ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!


Team Udayavani, Oct 24, 2021, 5:38 PM IST

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ:  ಕಾಳಿ ನದಿಯ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನೋರ್ವನನ್ನು ಮೊಸಳೆಯೊಂದು ಎಳೆದೊಯ್ದು ಹೋದ ಘಟನೆ ನಗರದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಕಾಳಿ ನದಿಯ ದಂಡೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ನಗರದ ಹಳಿಯಾಳ ರಸ್ತೆಯ ಅಲೈಡ್ ಪ್ರದೇಶದ ನಿವಾಸಿಯಾಗಿರುವ ಮೆಹಮೂದ್ ಅಲಿ ಮಿಯಾ ಗುಲ್ಬರ್ಗ ಎಂಬವರ ಮಗನಾದ 15 ವರ್ಷದ ಬಾಲಕ ಮೊಹಿನ್ ಮೆಹಮೂದ್ ಅಲಿ ಮಿಯಾ ಗುಲ್ಬರ್ಗ ಎಂಬತಾನನ್ನು ಮೊಸಳೆ ಎಳೆದೊಯ್ದುಕೊಂಡು ಹೋದ ಘಟನೆ ನಡೆದಿದೆ.

ಈ ಘಟನೆ ಕಾಡ್ಗಿಚ್ಚಿನಂತೆ ಹರಡಿದ್ದು, ನದಿಯ ಹತ್ತಿರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರ ತೊಡಗಿದ್ದಾರೆ. ಈ ಘಟನೆ ನಡೆದ ತಕ್ಷಣವೆ ಅಲ್ಲೆ ಹತ್ತಿರದ ನಿವಾಸಿಯಾಗಿರುವ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಅವರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಪೊಲೀಸ್ ವೃತ್ತ ನಿರೀಕ್ಷಕರಾದ ಪ್ರಭು ಗಂಗನಹಳ್ಳಿ, ಗ್ರಾಮೀಣ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ ಹಾಗೂ ಪೊಲೀಸ್ ಸಿಬ್ಬಂದಿಗಳು, ವಲಯಾರಣ್ಯಾಧಿಕಾರಿ ವಿನಯ್ ಭಟ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಸ್ಥಳೀಯರು ಎರಡ್ಮೂರು ತೆಪ್ಪದ ಮೂಲಕ ಬಾಲಕನ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇತ್ತ ಜಂಗಲ್ ಲಾಡ್ಜಸ್ ಹಾಗೂ ಗಣೇಶಗುಡಿ ರ್ಯಾಪ್ಟಿಂಗಿನವರಿಗೆ ಮಾಹಿತಿ ನೀಡಿ ರ್ಯಾಪ್ಟ್ ಜೊತೆಗೆ ಸ್ಥಳಕ್ಕೆ ಕರೆಸಿ, ಅವರಿಂದಲೂ ಪತ್ತೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಪ್ರವಾಸೋದ್ಯಮಿಗಳಾದ ಸ್ಟ್ಯಾನ್ಲಿ, ರವಿ ನಾಯಕ ಮೊದಲಾದವರ ತಂಡ ರ್ಯಾಪ್ಟ್ ಮೂಲಕ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸ್ಥಳದಲ್ಲಿ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ, ನಗರ ಸಭಾ ಸದಸ್ಯರುಗಳಾದ ಪ್ರೀತಿ ನಾಯರ್, ದಶರಥ ಬಂಡಿವಡ್ಡರ ಹಾಗೂ ನಗರದ ವಿವಿಧ ಸಂಘಟನೆಗಳ ಮುಖಂಡರುಗಳು ಮೊಕ್ಕಂ ಹೂಡಿದ್ದಾರೆ. ಈಗಾಗಲೆ ಗಣೇಶಗುಡಿ ಕೆಪಿಸಿಯವರಿಗೆ ಮಾಹಿತಿ ನೀಡಿ ನೀರು ಬಿಡುವುದನ್ನು ಸ್ಥಗಿತಗೊಳಿಸಲಾಗಿದೆ. ಸಂಜೆ ನಾಲ್ಕುವರೆ ಘಂಟೆ ಸುಮಾರಿಗೆ ಎರಡು ಸಲ ಬಾಲಕನನ್ನು ಮೇಲಕ್ಕೆತ್ತಿ ನೀರಿನ ಕೆಳಗಡೆ ಮೊಸಳೆ ಹೋಗಿರುವುದು ಕಂಡು ಬಂದಿದೆ. ಇದೀಗ ಈ ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಇದೀಗ ಹಳಿಯಾಳ ರಸ್ತೆ, ಅಲೈಡ್ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ.

ನಗರದಲ್ಲಿ ಮೊದಲ ಪ್ರಕರಣ :

ಮೊಸಳೆ ಬಾಲಕನನ್ನು ಎಳೆದುಕೊಂಡು ಹೋಗಿರುವುದು ನಗರದಲ್ಲಿ ಇದು ಮೊದಲ ಪ್ರಕರಣವಾಗಿ ದಾಖಲಾಗಿದೆ. ಮಾಹಿತಿಯ ಪ್ರಕಾರ ಮೊಸಳೆ ಈವರೇಗೆ ನರಬಲಿಯನ್ನು ಪಡೆದುಕೊಂಡಿರಲಿಲ್ಲ. ಮೊಸಳೆ ಜೀವಂತವಾಗಿ ಯಾವುದನ್ನು ತಿನ್ನುವುದಿಲ್ಲ. ಕೊಳೆತ ನಂತರದಲ್ಲಿ ತಿನ್ನುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಹಾಗಾಗಿ ಬಾಲಕನನ್ನು ಅವಿತಿಟ್ಟರಬಹುದೆಂದು ಶಂಕಿಸಲಾಗಿದೆ.

ಈಗಾಗಲೇ ನಗರ ಸಭೆಯಿಂದ ಬಹಳಷ್ಟು ಬಾರಿ ಇಲ್ಲಿ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ  ಮರುಕಳಿಸದಂತೆ ಅರಣ್ಯ ಇಲಾಖೆಯವರು ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.