8 ತಿಂಗಳ ವೇತನ ಪಾವತಿಗೆ ಒತ್ತಾಯ
ಜೀವನ ನಿರ್ವಹಣೆ ಕಷ್ಟ ಸಾಧ್ಯ ಬಿಎಸ್ಎನ್ಎಲ್ ನೌಕರರ ಅಳಲು
Team Udayavani, May 15, 2019, 2:25 PM IST
ಕುಮಟಾ: ಗುತ್ತಿಗೆ ಆಧಾರಿತ ದಿನಗೂಲಿ ನೌಕರರು ಬಿಎಸ್ಎನ್ಎಲ್ ಜನರಲ್ ಮ್ಯಾನೇಜರ್ ರಾಜಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆ ತೋಡಿಕೊಂಡರು.
ಕುಮಟಾ: ಕಳೆದ 8 ತಿಂಗಳಿಂದ ಸಂಬಳ ಬಟವಡೆಯಾಗದ ಹಿನ್ನೆಲೆಯಲ್ಲಿ ಹೋರಾಟ ನಡೆಸಿರುವ ಬಿಎಸ್ಎನ್ಎಲ್ ಗುತ್ತಿಗೆ ಆಧಾರಿತ ದಿನಗೂಲಿ ನೌಕರರು ಕುಮಟಾದ ಬಿಎಸ್ಎನ್ಎಲ್ ಕಾರ್ಯಾಲಯಕ್ಕೆ ಮಂಗಳವಾರ ಆಗಮಿಸಿದ ಬಿಎಸ್ಎನ್ಎಲ್ ಕಾರವಾರ ಜನರಲ್ ಮ್ಯಾನೇಜರ್ ರಾಜಕುಮಾರ್ ಅವರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡರು.
ದಿನಗೂಲಿ ನೌಕರರ ವತಿಯಿಂದ ಮಂಜನಾಥ ಶೆಟ್ಟಿ ಮಾತನಾಡಿ, ನಾವು ಕುಮಟಾ ಹಾಗೂ ಹೊನ್ನಾವರ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಬಿಎಸ್ಎನ್ಎಲ್ನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ಸಮಯಕ್ಕೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ಕಳೆದ 8 ತಿಂಗಳಿಂದ ಸಂಬಳ ಬಂದೇ ಇಲ್ಲ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮೌಖೀಕವಾಗಿ ಹಾಗೂ ಲಿಖೀತವಾಗಿಯೂ ದೂರು ನೀಡಿದ್ದೇವೆ. ಕಾರವಾರದಲ್ಲಿರುವ ಜನರಲ್ ಮ್ಯಾನೇಜರ್ ಕಾರ್ಯಾಲಯದ ಎದುರು ಧರಣಿ ಮಾಡಿ ಮನವಿ ಕೊಟ್ಟಿದ್ದೇವೆ. ಆದರೂ ಸಂಬಳ ಪಾವತಿಯಾಗಿಲ್ಲ. ಹೀಗಾಗಿ ನಮ್ಮೆಲ್ಲರ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮೇ 3 ರಿಂದ ನಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟಿಸುವ ನಿರ್ಧಾರ ಮಾಡಲಾಗಿತ್ತಾದರೂ ಸದ್ಯ ಕೆಲಸ ಮಾಡುತ್ತಲೇ ನಮ್ಮ ನ್ಯಾಯಯುತ ಬೇಡಿಕೆಗಾಗಿ ಹೋರಾಟ ನಡೆಸಿದ್ದೇವೆ. ನಮಗೆ ನ್ಯಾಯ ಕೊಡಿ ಎಂದು ಕೋರಿದರು. ಜನರಲ್ ಮ್ಯಾನೇಜರ್ ರಾಜಕುಮಾರ ಮಾತನಾಡಿ, ನಿಮ್ಮ ಸಮಸ್ಯೆ ಗಮನದಲ್ಲಿದೆ. ನಿಮ್ಮ ಪರಿಶ್ರಮದ ಆದಾಯ ಎಲ್ಲೂ ಹೋಗುವುದಿಲ್ಲ. ನಿಮಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕಾರಣಾಂತರದಿಂದ ಸಂಬಳ ಬಟವಡೆಗೆ ವಿಳಂಬವಾಗಿದೆ. ಈ ತಿಂಗಳಾಂತ್ಯದೊಳಗೆ ಸಾಧ್ಯವಾದಷ್ಟು ಸಂಬಳ ಪಾವತಿ ಮಾಡಿಸುವುದಾಗಿ ಭರವಸೆ ನೀಡಿದರು.
ಬಿಎಸ್ಎನ್ಎಲ್ ಕಾರವಾರ ಡೆಪ್ಯೂಟಿ ಜನರಲ್ ಮ್ಯಾನೇಜರ್ ನಂದಿ ಹಾಗೂ ಇತರ ಅಧಿಕಾರಿಗಳು ಇದ್ದರು. ಕುಮಟಾ ಹಾಗೂ ಹೊನ್ನಾವರ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಬಿಎಸ್ಎನ್ಎಲ್ ದಿನಗೂಲಿ ನೌಕರರಾದ ಗೋವಿಂದ ಮುಕ್ರಿ, ರತ್ನಾಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ