ಕಿರು ಸೇತುವೆ-ರಸ್ತೆ ನಿರ್ಮಿಸಿ ಕೊಡುವಂತೆ ಒತ್ತಾಯ
Team Udayavani, Jul 3, 2019, 2:57 PM IST
ಕಾರವಾರ: ಬೇಲೇಗದ್ದೆಯ ಮುಕ್ರಿ ಸಮುದಾಯದ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ಮತ್ತು ಕೇರಿ ನಡುವಿನ ಹಳ್ಳಕ್ಕೆ ಕಿರು ಸೇತುವೆ ಹಾಗೂ 100 ಮೀಟರ್ ರಸ್ತೆ ನಿರ್ಮಾಣ ಮಾಡಿಕೊಡಬೇಕು. ಕೇರಿಗೆ ಮೂಲಸೌಕರ್ಯ ಒದಗಿಸಬೇಕು ಎಂದು ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದ ಬೇಲೇಗದ್ದೆಯ ಮುಕ್ರಿ ಸಮುದಾಯದ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
‘ಬಡಗಣಿ ನದಿ ದಂಡೆಯ ಕೇರಿಯಲ್ಲಿ ಏಳು ಕುಟುಂಬಗಳು ತಲೆಮಾರುಗಳಿಂದ ವಾಸ ಮಾಡುತ್ತಿವೆ. ಕೇರಿಯಿಂದ ರಾಷ್ಟ್ರೀಯ ಹೆದ್ದಾರಿಗೆ ಕೇವಲ 60 ಮೀಟರ್ ಅಂತರವಿದ್ದರೂ ಹಳ್ಳದಿಂದಾಗಿ ಸಮರ್ಪಕ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲ ಹಳ್ಳದ ನೀರು ಕೋಡಿ ಹರಿಯುತ್ತದೆ. ಬೇಸಿಗೆಯಲ್ಲಿ ಸುತ್ತಮುತ್ತಲಿನ ಗಲೀಜು ತುಂಬಿ ಗಬ್ಬೆದ್ದು ನಾರುತ್ತದೆ. ಹೀಗಾಗಿ ನಿತ್ಯದ ಕೆಲಸ ಕಾರ್ಯಗಳಿಗೆ, ಪಡಿತರ ಸಾಮಗ್ರಿ ತರಲು, ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ತುಂಬ ಸಮಸ್ಯೆಯಾಗುತ್ತಿದೆ’ ಎಂದು ಮನವಿಯಲ್ಲಿ ವಿವರಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಮತ್ತೂಂದು ಬದಿಯಲ್ಲಿ ಮೀನು ಮಾರುಕಟ್ಟೆ, ಹೋಟೆಲ್ಗಳಿವೆ. ಅಲ್ಲಿಂದ ಪೈಪ್ ಮೂಲಕ ತ್ಯಾಜ್ಯದ ನೀರನ್ನು ಈ ಹಳ್ಳಕ್ಕೆ ಹರಿಸಲಾಗುತ್ತಿದೆ. ಅಕ್ಕಪಕ್ಕದ ನಿವಾಸಿಗಳೂ ತ್ಯಾಜ್ಯವನ್ನು ಸುರಿಯುತ್ತಾರೆ. ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದಕ್ಕೆ ಪರಿಹಾರವಾಗಿ ಅಂದಾಜು 50 ಮೀಟರ್ ಉದ್ದನೆಯ ಸಿಮೆಂಟ್ ಪೈಪ್ ಅಳವಡಿಸಿ ಒಂಬತ್ತು ಅಡಿ ಅಗಲದ ಸೇತುವೆ ನಿರ್ಮಾಣ ಮಾಡಬೇಕು. ಒಂದುವೇಳೆ ರಸ್ತೆ ನಿರ್ಮಾಣ ಮಾಡುವುದಾದರೆ 100 ಮೀಟರ್ ಕಾಮಗಾರಿಯ ಅಗತ್ಯವಿದೆ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಮುಖರಾದ ರವಿ ಮುಕ್ರಿ, ನಾರಾಯಣ ಮುಕ್ರಿ, ನಾಗು ಮಾರು ಮುಕ್ರಿ, ನಾರಾಯಣ ನಾಗು ಮುಕ್ರಿ, ಮಾರು ನಾಗು ಮುಕ್ರಿ, ಗಣಪತಿ ನಾಗು ಮುಕ್ರಿ, ದೇವು ಮಾಸ್ತಿ ಮುಕ್ರಿ, ಗಣೇಶ ಮುಕ್ರಿ, ದಯಾನಂದ ಮುಕ್ರಿ, ಪ್ರೇಮಾ ಮುಕ್ರಿ, ಲಕ್ಷ್ಮಿ ಮುಕ್ರಿ, ಅನ್ನಪೂರ್ಣಾ ಮುಕ್ರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ