ತಾರತಮ್ಯ ನಿವಾರಣೆಗೆ ಒತ್ತಾಯ
Team Udayavani, Dec 29, 2019, 3:42 PM IST
ಕುಮಟಾ: ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಒತ್ತಾಯಿಸಿ, ಸಾರಿಗೆ ಇಲಾಖಾ ನೌಕರರ ಮೂಲಭೂತ ಹಕ್ಕುಗಳ ವಿಚಾರ
ವೇದಿಕೆ ಕುಮಟಾ ಘಟಕದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭಟ್ಕಳದ ಮಂಕಿಯಲ್ಲಿ ಮನವಿ ಸಲ್ಲಿಸಲಾಯಿತು. ಸಾರಿಗೆ ನಿಗಮದ ನೌಕರರು ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಶಿಕ್ಷಣ, ಹೆಸ್ಕಾಂ, ಗ್ರಾಮೀಣಾಭಿವೃದ್ಧಿ, ಕೃಷಿ, ನೀರಾವರಿ, ಸಮಾಜ ಕಲ್ಯಾಣ, ಪೌರಾಡಳಿತ ಇಲಾಖೆ ಸೇರಿದಂತೆ ಹಲವು ಇಲಾಖೆಗಳಂತೆಯೇ ರಾಜ್ಯದ ಜನತೆಗೆ ನೀಡುತ್ತಿರುವ ಸೇವೆಯಂತೆ ಸಾರಿಗೆ ಇಲಾಖೆ ನೌಕರರೂ ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರ, ಸರ್ಕಾರಿ ಪಿಂಚಣಿ, ವೇತನ ತಾರತಮ್ಯ ನಿವಾರಣೆ, ಅಂತರ್ ನಿಗಮಕ್ಕೆ ಸಿಬ್ಬಂದಿ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?