ವಿದ್ವಾನ್ ಗಣಪತಿ ಭಟ್ಟರಿಗೆ ಹೊಸ್ತೋಟ, ಪಾದೇಕಲ್ಲರಿಗೆ ದಂಟ್ಕಲ್ ಪ್ರಶಸ್ತಿ


Team Udayavani, Aug 23, 2022, 4:44 PM IST

1–asaSASA

ಶಿರಸಿ: ಯಕ್ಷಗಾನದ ಪ್ರಸಿದ್ದ ಭಾಗವತ ವಿದ್ವಾನ್ ಗಣಪತಿ ಭಟ್ಟ ಮೊಟ್ಟೆಗದ್ದೆ ಅವರಿಗೆ ಯಕ್ಷ ಋಷಿ ಎಂದೇ ಹೆಸರಾಗಿದ್ದ ಹೊಸ್ತೋಟ ಮಂಜುನಾಥ ಭಾಗವತರ ಹೆಸರಿನ ಪ್ರಶಸ್ತಿ ಹಾಗೂ ಯಕ್ಷಗಾನದ ವಿದ್ವಾಂಸ ಪಾದೇಕಲ್ಲು ವಿಷ್ಣು ಭಟ್ಟ ಅವರಿಗೆ ಯಕ್ಷಗಾನ, ಸಂಸ್ಕೃತ, ಕನ್ನಡದ ವಿದ್ವಾಂಸರಾಗಿದ್ದ ಪ್ರೊ.ಎಂ.ಎ.ಹೆಗಡೆ‌ ದಂಟ್ಕಲ್ ಅವರ ಹೆಸರಿನ ಪ್ರಶಸ್ತಿ ಪ್ರಕಟವಾಗಿದೆ.

ಸೋಂದಾ ಸ್ವರ್ಣವಲ್ಲೀ‌ ಮಹಾಸಂಸ್ಥಾನವು ಯಕ್ಷ ಶಾಲ್ಮಲಾ‌ ಅಂಗ ಸಂಸ್ಥೆಯ‌ ಮೂಲಕ ಸ್ಥಾಪಿಸಿದ ಈ ಪ್ರಶಸ್ತಿಗಳನ್ನು ಆಗಸ್ಟ್ ಕೊನೆಯಲ್ಲಿ ಸ್ವರ್ಣವಲ್ಲೀ‌ ಮಠದಲ್ಲಿ ನಡೆಯುವ ಎರಡು‌‌ ದಿನಗಳ ಯಕ್ಷೋತ್ಸವದಲ್ಲಿ ಪ್ರದಾನ ಮಾಡಲಾಗುತ್ತಿದೆ ಎಂದು‌ ಯಕ್ಷ ಶಾಲ್ಮಲಾದ ಕಾರ್ಯದರ್ಶಿ ನಾಗರಾಜ‌ ಜೋಶಿ ಸೋಂದಾ ತಿಳಿಸಿದ್ದಾರೆ.

ಯಲಾಪುರ ತಾಲೂಕಿನ ಮೊಟ್ಟೆಗದ್ದೆಯ ವೈದಿಕ ಮನೆತನದ ವಿದ್ವಾನ್ ಗಣಪತಿ ಭಟ್ಟರವರು ವೈದಿಕ ಮತ್ತು ಬಡಗುತಿಟ್ಟಿನ ಪ್ರಸಿದ್ಧ ಭಾಗವತರಲ್ಲಿ ಒಬ್ಬರು. ಸಂಸ್ಕೃತ, ವೇದ, ಕರ್ನಾಟಕೀ ಸಂಗೀತದಲ್ಲಿ ಹೆಚ್ಚಿನ ಪ್ರಭುತ್ವ ಹೊಂದಿದ ಇವರು ತಮ್ಮ ನಿರಂತರ ಅಧ್ಯಯನ ಮತ್ತು ಅಭ್ಯಾಸಗಳಿಂದ ಬಡಗುತಿಟ್ಟಿನ ಭಾಗವತಿಕೆಯ ಬಗ್ಗೆ ಅಧೀಕೃತವಾಗಿ ಮಾತಾಡಬಲ್ಲ ಭಾಗವತರುಗಳಲ್ಲಿ ಒಬ್ಬರು. ಇವರು ರಚಿಸಿದ ಯಕ್ಷಗಾನ ಗಾನ ಸಂಹಿತೆ ಅದಕ್ಕೊಂದು ಉದಾಹರಣೆಯಾಗಿದೆ.

ದೇಶ ವಿದೇಶಗಳಲ್ಲಿ ತಮ್ಮ ವಿದ್ವತ್ಪೂರ್ಣ ಭಾಗವತಿಕೆಯಿಂದ ಜನಪ್ರೀಯತೆಯನ್ನು ಪಡೆದವರು. ಅನೇಕ ಪ್ರಶಸ್ತಿಗಳ ಪುರಸ್ಕೃತರಾದ ಮೊಟ್ಟೆಗದ್ದೆಯವರಿಗೆ ಈಗ ಹೊಸ್ತೋಟ ಅವರ ಹೆಸರಿನ ಪ್ರಶಸ್ತಿ ಪ್ರಕಟವಾಗಿದೆ.

ಮೂಲತಃ ಪುತ್ತೂರು ಸಮೀಪದ ಪಾದೇಕಲ್ಲ ಊರಿನ ಡಾ. ವಿಷ್ಣು ಭಟ್ಟ ಅವರು ಯಕ್ಷಲೋಕದ ಅಗ್ರಮಾನ್ಯ ಸಂಶೋಧಕರು. ”ಭಾಗವತದ ಯಕ್ಷಗಾನ ಪ್ರಸಂಗಗಳು” ಎಂಬ ವಿಷಯದಲ್ಲಿ ಅಧ್ಯಯನ ನಡೆಸಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿ ಎಚ್ ಡಿ ಪದವಿ ಪಡೆದವರು. ಕನ್ನಡ ಸಾಹಿತ್ಯ ಅಧ್ಯಯನದಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು, ಹಲವು ಪುಸ್ತಕಗಳನ್ನು ಟಿಪ್ಪಣಿಗಳೊಂದಿಗೆ ಸಂಪಾದಿಸಿದವರು. ವಿಚಾರ ಪ್ರಪಂಚ, ಸೇಡಿಯಾಪು ಛಂದಸ್ಸಂಪುಟ, ಶಬ್ಧಾರ್ಥಕೋಶ ಮುಂತಾದ ಮೌಲ್ಯಯುತ ಕೃತಿಗಳನ್ನು ರಚಿಸಿದವರು.

ಮಹಾಜನಪದ, ಭಾನುಮತಿಯ ನೆತ್ತ, ಪುರಾಣ ಲೋಕ, ಸಾಹಿತ್ಯಾಧ್ಯಯನ, ಯಕ್ಷಗಾನಾಧ್ಯಯನ ಹೀಗೆ ಹಲವಾರು ಕೃತಿ ರಚಿಸಿದ್ದಲ್ಲದೇ ಹಲವಾರು ಪ್ರಶಸ್ತಿಗಳ ಪುರಸ್ಕೃತರು. ತಾಳಮದ್ದಲೆ ಅರ್ಥದಾರಿಗಳಾದ ಇವರಿಗೆ ಪ್ರಸಂಗಕರ್ತರೂ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದ ದಿ. ಎಂ ಎ ಹೆಗಡೆ ದಂಟಕಲ್ ಅವರ ನೆನಪಿಗೆ ಪ್ರಪ್ರಥಮವಾಗಿ ನೀಡುತ್ತಿರುವ ಪ್ರಶಸ್ತಿ ಪ್ರಕಟಿಸಲಾಗಿದೆ.

ಉಭಯ ಪ್ರಶಸ್ತಿಗಳನ್ನು ಸ್ವತಃ ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ಪ್ರದಾನ ಮಾಡಲಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.