ಮೂಲಸೌಕರ್ಯ ಅಭಿವೃದ್ಧಿಗೆ ಆಗ್ರಹ


Team Udayavani, Jan 15, 2021, 1:45 PM IST

murudeshwarta

ಭಟ್ಕಳ: ಮುರ್ಡೇಶ್ವರ ನಾಕೆಯಿಂದ ದೇವಸ್ಥಾನದವರೆಗಿನ ರಸ್ತೆ ಮಾಡಲಾಗುತ್ತಿದ್ದು ಅದು ಟೆಂಡರ್‌ನಲ್ಲಿ ನಮೂದಿಸಿರುವ ನಮೂನೆಯಲ್ಲಿ ಮಾಡಬೇಕು ಎಂದು ಮುರ್ಡೇಶ್ವರ ನಾಗರಿಕ ಸೇವಾ ಸಮಿತಿ ಆಗ್ರಹಿಸಿದೆ.

ರಸ್ತೆಗೆ ದಾರಿದೀಪಗಳನ್ನು ಹಾಗೂ ಎರಡೂ ಕಡೆಗಳಲ್ಲಿ ಚರಂಡಿ ಮಾಡಬೇಕು. ವಾಹನಗಳಿಗೆ ಅನುಕೂಲವಾಗುವಂತೆ ಸಾಧ್ಯವಾದ ಕಡೆಯಲ್ಲಿ ರಸ್ತೆ ಡಿವೈಡರ್‌ ಅಳವಡಿಸಬೇಕು. ನಾಕೆಯಿಂದ ಮುರ್ಡೇಶ್ವರ ದೇವಸ್ಥಾನದವರೆಗಿನ ರಸ್ತೆ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಆಗುತ್ತಿದ್ದು ಇದರಿಂದ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗುತ್ತಿದ್ದು ಅದನ್ನು ತ್ವರಿತಗತಿಯಿಂದ ಮಾಡಿ ಮುಗಿಸುವಂತಾಗಬೇಕು. ಪೇಟೆ ಮಧ್ಯದಲ್ಲಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಸಂಚಾರಿ ನಿಯಮಗಳನ್ನು ಕ್ರಿಯಾರೂಪಕ್ಕೆ ತರುವ ವ್ಯವಸ್ಥೆ ಆಗಬೇಕು.

ವಾಹನ ಸವಾರರಿಗೆ, ಪ್ರವಾಸಿಗರಿಗೆ ವಾಹನಗಳನ್ನು ನಿಲ್ಲಿಸಲು ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆ ಆಗಬೇಕು. ಪಾರ್ಕಿಂಗ್‌ ಜಾಗದ ಕುರಿತು ಮುರ್ಡೇಶ್ವರ ದ ಕಸ್ಟಮ್‌ ಇಲಾಖೆ, ಬಂದರು ಇಲಾಖೆ, ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಜಾಗಾ ಈಗಾಗಲೇ ಅತಿಕ್ರಮಣವಾಗಿದ್ದು ಅವುಗಳನ್ನು ಗುರುತಿಸಿ ವಶಕ್ಕೆ ಪಡೆದು ಅಲ್ಲಿಯೇ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಿದಲ್ಲಿ ಅನುಕೂಲವಾಗುವುದು.

ಮುರ್ಡೇಶ್ವರ ಮಧ್ಯಭಾಗದಲ್ಲಿ ಜನಸಂಚಾರಕ್ಕೆ ಅನುಕೂಲವಾಗುವಂತೆ ನಿಯಮಾವಳಿಗಳನ್ನು ರೂಪಿಸಲು ಸಂಬಂಧಿತ ಇಲಾಖೆಗಳಿಗೆ ಹಾಗೂ ಪೊಲೀಸ್‌ ಇಲಾಖೆಗಳಿಗೆ ಮಾರ್ಗದರ್ಶನ ನೀಡಬೇಕು. ಬಸ್ತಿ-ಮುಡೇìಶ್ವರ ಕೂಡುವ ರಸ್ತೆಯಲ್ಲಿ ವಾಹನಗ ಓಡಾಟಕ್ಕೆ ತೀವ್ರ ತೊಂದರೆ ಇದ್ದು ಅದನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಸುಗಮ ಸಂಚಾರಕ್ಕೆ ಹಾಗೂ ಬಸ್ತಿ ಮೂಲಕ ಬರುವ ವಾಹನಗಳಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು. ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಮುರ್ಡೇಶ್ವರ ಮೂಲಭೂತ ಸೌಕರ್ಯಗಳ ಕೊರತೆ ವಿಪರೀತವಾಗಿದ್ದು ಪ್ರವಾಸಿಗರು ಮುರ್ಡೇಶ್ವರ ಕ್ಕೆ ಬಂದರೆ ಒಂದೂ ಕೂಡಾ ಶೌಚಾಲಯ ಇಲ್ಲವಾದ್ದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಇದನ್ನೂ ಓದಿ:ಪೊಲೀಸ್‌ ಪಡೆಯಿಂದ ಹೆಲ್ಮೆಟ್‌ ಜಾಗೃತಿ

ಅಲ್ಲದೇ ಕುಡಿಯುವ ನೀರಿಗಾಗಿ ತೊಂದರೆ ಪಡುವ ಪರಿಸ್ಥಿತಿ ಇದ್ದು ಗ್ರಾಪಂ ಮೂಲಕ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಅವುಗಳ ನಿರ್ವಹಣೆಗೆ ಕೂಡಾ ಸರಿಯಾದ ವ್ಯವಸ್ಥೆ ಮಾಡಬೇಕು. ಸ್ವತ್ಛತಾ ವ್ಯವಸ್ಥೆಗೆ ನಿಯಮಾವಳಿ ರೂಪಿಸಿ ಕ್ರಮಕೈಗೊಳ್ಳಬೇಕು. ವಾಹನಗಳನ್ನು ರಸ್ತೆ ಪಕ್ಕದಲ್ಲಿಯೇ ಪಾರ್ಕಿಂಗ್‌ ಮಾಡುವುದರಿಂದ ಬೇರೆ ವಾಹನ ಸಂಚಾರಕ್ಕೆ ಹಾಗೂ ನಾಗರಿಕರಿಗೆ ತೊಂದರೆಯಾಗುತ್ತಿದ್ದು ಅವುಗಳನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಲಾಗದೆ. ಮುರ್ಡೇಶ್ವರ ಬೀಚ್‌ ಭಾಗದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳನ್ನು ತ್ವರಿತವಾಗಿ ನಿಯಂತ್ರಿಸಬೇಕು ಹಾಗೂ ಅಲ್ಲಿ ವ್ಯವಸ್ಥಿತವಾಗಿ ವ್ಯಾಪಾರ ವಹಿವಾಟಿಗೆ ಸರಕಾರದಿಂದಲೇ ಅಂಗಡಿಗಳನ್ನು ನಿರ್ಮಿಸಿ ಟೆಂಡರ್‌ ಮೂಲಕ ನೀಡಿದಲ್ಲಿ ಸರಕಾರಕ್ಕೂ ಆದಾಯ ಬರುವುದು. ಅಲ್ಲದೇ ಮೀನುಗಾರರಿಗೆ ಸರಿಯಾಗ ವ್ಯವಸ್ಥೆ ಮಾಡಿಕೊಡಬೇಕು.

ವಾರದ ಸಂತೆಯು ರಸ್ತೆ ಪಕ್ಕದಲ್ಲಿಯೇ ನಡೆಯುವುದರಿಂದ ದೇವಸ್ಥಾನಕ್ಕೆ ಬರುವ ಭಕ್ತರೂ ಅ ಕವರುವುದರಿಂದ ಒತ್ತಡ ಜಾಸ್ತಿಯಾಗುತ್ತಿದೆ. ಸಂತೆ ಮಾರುಕಟ್ಟೆಯನ್ನು ಬಯಲು ಪ್ರದೇಶದಲ್ಲಿ ನಡೆಸುವಂತೆ ಮಾಡಿ ರಸ್ತೆ ಖುಲ್ಲಾ ಮಾಡಬೇಕು. ಮುರ್ಡೇಶ್ವರ ದಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸುವುದರಿಂದ ಅನೇಕ ಅಪರಾಧಗಳನ್ನು, ಸ್ವತ್ಛತಾ ನಿಯಮಗಳನ್ನು ಪಾಲಿಸಲು ಅನುಕೂಲವಾಗುವುದು. ಇದಲ್ಲದೇ ಇನ್ನೂ ಅನೇಕ ಬೇಡಿಕೆಗಳಿದ್ದು ಇವುಗಳನ್ನು ತ್ವರಿತಗತಿಯಲ್ಲಿ ಪೂರೈಸಬೇಕು ಎಂದೂ ಆಗ್ರಹಿಸಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.