ವಿಕಲಚೇತನರಿಗಿನ್ನು ತಾಲೂಕಲ್ಲೇ ಐಡಿ


Team Udayavani, Oct 16, 2019, 2:46 PM IST

uk-tdy-1

ಶಿರಸಿ: ವಿಕಲಚೇತನರ ಗುರುತಿನ ಚೀಟಿ ನೀಡಿಕೆ ಸಂಬಂಧ ಇನ್ನು ಮುಂದೆ ತಾಲೂಕು ವೈದ್ಯಾಧಿಕಾರಿಗಳೇ ದೃಢೀಕರಿಸಿ ಯುನಿಕ್‌ ಐಡಿ ನೀಡುವಂತೆ ಹತ್ತು ದಿನಗಳಲ್ಲಿ ಸರಕಾರದ ಆದೇಶ ಬರಲಿದೆ ಎಂದು ರಾಜ್ಯ ವಿಕಲಚೇತನರ ಸಬಲೀಕರಣ ಇಲಾಖೆ ನಿರ್ದೇಶಕಿ ಕೆ.ಲೀಲಾವತಿ ತಿಳಿಸಿದರು.

ಅವರು ನಗರದ ತಾಪಂನಲ್ಲಿ ವಿಕಲಚೇತನರ ಜೊತೆ ಸಮಾಲೋಚನೆ ನಡಸಿ, ಈವರೆಗೆ ಗುರುತಿನ ಚೀಟಿ ನೀಡುವ ಅನುಮತಿ ಜಿಲ್ಲಾ ಕೇಂದ್ರ ವೈದ್ಯಾಧಿಕಾರಿಗಳಿಂದ ಆಗಬೇಕಿತ್ತು. ಆದರೆ, ಇದರಿಂದ ಅನೇಕ ಗುಡ್ಡಗಾಡು ಜಿಲ್ಲೆಗಳಿಂದ ಸಮಸ್ಯೆ ಆಗುತ್ತಿದ್ದವು. ಇದನ್ನು ತಪ್ಪಿಸಲು ತಾಲೂಕು ಹಂತದ ವೈದ್ಯರಿಗೇ ಈ ಅವಕಾಶ ನೀಡುವ ಬಗ್ಗೆ ಸರಕಾರ ಚಿಂತಿಸಿದೆ ಎಂದರು.

ರಾಜ್ಯದಲ್ಲಿ ಯುನಿಕ್‌ ಐಡಿ 9,72,305 ಬುದ್ದಿಮಾಂದ್ಯ ಹಾಗೂ ಅಂಗವಿಕಲರಿಗೆ ಕೊಡಬೇಕಿತ್ತು. ಆದರೆ, ಈವರೆಗೆ ಆಗಿದ್ದು ಕೇವಲ 53 ಸಾವಿರ ಜನರಿಗೆ. ಈ ಪ್ರಕ್ರಿಯೆ ವೇಗಗೊಳಿಸಲು ಸರಕಾರ ತಾಲೂಕು ಹಂತದಲ್ಲಿ ದಿನಕ್ಕೆ ಕನಿಷ್ಠ 20 ಜನರಿಗಾದರೂ ಮಾನ್ಯತೆ ಮಾಡಬೇಕು ಎಂದು ಸೂಚಿಸಿದೆ ಎಂದ ಲೀಲಾವತಿ, ಅಂತಾರಾಜ್ಯದ ಗಡಿಗಳಲ್ಲಿ ಎರಡೂ ರಾಜ್ಯದ ಗುರುತಿನ ಚೀಟಿ ಪಡೆದ ಉದಾಹರಣೆಗಳೂ ಇವೆ. ಈ ಕಾರಣದಿಂದ ಎಲ್ಲೇ ಇದ್ದರೂ ಒಂದೇ ಯುನಿಕ್‌ ಐಡಿ ಇರಬೇಕು ಎಂದು ಕೇಂದ್ರ ಸರಕಾರ ಸೂಚಿಸಿದೆ ಎಂದರು.

ಸ್ಥಳೀಯ ಸಂಸ್ಥೆಗಳು ಮೀಸಲಿಡಬೇಕಾದ ವಿಕಲಚೇತನರ ಅನುದಾನದ ಮೊತ್ತವನ್ನು ಸದ್ಬಳಕೆ ಮಾಡಿಕೊಳ್ಳಲು ಹಗೂ ಆಯಾ ವರ್ಷದ ಹಣ ಆಯಾ ವರ್ಷವೇ ಬಳಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಜೊತೆ ಸಮಾಲೋಚನೆ ನಡೆಸುತ್ತಿರುವುದಾಗಿ ಕೂಡ ತಿಳಿಸಿದರು.

ಸರಕಾರದ ಸೂಚನೆ ಪ್ರಕಾರ 21 ಬಗೆಯ ಅಂಗವೈಕಲ್ಯತೆಯನ್ನು ಆಯಾ ಪ್ರಮಾಣದಲ್ಲಿ ಸೂಚಿಸಲಾಗಿದೆ. ಪಾರ್ಶ್ವವಾಯು, ಅರ್ಧಾಂಗವಾತ ಇದರೊಳಗೆ ಸೇರಿಲ್ಲ ಎಂದ ಅವರು, ಬಿಪಿಎಲ್‌ ಕಾರ್ಡ್‌ ಸೌಲಭ್ಯದಾರರಿಗೆ ಸಿಗುವ ವಿಶೇಷ ಸವಲತ್ತು ಎಪಿಎಲ್‌ ಕಾರ್ಡ್‌ ಉಳ್ಳವರರಿಗೂ ಸಿಗುವಂತೆ ಆಗಬೇಕು. ವಿಲಕಚೇತನ ಮಕ್ಕಳನ್ನು ಸ್ವತಂತ್ರವಾಗಿಸುವ ಪ್ರಯತ್ನ ಮಾಡಬೇಕು. ಯಾರಾದರೂ ಪ್ರಸ್ತಾವನೆ ಸಲ್ಲಿಸಿದರೆ ಖಂಡಿತ ಸರಕಾರಕ್ಕೆ ಈ ಬಗ್ಗೆ ಶಿಫಾರಸ್ಸೂ ಮಾಡುವುದಾಗಿ ಹೇಳಿದರು.

ಉತ್ತರ ಕನ್ನಡ ಸೇರಿದಂತೆ ಹಲವಡೆ ಧೂಳು ಹಿಡಿದ ತ್ರಿಚಕ್ರ ಗಾಡಿಗಳನ್ನು ತಕ್ಷಣ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲು ಕೂಡ ಸೂಚನೆ ನೀಡುವುದಾಗಿ ತಿಳಿಸಿದರು.

ಇಲಾಖೆ ಉಪ ನಿರ್ದೇಶಕ ಪ್ರವೀಣ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜೇಂದ್ರ ಬೇಕಲ್‌, ತಹಶೀಲ್ದಾರ್‌ ಎಂ.ಆರ್‌. ಕುಲಕರ್ಣಿ, ತಾಲೂಕು ಅಧಿಕಾರಿ ಡಿ.ಎಂ. ಭಟ್ಟ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.