಹಬ್ಬ ಸಂಭ್ರಮ


Team Udayavani, Oct 29, 2019, 1:16 PM IST

uk-tdy-1

ಅಂಕೋಲಾ: ಶೌರ್ಯದ ಪ್ರತೀಕ, ಸೌಹಾರ್ದದ ಸಂಕೇತವಾಗಿ ಕರಾವಳಿ ಭಾಗದ ಅಂಕೋಲಾದಲ್ಲಿ ಪಾರಂಪರಿಕವಾಗಿ ಆಚರಿಸಲಾಗುವ “ಹೊಂಡೆ ಹಬ್ಬ’ ನಗರದಲ್ಲಿ ಸೋಮವಾರ ಸಂಭ್ರಮಿಂದ ಜರುಗಿತು.

ನೆರೆ ಜನರಲ್ಲಿ ರೋಮಾಂಚನ ಮೂಡಿಸಿತು. ಕರಾವಳಿ ಪ್ರದೇಶದಲ್ಲಿ ಪ್ರತಿಯೊಂದು ಹಬ್ಬಗಳಿಗೆ ಒಂದೊಂದು ವಿಶೇಷತೆಗಳಿದ್ದು, ಸಂಪ್ರದಾಯದಂತೆ ಆಚರಿಸಲಾಗುತ್ತಿದೆ. ಅದರಂತೆ ದೀಪಾವಳಿ ಹಬ್ಬದಲ್ಲಿಯೂ ವಿಶೇಷತೆಗಳಿವೆ. ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ತಾಲೂಕಿನ ಕ್ಷತ್ರೀಯ ಕೋಮಾರಪಂಥ ಸಮಾಜದ ವಿಶಿಷ್ಟ ಆಚರಣೆ ಹಬ್ಬವೇ ಹೊಂಡೆ ಹಬ್ಬ.

ಕ್ಷತ್ರೀಯ ಕೋಮಾರಪಂತ ಸಮಾಜದವರ ವೀರತ್ವವನ್ನು ಮೆರದು ದೇಶ ಪ್ರೇಮಿಗಳಾಗಿದ್ದರು ಎನ್ನುವ ಐತಿಹಾಸಿಕ ನೆನಪಿಗಾಗಿ ಅಂಕೋಲಾದಲ್ಲಿ ಭಾವಾವೇಶವಾಗಿ ಯುದ್ಧೋಪಾದಿಯಲ್ಲಿ ಎರಡು ಬಣಗಳು ಹೋರಾಡಿ ಆಚರಣೆ ಮಾಡುತ್ತಿರುವ ಈ “ಹೊಂಡೆ ಹಬ್ಬ’ ನಗರದ ಶಾಂತಾದುರ್ಗಾ ದೇವಸ್ಥಾನದಿಂದ ಒಂದು ತಂಡ ಕುಂಬಾರ ಕೇರಿ ಕದಂಭೇಶ್ವರ ದೇವಸ್ಥಾನದಿಂದ ಇನ್ನೊಂದು ತಂಡ ಆಗಮಿಸಿ ಹಬ್ಬದ ಆಚರಣೆ ಮಾಡಲಾಗುತ್ತದೆ.

ಕೋಮಾರಪಂಥ ಸಮಾಜದವರು ಮೂಲತಃ ಕ್ಷತ್ರೀಯ ವರ್ಗಕ್ಕೆ ಸೇರಿದವರಾಗಿದ್ದು, ಯುದ್ಧದ ಸಂದರ್ಭದಲ್ಲಿ ಕೋಮಾರಪಂಥ ಸಮಾಜ ತನ್ನದೇ ಆದ ಕೊಡುಗೆ ನೀಡಿದ ಐತಿಹಾಸಿಕ ಹಿನ್ನೆಲೆಗಳಿವೆ. ಕೋಮಾರಪಂಥ ಸಮಾಜ ಅಂದು ನಾಡಿನ ರಕ್ಷಣೆಗೆ ಯುದ್ಧದಲ್ಲಿ ತೋರಿದ ಸಾಹಸದ ಸಂಕೇತವಾಗಿ ಇಂದು ಪ್ರಸ್ತುತವಾಗಿ ಹಿಂಡ್ಲಿಕಾಯಿಂದ ಪರಸ್ಪರ ಹೊಡೆದಾಡುವುದರ ಮೂಲಕ ತಮ್ಮ ಸಂಪ್ರದಾಯ  ಅನಾವರಣಗೊಳಿಸುತ್ತಾರೆ. ಈ ಆಟದಲ್ಲಿ ಕೆಚ್ಚಿನ ಭೀಕರತೆ ಇದ್ದರು ಅದು ಸಮಾಜದ ಸೌಹಾರ್ದದ ಸಂಕೇತವಾಗಿರುತ್ತದೆ. ತನ್ಮೂಲಕ ಎಲ್ಲಾ ಸಮುದಾಯದವರ ಸಾಮರಸ್ಯಕ್ಕೆ ಸಾಕ್ಷಿಯಾಗಿ ಹೊಂಡೆಯಾಟವು ಶತಶತಮಾನಗಳಿಂದ ನಡೆಯುತ್ತ ಬಂದಿದೆ.

ಈ ಹೊಂಡೆ ಹಬ್ಬದಲ್ಲಿ ಕೋಮಾರಪಂಥ ಸಮಾಜದ ಲಕ್ಷ್ಮೇಶ್ವರ ಹಾಗೂ ಹೊನ್ನೇಕೇರಿಯ ಊರಿನ ಎರಡು ತಂಡಗಳು ಪಾಲ್ಗೊಳ್ಳುತ್ತವೆ. ಕುಂಬಾರಕೇರಿಯ ಕಳಸದೇವಸ್ಥಾನದಿಂದ ಹೊರಟ ಲಕ್ಷ್ಮೇಶ್ವರ ತಂಡವು ವೀರಾವೇಶದಿಂದ ಹೊಂಡೆ ಹೊಂಡೆ ಎನ್ನುತ್ತಾ ಎದುರಾಳಿಯನ್ನು ಎದುರಿಸಲು ನಗರದ ಶಾಂತಾದುರ್ಗ ದೇವಸ್ಥಾನದ ಎದುರಿನಲ್ಲಿ ಹೊನ್ನೇಕೇರಿ ತಂಡದೊಂದಿಗೆ ಮುಖಾಮುಖೀಗೊಂಡ ನಂತರ ಎರಡು ಗ್ರಾಮದ ಹಿರಿಯರಿಂದ ಹೊಂಡೆ ಆಟಕ್ಕೆ ಚಾಲನೆ ದೊರೆಯುತ್ತದೆ. ಈ ಹೊಂಡೆ ಹಬ್ಬದ ನಿಯಮದಂತೆ ಯಾವುದೇ ಕಾರಣಕ್ಕೆ ಮಂಡಿಯ ಕೆಳಭಾಗಕ್ಕೆ ಹೊಡೆಯಬೇಕೆನ್ನುವ ನಿಯಮ ಪಾಲಿಸಬೇಕಾಗುತ್ತದೆ. ಆದರೂ ಕೆಲವೊಮ್ಮೆ ಗುರಿಕಾರನ ಗುರಿತಪ್ಪಿ ಎದುರಾಳಿಯು ತೀವ್ರ ತರಹದ ಹೊಡೆತಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ.

ಇವುಗಳನ್ನು ನಿಯಂತ್ರಿಸಲು ಸಮಾಜದ ಮುಖಂಡರು ನಿರ್ಣಾಯಕರಾಗಿರುತ್ತಾರೆ. ಎರಡು ಪಂಗಡಗಳಲ್ಲಿ ಯಾರು ಸಮರ ವೀರರು ಎನ್ನುವುದನ್ನು ಈ ನಿರ್ಣಾಯಕರು ನಿರ್ಧರಿಸುತ್ತಾರೆ. ಹೊಂಡೆ ಹಬ್ಬದಲ್ಲಿ ಗೆದ್ದ ಪಂಗಡಕ್ಕೆ ದೊಡ್ಡ ಮೊಗ್ಗೆ ಕಾಯಿಯನ್ನು ನೀಡಿದರೆ, ಇನ್ನೊಂದು ಪಂಗಡಕ್ಕೆ ಸಣ್ಣ ಮೊಗ್ಗೆಕಾಯಿ ನೀಡುವ ಸಂಪ್ರದಾಯ ಪಾರಂಪರಿಕವಾಗಿ ನಡೆದುಕೊಂಡು ಬಂದಿದೆ. ನಗರದ ಮಧ್ಯವರ್ತಿ ಸ್ಥಳಗಳಲ್ಲಿ ನಾಲ್ಕು ಕಡೆಗಳಲ್ಲಿ ಹೊಂಡೆಯೊಂದಿಗೆ ಹೋರಾಟಕ್ಕಿಳಿದು ತಮ್ಮ ಕ್ಷತ್ರೀಯ ವರ್ಚಸನ್ನು ತೊರಡಿಸಲಿದ್ದಾರೆ. ನಂತರ ಎರಡು ಪಂಗಡಗಳು ಒಂದಾಗಿ ಊರಿನ ದೊಡ್ಡ ದೇವರನಿಸಿಕೊಂಡ ವೆಂಕಟರಮಣ ದೇವಸ್ಥಾನಕ್ಕೆ ಗೋವಿಂದ ಗೋವಿಂದ ಎನ್ನುತ್ತ ತೆರಳಿ ಹೋರಾಟದ ನೆನಪುಗಳನ್ನು ಮೆಲುಕು ಹಾಕುತ್ತಾರೆ. ಅಲ್ಲದೆ ಹೊಂಡೆ ಹಬ್ಬದ ಸಮಯದಲ್ಲಿ ಆದ ಸಣ್ಣಪುಟ್ಟ ತಪ್ಪುಗಳನ್ನು ಒಪ್ಪಿಕೊಂಡು ಸಮಾಜದವರೆಲ್ಲ ಒಂದಾಗಿ ಬಾಳ್ಳೋಣ ಎನ್ನುವ ಸಾಮರಸ್ಯ ಮೆರೆಯುತ್ತಾರೆ.

 

-ಅರುಣ ಶೆಟ್ಟಿ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.