ಕಲಾ ಪ್ರಪಂಚದ ಪೂರಕ ಕಾರ್ಯವಾಗಲಿ:ನಾಗಾಭರಣ


Team Udayavani, Feb 3, 2019, 11:33 AM IST

3-february-23.jpg

ಹೊನ್ನಾವರ: ಮನವನ್ನು ವಿಕಾಸಗೊಳಿಸುವ, ಉಲ್ಲಸಿತಗೊಳಿಸುವ, ವಾದಿ ಸಂವಾದಿಗಳಿಂದ ಹೊರತಾದ ಆತ್ಮವಾದಿಯಾಗಿರುವ ಕಲಾ ಮಾಧ್ಯಮವನ್ನು ಶೈಕ್ಷಣಿಕ ವ್ಯವಸ್ಥೆಯಿಂದ ದೂರವಿಟ್ಟಷ್ಟೂ ಸಾಮಾಜಿಕ ವ್ಯವಸ್ಥೆಯಲ್ಲಿ ದೊಡ್ಡ ಕಂದಕ ಸೃಷ್ಟಿಯಾಗುತ್ತಿದೆ ಎಂದು ಚಿತ್ರ ನಿರ್ದೇಶಕ ಟಿ.ಎಸ್‌. ನಾಗಾಭರಣ ಕಳವಳ ವ್ಯಕ್ತಪಡಿಸಿದರು.

ತಾಲೂಕಿನ ಗುಣವಂತೆಯಲ್ಲಿ ಕೆರೆಮನೆ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಆಶ್ರಯದಲ್ಲಿ 10ನೇ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಉದ್ಘಾಟಿಸಿದ ಅವರು, ಪ್ರತಿಯೊಂದೂ ಮಾರುಕಟ್ಟೆ ಸರಕಾಗಿರುವ ಇಂದಿನ ದಿನಗಳಲ್ಲಿ ಕಲಾ ಮಾಧ್ಯಮ ನಮ್ಮದನ್ನಾಗಿಟ್ಟುಕೊಳ್ಳುವ, ನಮ್ಮತನವನ್ನು ಉಳಿಸಿಕೊಳ್ಳುವ ಕಾರ್ಯವಾಗಬೇಕು ಎಂದರು. ತಂತ್ರಜ್ಞಾನದ ಈದಿನಗಳ ಎಲ್ಲ ಕಲೆ ಕೌಶಲ್ಯವನ್ನು ನುಂಗಿಹಾಕುವಲ್ಲಿ ದೃಶ್ಯ ಮಾಧ್ಯಮ ಬ್ರಹ್ಮರಾಕ್ಷಸನಂತಾಗಿದೆ. ಇದರಿಂದ ಪಾರಾಘಳೂ ಯಂತ್ರ ಸಂಬಂಧಿತ ಕ್ರಿಯೆಯತ್ತ ಮುಖ ಮಾಡದೇ ಮನುಷ್ಯ ಸಂಬಂಧಿತ ಕಲೆಗಳತ್ತ ಮುಖಮಾಡಬೇಕು. ನಮ್ಮತನವನ್ನು ನಾವು ಉಳಿಸಿಕೊಳ್ಳುವತ್ತ ಗ್ಲೋಬಲ್‌ ಆಗಬೇಕು ಎಂದರು. ಯಕ್ಷಗಾನದ ಸೌಂದರ್ಯವನ್ನು ನನ್ನ ಮನಸ್ಸಿನ ಆಳದಲ್ಲಿ ತುಂಬಿದವರು ಕೆರೆಮನೆ ಶಂಭು ಹೆಗಡೆ ಮತ್ತು ಚಿಟ್ಟಾಣಿ ರಾಮಚಂದ್ರ ಹೆಗಡೆಯವರು. ಇಂತಹ ಸ್ಪೂರ್ತಿದಾತರ ಸ್ಪೂರ್ತಿಯ ಸೆಲೆ ತನ್ನ ಸಾಧನೆಗೆ ಪ್ರೇರಣೆ ಎಂದು ಸ್ಮರಿಸಿದರು.

ಕಲಾಪ್ರಪಂಚದ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮವನ್ನು ಕೆರೆಮನೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಸಂಯೋಜಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮೂಲಸತ್ವವನ್ನು ಬಿಟ್ಟು ಹಣೆಪಟ್ಟಿ ಇಡುತ್ತೇವೆ. ಯಾವ ಹಣೆಪಟ್ಟಿಗೂ ಒಳಪಡದೇ ನಮ್ಮ ಮನಸ್ಸನ್ನು ಮುಟ್ಟುವ ಕಲೆ ಜಾನಪದ ಕಲಾ ಮಾಧ್ಯಮ. ಇದು ಎಲ್ಲದರ ಜೊತೆಗೆ ಮನುಷ್ಯನನ್ನು ಮನುಷ್ಯನನ್ನಾಗಿ ಕಾಣುವ ವಾತಾವರಣ ಸೃಷ್ಠಿಸುತ್ತದೆ ಎಂದರು.

ಯಕ್ಷಗಾನ ಕಲಾವಿದ ಡಾ| ಪ್ರಭಾಕರ ಜೋಶಿ ಅಧ್ಯಕ್ಷತೆ ವಹಿಸಿ, ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ದೇಶದ ಮಾದರೀಯ ಒಂದು ಪ್ರಕಲ್ಪ ಎಂದರು. ಮುಖ್ಯ ಅತಿಥಿ ಪತ್ರಕರ್ತ, ಅಂಕಣಕಾರ ಜೋಗಿ ಮಾತನಾಡಿ ನಾವೇ ಸೃಷ್ಠಿಸಿಕೊಂಡ ಒತ್ತಡಗಳ ಚಕ್ರವ್ಯೂಹದಿಂದ ಹೇಗೆ ಹೊರಬರಬೇಕು ಎಂಬ ಮಾರ್ಗ ಹೇಳಿಕೊಡಲು ಕಲೆ ಬೇಕು ಎಂದರು. ಬೆಂಗಳೂರಿನ ಉದ್ಯಮಿ ಆನಂದ ಭಟ್ ಮಾತನಾಡಿ ಯಕ್ಷಗಾನ ಭಾರತೀಯ ಸಂಸ್ಕೃತಿಯ ರಾಯಭಾರಿ. ರಾಮಾಯಣ, ಮಹಾಭಾರತ ನಮ್ಮ ಸಂಸ್ಕೃತಿಯ ಬುನಾದಿ. ಇಂತಹ ಮಹೋನ್ನತ ಆದರ್ಶಗಳನ್ನು ಜನತೆಗೆ ತಲುಪಿಸುವಲ್ಲಿ ಯಕ್ಷಗಾನ ಕಲೆ ಒಂದು ಅರ್ಥಪೂರ್ಣ ಮಾಧ್ಯಮವಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ದೇವಿ ಮಹಾಬಲ ಗೌಡ ಉಪಸ್ಥಿತರಿದ್ದರು. ಯಕ್ಷಗಾನ ಡಿವಿಡಿಯನ್ನು ಬಿಡುಗಡೆಗೊಳಿಸಲಾಯಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.