ಶಿರಸಿ ಜಿಲ್ಲಾ ಕೇಂದ್ರ ಮಾಡಲು ಒತ್ತಾಯ
Team Udayavani, Dec 23, 2020, 7:00 PM IST
ಮುಂಡಗೋಡ: ಶಿರಸಿ ಜಿಲ್ಲಾ ಕೇಂದ್ರವಾದರೆ ಘಟ್ಟದ ಮೇಲಿನ ತಾಲೂಕಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಆದ್ದರಿಂದ ಶಿರಸಿ ಜಿಲ್ಲಾ ಕೇಂದ್ರವನ್ನಾಗಿ ಮಾಡಲು ನಾವೆಲ್ಲರೂ ಸೇರಿ ಒಗ್ಗಟ್ಟಾಗಿ ಹೋರಾಡೋಣ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ ಮಂಗಳವಾರ ಹೇಳಿದರು.
ಪಟ್ಟಣದ ಓಶಿಮಠ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಘಟ್ಟದ ಮೇಲಿನ ತಾಲೂಕಿನ ಜನರು ಜಿಲ್ಲಾ ಕೇಂದ್ರದಲ್ಲಿನ ಕಚೇರಿಗಳಿಗೆ ಹೋಗಿ ಬರಲುಸಾಕಷ್ಟು ತೊಂದರೆಯಾಗುತ್ತಿದೆ. ಆದ್ದರಿಂದ ಘಟ್ಟದ ಮೇಲಿನ ತಾಲೂಕಿನ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಶಿರಸಿ ಜಿಲ್ಲಾ ಕೇಂದ್ರವನ್ನಾಗಿ ಮಾಡಲು ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಈಗಾಗಲೆ ಶಿರಸಿಯಲ್ಲಿ ಜಿಲ್ಲಾಮಟ್ಟದ ಹಲವಾರುಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಶಿರಸಿಯನ್ನುಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವುದು ಅವಶ್ಯವಿದೆ. ಈ ತಾಲೂಕಿನ ಜನರು ಶಿರಸಿ ಜಿಲ್ಲಾಕೇಂದ್ರವನ್ನಾಗಿಸಲು ಹೆಚ್ಚು ಬೆಂಬಲ ನೀಡಬೇಕು ಎಂದರು.
ಹೋರಾಟ ಸಮಿತಿಯ ಪರಮಾನಂದ ಹೆಗಡೆ ಮಾತನಾಡಿ, ಶಿರಸಿ ಜಿಲ್ಲೆಯನ್ನಾಗಿಸಬೇಕು ಎಂಬ ಕೂಗು ರಾಜಧಾನಿಯವರೆಗೂ ತಲುಪಿದೆ. ಇದಕ್ಕೆಜನಪ್ರತಿನಿಧಿಗಳ ಇಚ್ಛಾಶಕ್ತಿಯೂ ಅತಿ ಅವಶ್ಯವಿದೆ. ಘಟ್ಟದ ಮೇಲಿನ ತಾಲೂಕಿನ ಜನರು ಶಿರಸಿ ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಹೋರಾಟವನ್ನು ತೀವ್ರಗೊಳಿಸುವುದು ಅವಶ್ಯವಿದೆ ಎಂದರು.
ಉದ್ಯಮಿ ಬಸವರಾಜ ಓಶಿಮಠ ಮಾತನಾಡಿ, ಕದಂಬ ಜಿಲ್ಲೆಯೆಂದು ನಾಮಕರಣ ಮಾಡಿ ಈ ಜಿಲ್ಲೆಯ ಹೋರಾಟಕ್ಕೆ ನಾನು ಸದಾ ಸಿದ್ಧನಿದ್ದೇನೆ.ಹೋರಾಟ ಆಮೆಗತಿಯಲ್ಲಿ ಸಾಗುತ್ತಿದ್ದು,ಇದೂ ತೀವ್ರವಾಗಿ ನಡೆಯಬೇಕು. ಶಿರಸಿ ಜಿಲ್ಲಾಕೇಂದ್ರವಾದರೆ ಘಟ್ಟದ ಮೇಲಿನ ಸಾರ್ವಜನಿಕರಿಗೆಹಾಗೂ ಸರಕಾರಿ ನೌಕರರಿಗೆ, ಸಂಘ ಸಂಸ್ಥೆ ಹೀಗೆಎಲ್ಲ ವರ್ಗದವರಿಗೂ ಹೆಚ್ಚು ಅನುಕೂಲವಾಗಲಿದೆ ಎಂದರು.
ಇದೆ ವೇಳೆ ಬಸವರಾಜ ಓಶಿಮಠ ಅವರನ್ನು ಶಿರಸಿ ಜಿಲ್ಲಾ ಹೋರಾಟ ಸಮಿತಿ ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಎಂ.ಎಂ. ಭಟ್, ಮಂಜುನಾಥ ಮೂಗೇರ, ಶ್ರೀಧರ ಮೂಗೇರ, ರಾಘು ಕಾನಡೆ, ವಿನೋದ ಹೊಸಪಟ್ಟಣ, ಮಾರುತಿ ಓಂಕಾರ, ಎಸ್.ಕೆ. ಬೋರ್ಕರ, ಸೋಮಣ್ಣ ಮುಡೇಣ್ಣವರ, ಶ್ರೀಧರ ಡೋರಿ, ವಸಂತ ಕೋಣಸಾಲಿ, ಮತ್ತಣ್ಣ ವಾಲಿಶೆಟ್ಟರ, ವಿನಾಯಕ ಶೇಟ್, ಸಂಗಪ್ಪ ಕೋಳೂರ, ಜಗದೀಶ ಕಾನಡೆ ಮುಂತಾದವರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್: ಪಿ.ವಿ. ಸಿಂಧು, ಸಮೀರ್, ಕ್ವಾರ್ಟರ್ ಫೈನಲ್ ಪ್ರವೇಶ
ಶಿವಮೊಗ್ಗದಲ್ಲಿ ಭಾರಿ ಕಂಪನ: ಭದ್ರಾ ಜಲಾಶಯದ ಸ್ಥಿತಿಗತಿ ಪರಿಶೀಲಿಸಿದ ಪ್ರಾಧಿಕಾರದ ಅಧ್ಯಕ್ಷೆ
ಚೀನ ಗ್ರಾಮ ನಿರ್ಮಾಣದ ವಿರುದ್ಧ ಪ್ರತಿಭಟನೆ
ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಮಲೆನಾಡಿನಲ್ಲಿ ಭಾರೀ ಶಬ್ದ; ಕಂಗಾಲಾಗಿ ಹೊರ ಬಂದ ಜನ