ವ್ಯಾಪಕವಾಗಿ ಹೆಚ್ಚುತ್ತಿದೆ ಮಂಗನ ಕಾಯಿಲೆ


Team Udayavani, Mar 24, 2020, 6:55 PM IST

ವ್ಯಾಪಕವಾಗಿ ಹೆಚ್ಚುತ್ತಿದೆ ಮಂಗನ ಕಾಯಿಲೆ

ಸಿದ್ದಾಪುರ: ಕೋವಿಡ್ 19 ಎಲ್ಲೆಡೆಗೂ ವ್ಯಾಪಿಸುತ್ತಿರುವ ಆತಂಕದ ನಡುವೆ ತಾಲೂಕಿನಲ್ಲಿ ಮಂಗನ ಕಾಯಿಲೆ(ಕೆಎಫ್‌ಡಿ) ಉಲ್ಬಣಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ತಾಲೂಕಾಡಳಿತ, ಆರೋಗ್ಯ ಇಲಾಖೆ ಕಾಯಿಲೆ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ತೆಗೆದುಕೊಂಡಿದ್ದರೂ ನಿಯಂತ್ರಣಕ್ಕೆ ಬರದ ವಾಸ್ತವಿಕತೆ ಈಗಿನದು.

ತಾಲೂಕಿನಲ್ಲಿ ಈವರೆಗೆ 64 ಜನರಿಗೆ ರೋಗ ಬಂದಿದ್ದು 7 ಜನ ಮೃತಪಟ್ಟಿದ್ದಾರೆ. ಈ ವರ್ಷ ಇಟಗಿ ಸಮೀಪದ ಮಳಗುಳಿಯ ಭಾಸ್ಕರ ಹೆಗಡೆ ಮೃತಪಟ್ಟಿದ್ದು 15 ಜನರಿಗೆ ಕಾಯಿಲೆ ಕಾಣಿಸಿಕೊಂಡಿದೆ. ಶನಿವಾರ ಮಾದ್ಲಮನೆಯಲ್ಲಿ ಒಬ್ಬಳು ಮಹಿಳೆ ಹಾಗೂ ಇಟಗಿ ಭಾಗದಲ್ಲಿ ಇಬ್ಬರು ಮಹಿಳೆಯರಿಗೆ ಕೆಎಫ್‌ಡಿ ಸೋಂಕು ಕಾಣಿಸಿಕೊಂಡಿದ್ದು ಮೂವರನ್ನೂ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಎಂಟು ಜನರು ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ನಾಲ್ವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯವಾಗಿ ದೊಡ್ಮನೆ ಜಿಪಂನ ಕೆಲವು ನಿರ್ದಿಷ್ಟ ಪ್ರದೇಶದಲ್ಲಿ ಮಂಗಗಳು ಸಾಯುತ್ತಿವೆ. ಇದರಿಂದ ಆ ಭಾಗದ ಜನ ಭಯಪಡುತ್ತಿದ್ದಾರೆ.

ಕಳೆದ ವರ್ಷ ತಾಲೂಕಿನ ಬಾಳಗೋಡ, ವಾಜಗೋಡ ಭಾಗದಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ 23 ಜನ ಬಲಿಯಾಗಿದ್ದಾರೆ ಎಂದು ಅಧಿಕೃತ ದಾಖಲೆ ಹೇಳುತ್ತದೆ. ಈ ವರ್ಷ ಆ ಭಾಗದಲ್ಲಿ ಮಾತ್ರವಲ್ಲದೇ ತ್ಯಾಗಲಿ ಗ್ರಾಪಂ ವ್ಯಾಪ್ತಿಯ ಕಲ್ಗದ್ದೆಯಲ್ಲಿ ಕೂಡ ಮಂಗನ ಕಾಯಿಲೆ ಕಂಡುಬಂದಿದೆ. ರೋಗ ಪೀಡಿತರು ಚಿಕಿತ್ಸೆಯಿಂದ ಗುಣಮುಖರಾಗಿದ್ದರೂ ದೈಹಿಕವಾಗಿ ಅವರು ಮೊದಲಿನಂತೆ ಸಶಕ್ತರಾಗಲು ಸಾಧ್ಯವಾಗಿಲ್ಲ. ಈ ಕಾಯಿಲೆಯಿಂದ ಮೃತಪಟ್ಟವರು ಬಹುತೇಕರು ಯಾವ ಆಸ್ತಿ, ಪಾಸ್ತಿಯಿಲ್ಲದೇ ಕೇವಲ ಕೂಲಿಯಿಂದ ಜೀವನ ಸಾಗಿಸುತ್ತಿದ್ದವರು. ಕಾಯಿಲೆ ಪೀಡಿತರಲ್ಲೂ ಹಲವರು ಹೆಚ್ಚಿನ ಆದಾಯ ತರುವ ಜಮೀನು ಹೊಂದಿರದೇ ಇದ್ದವರು. ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೆ ಅವರಿಗೆ ಜಿಲ್ಲಾಡಳಿತ, ವಿಶೇಷವಾಗಿ ಜಿಲ್ಲಾಧಿಕಾರಿ ಡಾ|ಹರೀಶಕುಮಾರ್‌, ಜಿಪಂ ಸಿಇಒ ಎಂ.ರೋಶನ್‌, ಶಿರಸಿ ಸಹಾಯಕ ಕಮೀಷನರ್‌ ಡಾ| ಈಶ್ವರ್‌ ಉಳ್ಳಾಗಡ್ಡಿ ಸರಕಾರದಿಂದ ಅದಕ್ಕೆ ವಿನಾಯಿತಿ ಕೊಡಿಸಲು ಶ್ರಮಿಸಿದ್ದಾರೆ.

ಪಕ್ಕದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲೂ ಮಂಗನಕಾಯಿಲೆ ಮಿತಿಮೀರಿ ವ್ಯಾಪಿಸಿ ಹಲವರನ್ನು ಬಲಿ ತೆಗೆದುಕೊಂಡಿತ್ತು. ಅಲ್ಲಿನ ಶಾಸಕ ಎಚ್‌. ಹಾಲಪ್ಪ ಕಾಯಿಲೆಯಿಂದ ಮೃತಪಟ್ಟವರಿಗೆ ಸರಕಾರದಿಂದ ಪರಿಹಾರ ಒದಗಿಸುವಲ್ಲಿ ಶ್ರಮಪಟ್ಟು ಯಶಸ್ವಿಯಾಗಿದ್ದರು. ಆದರೆ ಈ ತಾಲೂಕಿನಲ್ಲಿ ಆ ಕುರಿತಾದ ಯಾವ ಸ್ಪಂದನೆಯೂ ಇರಲಿಲ್ಲ. ಇತ್ತೀಚೆಗೆ ರಾಜ್ಯ ವಿಧಾನ ಸಭೆಯಲ್ಲಿ ಶಾಸಕ ಎಚ್‌. ಹಾಲಪ್ಪ ಈ ಕಾಯಿಲೆ ಕುರಿತು ಆರೋಗ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡು ಅಂಕಿ ಅಂಶಗಳೊಂದಿಗೆ ಮಾತನಾಡಿ ಸರ್ಕಾರಕ್ಕೆ ಬಿಸಿಮುಟ್ಟಿಸಿದ ನಂತರದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಈ ತಾಲೂಕಿನಲ್ಲಿ ಮಂಗನಕಾಯಿಲೆಯಿಂದ ಮೃತಪಟ್ಟವರಿಗೆ ಸಮರ್ಪಕ ಆರ್ಥಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.  ಸರಕಾರದಿಂದ ಬಂದ ಆದೇಶದ ಪ್ರಕಾರ ಜಿಲ್ಲಾಧಿಕಾರಿಗಳು ಈಗಾಗಲೇ ಆ ಕುರಿತ ಮಾಹಿತಿಗಳನ್ನು ಒದಗಿಸಿದ್ದಾರೆ ಎನ್ನಲಾಗುತ್ತಿದೆ.

ಅದರಿಂದಾಗಿ ಈ ತಾಲೂಕಿನ ಬಾಧಿತರಿಗೂ ಪರಿಹಾರ ದೊರೆಯುವ ಆಶಾ ಭಾವನೆ ಕಂಡುಬರುತ್ತಿದೆ. ಮಂಗನಕಾಯಿಲೆ ದೃಢಪಟ್ಟವರನ್ನು ಮಣಿಪಾಲ್‌ ಆಸ್ಪತ್ರೆಗೆ ಶೀಘ್ರವಾಗಿ ಕರೆದೊಯ್ಯಲು ಜಿಲ್ಲಾಡಳಿತ ಈಗಾಗಲೇ ಪ್ರತ್ಯೇಕ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಿದ್ದರೂ ಅದಕ್ಕೆ ವೆಂಟಿಲೇಶನ್‌ ವ್ಯವಸ್ಥೆ ಇಲ್ಲದಿರುವ ಕಾರಣ, ಸಾಕಷ್ಟು ದೂರದ ಮಣಿಪಾಲಕ್ಕೆ ರೋಗಿಗಳನ್ನು ಕರೆದೊಯ್ಯುವಷ್ಟರಲ್ಲಿ ಅವರು ತೊಂದರೆ ಅನುಭವಿಸಬೇಕಾಗುತ್ತಿದೆ ಎನ್ನುವ ಅಭಿಪ್ರಾಯ ಸಾರ್ವಜನಿಕರದ್ದು. ಪಕ್ಕದ ಶಿವಮೊಗ್ಗ ಜಿಲ್ಲೆಗೆ ಒದಗಿಸಿದ ಸಮರ್ಪಕ ಆ್ಯಂಬುಲೆನ್ಸ್‌ ಇಲ್ಲಿಗೂ ಒದಗಿಸಬೇಕೆನ್ನುವುದು ಅವರ ಆಗ್ರಹವಾಗಿದೆ.

 

­-ಗಂಗಾಧರ ಕೊಳಗಿ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.