ನಾನು ಯಾವುದೇ ಹುದ್ದೆಗೆ ಅಂಟಿಕೊಂಡವನಲ್ಲ: ಭೀಮಣ್ಣ ನಾಯ್ಕ
Team Udayavani, Apr 14, 2022, 3:27 PM IST
ಶಿರಸಿ: ನಾನು ಯಾವುದೇ ಹುದ್ದೆಗೆ ಅಂಟಿಕೊಂಡವನಲ್ಲ. ಪಕ್ಷದಲ್ಲಿ ಕೆಲಸ ಮಾಡಿದವರನ್ನು ಅಂಥ ಹುದ್ದೆಗಳಲ್ಲಿ ನೋಡುವಂಥವನು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಪ್ರತಿಪಾದಿಸಿದ್ದಾರೆ.
‘ಉದಯವಾಣಿ’ಯೊಂದಿದೆ ಮಾತನಾಡಿದ ಅವರು, ಪಕ್ಷದಲ್ಲಿ ಸಾಮಾಜಿಕ ನ್ಯಾಯ ನೋಡಿ ಹುದ್ದೆ ಕೊಡಬೇಕು. ಜಿಲ್ಲಾ ವರಿಷ್ಠರ, ಹಿರಿಯರ, ಪದಾಧಿಕಾರಿಗಳ ಜೊತೆ ಸಮಾಲೋಚಿಸಿ ಎಲ್ಲ ವರ್ಗದವರ ವಿಶ್ವಾಸ ಪಡೆದು ಕೆಲಸ ಮಾಡಬೇಕು. ಪಕ್ಷದಲ್ಲಿ ಕೆಲಸ ಮಾಡಿದ ಹಿರಿಯರಿಗೆ, ಸಕ್ರಿಯರಿಗೆ ಹುದ್ದೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಪತ್ರ ಬರೆಯುವುದಾಗಿ ಹೇಳಿದರು.
ನನಗೆ ನನ್ನನ್ನೂ ಕೇಳದೇ ಕೆಪಿಸಿಸಿ ಕಾರ್ಯದರ್ಶಿ ಹುದ್ದೆ ನೀಡಿದ್ದಾರೆ. ಇದರ ಬಗ್ಗೆ ಅಸಮಧಾನ ಇಲ್ಲ. ಆದರೆ, ಕೆಲಸ ಮಾಡಿದ ಬ್ರಾಹ್ಮಣ, ಮರಾಠ ವರ್ಗಕ್ಕೂ ನ್ಯಾಯ ಕೊಡಬೇಕಿತ್ತು. ಕೇವಲ ಒಂದೇ ಕಡೆ ನೀಡುವುದು ಸರಿಯಲ್ಲ ಎಂದರು.
ನಾನು ಜನ ಸಾಮಾನ್ಯರ ಜೊತೆ ಬೆಳೆದವ. ಜಿಲ್ಲಾ ಪಂಚಾಯತ್ನಲ್ಲೂ ಕೆಲಸ ಮಾಡಿದ್ದೇನೆ. ಪಕ್ಷದ ಹುದ್ದೆ ಇರಲಿ, ಬಿಡಲಿ ಸದಾ ಜನರ ಜೊತೆ ಕೆಲಸ ಮಾಡುವೆ. ನಾನು ಈ ಜಾಗದಲ್ಲಿ ಕುಳಿತು ಕೊಳ್ಳುವದಕ್ಕಿಂತ ಇನ್ನೊಬ್ಬನ್ನು ನೋಡಲು ಆಸೆ ಪಡುವೆ, ಸ್ವಾರ್ಥದ ರಾಜಕಾರಣಿ ನಾನಲ್ಲ ಎಂದರು.
ಇದನ್ನೂ ಓದಿ:ಬ್ಯಾರಿಗೇಟ್ ಹತ್ತಿ ಪೊಲೀಸರ ಮೇಲೆ ಬಿದ್ದ ಡಿ.ಕೆ. ಶಿವಕುಮಾರ್
ಪಕ್ಷದ ಬೆಳವಣಿಗೆಗೆ, ಕಾರ್ಯಕರ್ತರ ಪ್ರಶ್ನೆಗೆ ಉತ್ತರ ಕೊಡುವಂತಿದ್ದರೆ ಎಲ್ಲರೂ ಕೈ ಜೋಡಿಸುತ್ತಾರೆ. ಜಿಲ್ಲೆಯಲ್ಲಿ ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರಾಗಿದ್ದರು, ವಿವಿಧ ಹಂತದ ಜನಪ್ರತಿನಿಧಿಗಳೂ ಇದ್ದಾರೆ. ಎಲ್ಲರ ವಿಶ್ವಾಸ ಪಡೆದು ನೇಮಕಾತಿ ಆದರೆ ಪಕ್ಷದ ಬಲವರ್ಧನೆ ಹೆಚ್ಚು ಆಗುತ್ತದೆ ಎಂದರು.
ಬದಲಾವಣೆ V/S ಮುಂದುವರಿಕೆ!
ಜಿಲ್ಲಾ ಕಾಂಗ್ರೆಸ್ ನ್ನು ಕಳೆದ ಮೂರು ಅವಧಿಗೂ ಹೆಚ್ಚುಕಾಲ ಸಕ್ರೀಯವಾಗಿ ಮುನ್ನಡೆಸಿಕೊಂಡು ಬಂದ ಜಿಲ್ಲಾ ಅಧ್ಯಕ್ಷ ಭೀಮಣ್ಣ ಅವರ ಬದಲಿಸಿ ಆ ಸ್ಥಾನಕ್ಕೆ ವೆಂಕಟೇಶ ಹೆಗಡೆ ಹೊಸಬಾಳೆ, ಸಾಯಿ ಗಾಂವಕರ್, ಶಿವಾನಂದ ಕಡತೋಕ, ರವೀಂದ್ರ ನಾಯ್ಕ ಹೆಸರು ಪ್ರಸ್ತಾಪ ಇದೆ. ಇನ್ನೊಂದು ಮೂಲದ ಪ್ರಕಾರ ಬರಲಿರುವುದು ತಾ.ಪಂ., ಜಿ.ಪಂ, ಶಾಸನ ಸಭೆಗಳ ಚುನಾವಣೆ ಆಗಿರುವದರಿಂದ ಅನುಭವಿ ಭೀಮಣ್ಣ ಅವರನ್ನೇ ಮುಂದುವರಿಸುತ್ತಾರೆ ಎಂಬ ಮಾಹಿತಿ ಕೂಡ ಇದೆ. ಆದರೆ, ರಾಜ್ಯ ಕಾರ್ಯದರ್ಶಿ ನೀಡಿದ್ದೇ ಬದಲಾಯಿಸಲು ಎಂಬ ಮಾತೂ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voting ಹದಿನೈದು ನಿಮಿಷ ಕಾದು ಮತ ಹಾಕಿದ ಅನಂತಕುಮಾರ್ ಹೆಗಡೆ!
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್ ಮಶೀನಾ: ರಮಾನಾಥ ರೈ
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
MUST WATCH
ಹೊಸ ಸೇರ್ಪಡೆ
Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್
CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ
Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ