ಹೊಸ್ತಿನ ಹಬ್ಬ-ಕೃಷಿ ಆರಾಧನೆ 


Team Udayavani, Oct 17, 2021, 5:31 PM IST

hjguyu

ಕಾರವಾರ: ದಸರಾದಲ್ಲಿ ಆಚರಿಸಲಾಗುವ ಹೊಸ್ತಿನ ಹಬ್ಬ ಕುಮಟಾ ತಾಲೂಕಿನ ಬರ್ಗಿಯಲ್ಲಿ ಸಂಭ್ರಮದಿಂದ ನಡೆಯಿತು. ಬರ್ಗಿ ಗ್ರಾಮ ಕೃಷಿಯ ಪ್ರಾಮುಖ್ಯತೆ ತೋರುವ ಹೊಸ್ತಿನ ಹಬ್ಬದ ಸಂಪ್ರದಾಯಗಳನ್ನು ಇಂದಿಗೂ ಕಾಪಾಡಿಕೊಂಡು ಬಂದಿದೆ. ಇಲ್ಲಿ ಆಚರಿಸಲಾಗುವ ಹೊಸ್ತಿನ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಕೃಷಿ ಮೂಲದ ಈ ಹಬ್ಬವನ್ನು ನೂರಾರು ವರ್ಷಗಳಿಂದ ರೈತರು ಆಚರಿಸಿಕೊಂಡು ಬಂದಿದ್ದಾರೆ. ಇದಕ್ಕೆ ಹರಣ ಮೂರ್ತ, ಹೊಸ ಧಾನ್ಯ ಎಂದೂ ಕರೆಯಲಾಗುತ್ತದೆ.

ಹಬ್ಬದ ದಿನ ವಾದ್ಯಮೇಳದೊಂದಿಗೆ ಭಕ್ತರು ಹಾಗೂ ಅರ್ಚಕರು ಹೊಸ್ತಿನ ಹಬ್ಬಕ್ಕಾಗಿಯೇ ಮೀಸಲಿಟ್ಟಿರುವ ಗದ್ದೆಗೆ ಹೋಗಿ ಪೂಜೆ ಸಲ್ಲಿಸಿ ಕದಿರು ಹೊತ್ತು ತರುತ್ತಾರೆ. ಘಟಬೀರ, ಯಜಮಾನ ದೇವರ ಕಳಸ ಸಾವಿರಾರು ಭಕ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುತ್ತದೆ. ಆ ವೇಳೆ ಕಳಸ ಹೊತ್ತ ಗುನಗರಿಗೆ ದರ್ಶನವಾಗುತ್ತದೆ.

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳಸಕ್ಕೆ ಪೂಜೆ ಸಲ್ಲಿಸಿದ ಬಳಿಕ ಎರಡು ಕಳಸಗಳು ಯಜಮಾನ ದೇವಸ್ಥಾನಕ್ಕೆ ತೆರಳಿ ಅಲ್ಲಿ ಆಸೀನವಾಗುತ್ತದೆ. ನಂತರ ದೇವಸ್ಥಾನದ ಅರ್ಚಕರು ಮತ್ತು ಭಕ್ತರು ಸೇರಿ ಕದಿರು ಕೊಯ್ಯುವ ಗದ್ದೆಗೆ ತೆರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿ ಕದಿರು ಕೊಯ್ಯಲಾಗುತ್ತದೆ. ನಂತರ ಕದಿರನ್ನು ಪ್ರತಿಯೊಬ್ಬರೂ ತಲೆಯ ಮೇಲೆ ಹೊತ್ತಿಕೊಂಡು ಮನೆಗೆ ಬರುತ್ತಾರೆ. ಕದಿರನ್ನು ತುಳಸಿ ಮನೆಯಲ್ಲಿ ಇಟ್ಟು ಪೂಜೆ ಸಲ್ಲಿಸಿ ದೇವಸ್ಥಾನದಿಂದ ತಂದಿರುವ ಕದಿರನ ಜೊತೆ ಸೇರಿಸಿ ಪೂಜೆ ಸಲ್ಲಿಸಿ ಮನೆ ಬಾಗಿಲಿಗೆ ಹಾಗೂ ಕೃಷಿ ಕಾರ್ಯಕ್ಕೆ ಬಳಸುವ ಉಪಕರಣಗಳಿಗೆ ಕಟ್ಟಲಾಗುತ್ತದೆ. ಮನೆಯಲ್ಲಿ ಧಾನ್ಯ ಲಕ್ಷ್ಮೀ ನೆಲೆಸಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಬರ್ಗಿಯಲ್ಲಿ ಹೊಸ್ತಿನ ಹಬ್ಬವನ್ನು ಆಚರಿಸದೇ ಹೋದರೆ ಮುಂದೆ ಗ್ರಾಮದಲ್ಲಿ ನಡೆಯಬಹುದಾದ ಸಂಕ್ರಾಂತಿ, ಗಡಿ ಹಬ್ಬ ಆಚರಿಸಲಾಗುವುದಿಲ್ಲ ಎನ್ನುವ ಪ್ರತೀತಿಯಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.