ನೀರಿಂಗಿಸಲು ಬೃಹತ್‌ ಮಳೆಕೊಯ್ಲು ಯೋಜನೆ

•ಎಂಇಎಸ್‌-ರೋಟರಿ ಸಹಭಾಗಿತ್ವದಲ್ಲಿ ಲಕ್ಷಕ್ಕೂ ಅಧಿಕ ಲೀ. ನೀರು ಮರು ಬಳಕೆಗೆ ಹೊಸ ಹೆಜ್ಜೆ

Team Udayavani, Jul 12, 2019, 10:28 AM IST

uk-tdy-2..

ಶಿರಸಿ: ಎಂಇಎಸ್‌ ಶಿಕ್ಷಣ ಸಂಸ್ಥೆ ಆವಾರದಲ್ಲಿ ನಿರ್ಮಾಣಗೊಂಡ ಜಲತೊಟ್ಟಿ.

ಶಿರಸಿ: ನೀರಿನ ಬವಣೆಯಿಂದ ವಸತಿ ನಿಲಯಗಳಲ್ಲಿ ತಂಗಿದ್ದ ವಿದ್ಯಾರ್ಥಿನಿಯರಿಗೆ ನೆರವಾಗಲು ಇಲ್ಲಿನ ರೋಟರಿ ಕ್ಲಬ್‌ ನೇತೃತ್ವದಲ್ಲಿ ನೀರುಳಿಕೆ ಹಾಗೂ ನೀರಿಂಗಿಸುವ ಮಾದರಿ ನಿರ್ಮಿಸಲಾಗಿದ್ದು, ಆರು ಲಕ್ಷಕ್ಕೂ ಅಧಿಕ ಲೀಟರ್‌ ನೀರನ್ನು ಹಿಡಿದಿಟ್ಟು ಮರು ಬಳಕೆಗೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಎಂಇಎಸ್‌ ಆಡಳಿತ ಮಂಡಳಿ ಹಾಗೂ ರೋಟರಿ ಕ್ಲಬ್‌ ಪ್ರಮುಖರು, ವಿದ್ಯಾರ್ಥಿನಿಯರ ನಾಲ್ಕು ಹಾಸ್ಟೇಲ್ಗಳಲ್ಲಿ ಐದು ಸಾವಿರ ಲೀ.ಗಳಷ್ಟು ಸಾಮರ್ಥ್ಯದ ಟ್ಯಾಂಕ್‌ ಮೂಲಕ ನೀರು ಸಂಗ್ರಹಿಸಲಾಗುತ್ತಿದೆ. ಪ್ರತೀ ಹಾಸ್ಟೇಲ್ನ ಮೇಲ್ಛಾವಣಿ ನೀರನ್ನು ಸೋಸಿ ಸ್ವಚ್ಛಗೊಳಿಸುವ ಮೂಲಕ ಮೂವತ್ತಕ್ಕೂ ಅಧಿಕ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಲಾಗುತ್ತಿದೆ. ಅದರಲ್ಲಿ ಎಂಟು ದಿನದ ಮಳೆಗೇ ಅಷ್ಟೂ ಟ್ಯಾಂಕ್‌ಗಳು ತಂಬಿದ್ದು, ಹೆಚ್ಚುವರಿ ನೀರು ಬಟ್ಟೆ ತೊಳೆಯಲು, ಸ್ವಚ್ಛಗೊಳಿಸಲು, ಸ್ನಾನಕ್ಕೆ ಬಳಸಲು ಪಂಪ್‌ ಮಾಡಿಕೊಳ್ಳುತ್ತಿದ್ದಾರೆ. ಎರಡು ವರ್ಷ ಆದರೂ ಹಾಳಾಗದ ಗುಣಮಟ್ಟದಲ್ಲಿ ನೀರಿನ ಸಂಗ್ರಹಣೆ ಮಾಡಲಾಗಿದ್ದು, ಹೆಚ್ಚುಳಿದ ನೀರೂ ಭೂಮಿಗೆ ಇಂಗುವ ವ್ಯವಸ್ಥೆ ಮಾಡಲಾಗಿದೆ.

ಸುಮಾರು 130 ಟ್ಯಾಂಕ್‌ಗಳಿಂದ ಆರುವರೆ ಲಕ್ಷ ಲೀಟರ್‌ ಸಂಗ್ರಹಣೆಯ ಸಾಮರ್ಥ್ಯ ಈ ನಾಲ್ಕೂ ವಸತಿ ನಿಲಯಗಳಿಂದ ಸಾಧ್ಯವಾಗಿದೆ. ಸುಮಾರು 550 ವಿದ್ಯಾರ್ಥಿನೀಯರು ಇದರ ಲಾಭ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಬೇಸಿಗೆಯ ಜಲದ ಬವಣೆ ತಪ್ಪಿಸಿ, ನೀರನ್ನು ಟ್ಯಾಂಕರ್‌ ಮೂಲಕ ತರಿಸಿಕೊಳ್ಳುವುದು ತಪ್ಪಲಿದೆ. ಎಂಇಎಸ್‌ ಪ್ರಾಂಗಣ ಎರಡೂ ಕಡೆ ತಗ್ಗಿನಿಂದ ಕೂಡಿದ್ದು, ಇದರ ಒಂದೇ ಒಂದು ಹನಿ ನೀರು ಹೊರಗೆ ಹೋಗದಂತೆ ಮೂರು ದೊಡ್ಡ ಕೆರೆಗಳನ್ನೂ ನಿರ್ಮಿಸಲಾಗಿದೆ. ಇದರಲ್ಲಿ ಸುಮಾರು 40 ಲಕ್ಷ ಲೀ. ನೀರು ಸಂಗ್ರಹವಾಗಲಿದೆ.

ಈ ಜಲ ಕೋಯ್ಲು ಕೇವಲ ಎಂಇಎಸ್‌ ಕ್ಯಾಂಪಸ್‌ಗೆ ಮಾತ್ರವಲ್ಲ, ಸುತ್ತಲಿನ ಆರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ, ವಸತಿ ಉಳ್ಳವರಿಗೆ ನೆರವಾಗಲಿದೆ. ಅವರ ಬಾವಿಯ ನೀರೂ ಏರಿಕೆ ಆಗಲಿದೆ. ಶಾಂತಿ ನಗರ, ಆದರ್ಶನಗರ, ಗಾಯತ್ರಿ ನಗರ, ಕೆಎಚ್ಬಿ ಕಾಲನಿ, ವಿವೇಕಾನಂದ ನಗರ, ಸಹ್ಯಾದ್ರಿ ಕಾಲನಿಗಳಿಗೂ ಅನುಕೂಲ ಆಗಲಿದೆ. ಇ ಯೋಜನೆಗೆ ಸುಮಾರು 58 ಲಕ್ಷ ರೂ. ತಗುಲಿದ್ದು, ಎಂಇಎಸ್‌ ಶಿಕ್ಷಣ ಸಂಸ್ಥೆ ತನ್ನ ಪಾಲಾಗಿ 10 ಲಕ್ಷ ರೂ. ನೀಡಿದೆ. ರೋಟರಿ ಇಂಟರ್‌ನ್ಯಾಶನಲ್, ಡಾ| ವಸಂತ ಪ್ರಭು, ರೋಟರಿ ಸದಸ್ಯರು, ರೋಟರಿ ಸೆಂಟ್ರಲ್ ಚೆಸ್ಟರ್‌ ಕೌಂಟಿ ಇತರರು ನೆರವಾಗಿದ್ದಾರೆ. ಭೂ ವಿಜ್ಞಾನಿ ಡಾ| ಜಿ.ವಿ.ಹೆಗಡೆ, ಅರುಣ ನಾಯಕ ಸೇರಿದಂತೆ ಇತರರ ನೆರವು ಸಹಕಾರ ಇದೆ. ಈ ಮೂಲಕ ರೋಟರಿ ಕ್ಲಬ್‌ ಶಿಕ್ಷಣ ಸಂಸ್ಥೆ ಮೂಲಕವೂ ಜಲ ಜಾಗೃತಿಗೆ ನಾಂದಿ ಹಾಡಿದೆ.

ರೋಟರಿ ಅಧ್ಯಕ್ಷ ಪ್ರವೀಣ ಕಾಮತ್‌, ನೂತನ ಅಧ್ಯಕ್ಷ ಡಾ| ಶಿವರಾಮ ಕೆ.ವಿ, ಎಂಇಎಸ್‌ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ, ಶ್ಯಾಂಸುಂದರ ಭಟ್ಟ, ಪಾಂಡುರಂಗ ಪೈ ಸೇರಿದಂತೆ ಇತರರು ಇದ್ದರು.

ಜು.14ರ ಬೆಳಗ್ಗೆ 11ಕ್ಕೆ ಈ ಜಲಕೊಯ್ಲಿನ ಘಟಕದ ಲೋಕಾರ್ಪಣೆ ಆಗಲಿದೆ. ಡಾ| ವಸಂತ ಪ್ರಭು, ಆನಂದ ಕುಲಕರ್ಣಿ, ಪ್ರಾಣೇಶ ಜಹಗೀರದಾರ್‌, ನಿತಿನ್‌ ಕಾಸರಕೋಡ ಇತರರು ಪಾಲ್ಗೊಳ್ಳಲಿದ್ದಾರೆ.

•ಎರಡು ವರ್ಷ ಆದರೂ ಹಾಳಾಗದ ಗುಣಮಟ್ಟದಲ್ಲಿ ನೀರಿನ ಸಂಗ್ರಹಣೆ

•ಸುಮಾರು 130 ಟ್ಯಾಂಕ್‌ಗಳಿಂದ ಆರೂವರೆ ಲಕ್ಷ ಲೀಟರ್‌ ಸಂಗ್ರಹ

•ನಾಲ್ಕು ಹಾಸ್ಟೇಲ್ಗಳಲ್ಲಿ ಐದು ಸಾವಿರ ಲೀ.ಗಳಷ್ಟು ಸಾಮರ್ಥ್ಯದ ಟ್ಯಾಂಕ್‌ ನಿರ್ಮಾಣ

•ವಸತಿ ನಿಲಯದ ವಿದ್ಯಾರ್ಥಿಗಳ ಬಟ್ಟೆ ತೊಳೆಯಲು, ಸ್ವಚ್ಛಗೊಳಿಸಲು, ಸ್ನಾನಕ್ಕೆ ಬಳಕೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.