ಮೀಸಲಾತಿ ದುರ್ಬಳಕೆ ತಡೆಗೆ ಒತ್ತಾಯ
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನೈಜ ಪರಿಶಿಷ್ಟರಿಗೆ ಅನ್ಯಾಯ
Team Udayavani, May 12, 2022, 4:20 PM IST
ಭಟ್ಕಳ: ಪ್ರ ವರ್ಗ-1ರಲ್ಲಿ ಬರುವ ಮೊಗೇರ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದಂತೆ ಉತ್ತರ ಕನ್ನಡ ಜಿಲ್ಲೆಯ ನೈಜ ಪರಿಶಿಷ್ಟ ಜಾತಿ, ಪಂಗಡಗಳ ಸಾಂವಿಧಾನಿಕ ಹಕ್ಕು ರಕ್ಷಣಾ ಒಕ್ಕೂಟದ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕಾಗಿ ಧರಣಿ ನಡೆಸುತ್ತಿರುವ ಮೊಗೇರ (ಮೊಗವೀರ) ಸಮಾಜದವರು ಕರ್ನಾಟಕ ಸರಕಾರದ ಪ್ರವರ್ಗ-1ರಲ್ಲಿ ಬರುವ ಸಮುದಾಯವಾಗಿದ್ದು ಮೀನುಗಾರ ವೃತ್ತಿ ಮಾಡುವವರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ನೈಜ ಪರಿಶಿಷ್ಟ ಜಾತಿಯ ಮೊಲ ಬೇಟೆಯಾಡುವ ಮೊಗೇರ ಜಾತಿಯ ಸಮಾನ ಹೆಸರನ್ನು ದುರುಪಯೋಗ ಪಡಿಸಿಕೊಂಡು 1976ರ ಪ್ರಾದೇಶಿಕ ನಿರ್ಬಂಧ ತೆಗೆದ ನಂತರ ಭಟ್ಕಳ ತಹಶೀಲ್ದಾರರಿಗೆ ಸುಳ್ಳು ಮಾಹಿತಿ ನೀಡಿ ಕೆಲವು ಶಾಲಾ ದಾಖಲಾತಿಗಳಲ್ಲಿ ಮೊಗವೀರ ಎನ್ನುವುದನ್ನು ಮೊಗೇರ ಎಂದು ತಿದ್ದುಪಡಿ ಮಾಡಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳುವ ಮೂಲಕ ನೈಜ ಪರಿಶಿಷ್ಟರಿಗೆ ದೊರೆಯಬೇಕಾದ ಸಾವಿರಾರು ಕೋಟಿ ಮೀಸಲಾತಿ ಸೌಲಭ್ಯವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಪ್ರಾದೇಶಿಕ ನಿರ್ಬಂಧ ತೆಗೆದ ನಂತರ ಮೀನುಗಾರ ಮೊಗೇರ ಜಾತಿಯವರು ಪ.ಜಾ. ಕ್ರ.ಸಂ.78 ರಲ್ಲಿರುವ ನೈಜ ಪರಿಶಿಷ್ಟರ ಸಮಾಜ ಹೆಸರಿನ ದುರುಪಯೋಗ ಪಡಿಸಿಕೊಂಡು ಅಂದಿನ ಆಡಳಿತ ಪಕ್ಷದ ಶಾಸಕರಿಂದ ಸಕ್ಷಮ ಪ್ರಾಧಿಕಾರದ ಮೇಲೆ ಒತ್ತಡ ಹೇರಿ ಪಡೆದಿರುವ ಸುಳ್ಳು ಜಾತಿ ಪ್ರಮಾಣ ಪತ್ರವಾಗಿದೆ ಎಂದು ಆರೋಪಿಸಲಾಗಿದೆ.
ನೈಜ ಪರಿಶಿಷ್ಟರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡವರು ಕಬಳಿಸುತ್ತಿದ್ದು ಸೂಕ್ತ ಕ್ರಮಕ್ಕೆ ಸರಕಾರ ಮುಂದಾಗಬೇಕು. ಈಗಾಗಲೇ ನೀಡಲಾಗಿರುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸಾಮೂಹಿಕವಾಗಿ ರದ್ದು ಪಡಿಸಬೇಕು, ಹೊಸದಾಗಿ ಯಾವುದೇ ಪ್ರಮಾಣ ಪತ್ರ ಕೊಡುವ ನಿರ್ಧಾರ ಮಾಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಿರಣ ಶಿರೂರ, ಉಪಾಧ್ಯಕ್ಷ ರವೀಂದ್ರ ಮಂಗಳ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು