‘ಲಾಲ್ ಕಪ್ತಾನ್‌’ ಚಲನಚಿತ್ರ ನಿಷೇಧಕ್ಕೆ ಒತ್ತಾಯ

•ನ್ಯಾಯವಾದಿ ಪುನಾಳೆಕರ ವಿರುದ್ಧದ ಆರೋಪ ಹಿಂಪಡೆಯಲಿ•ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿ

Team Udayavani, Jul 27, 2019, 2:00 PM IST

uk-tdy-4

ಹಳಿಯಾಳ: ಹಿಂದು ಜನಜಾಗೃತಿ ಸಮೀತಿ, ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯವರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಹಳಿಯಾಳ: ನ್ಯಾಯವಾದಿ ಸಂಜೀವ ಪುನಾಳೆಕರ ವಿರುದ್ಧ ದಾಖಲಾದ ಆರೋಪವನ್ನು ಕೂಡಲೇ ಹಿಂಪಡೆಯಬೇಕು, ನಾಗಾ ಸಾಧುಗಳಿಗೆ ಸಂಬಂಧಪಟ್ಟ ವಿಕೃತ ದೃಶ್ಯ ತೋರಿಸುವ ‘ಲಾಲ್ ಕಪ್ತಾನ್‌’ ಚಲನಚಿತ್ರ ನಿಷೇಧಿಸಬೇಕು ಹಾಗೂ ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಮತಾಂಧರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯವರು ತಹಶೀಲ್ದಾರ್‌ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮಹಾರಾಷ್ಟ್ರದ ಡಾ| ನರೇಂದ್ರ ದಾಭೊಲಕರ ಹಾಗೂ ಪಾನಸರೆಯವರ ಹತ್ಯೆ ಬಗೆಗಿನ ದಿಕ್ಕಿಲ್ಲದ ತನಿಖೆ ಬಗ್ಗೆ ನ್ಯಾಯಾಲಯದಲ್ಲಿ ವಾದ ಮಂಡಿಸಿ ನ್ಯಾಯವಾದಿ ಸಂಜೀವ್‌ ಪುನಾಳೆಕರ್‌ ತನಿಖಾ ದಳದ ನಿಷ್ಕ್ರಿಯತೆ ಜನರ ಮುಂದೆ ಬಯಲಿಗೆಳೆದಿದ್ದಾರೆ. ಆದ್ದರಿಂದ ಇದಕ್ಕೆ ಪ್ರತಿಕಾರವೆಂಬಂತೆ ನ್ಯಾಯವಾದಿ ಸಂಜೀವ ಪುನಾಳೆಕರ ಹಾಗೂ ಮಾಹಿತಿ ಹಕ್ಕು ಅಧಿಕಾರದ ಕಾರ್ಯಕರ್ತ ವಿಕ್ರಮ ಭಾವೆಯವರನ್ನು ಸಿಬಿಐಯು ಅನಧಿಕೃತವಾಗಿ ಬಂಧಿಸಿತ್ತು ಎಂದು ಆರೋಪಿಸಿದ್ದಾರೆ.

ಸಿಬಿಐ ಮೂಲಕ ಆಗುತ್ತಿರುವ ಈ ಕಾರ್ಯಾಚರಣೆ ಸಂವಿಧಾನ ವಿರೋಧಿ ಹಾಗೂ ಸಂಪೂರ್ಣ ನ್ಯಾಯವಾದಿ ವ್ಯವಸ್ಥೆ ಹಾಗೂ ಜನತೆಯ ನ್ಯಾಯಾಂಗದ ಹಕ್ಕಿನ ಕಗ್ಗೊಲೆಯಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಪ್ರತಿಭಟನಾಕಾರರು ತಕ್ಷಣ ಸಿಬಿಐ ಪುನಾಳೇಕರ್‌ ಮೇಲೆ ದಾಖಲಿಸಿದ ಆರೋಪವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ.

ಲಾಲ್ ಕಪ್ತಾನ್‌ ನಿಷೇಧಿಸಿ: ಕೆಲವೆ ದಿನಗಳಲ್ಲಿ ಬಿಡುಗಡೆ ಆಗಲಿರುವ ಚಲನಚಿತ್ರ ‘ಲಾಲ್ ಕಪ್ತಾನ್‌’ನ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವ ಸಮೀತಿ ಚಿತ್ರದಲ್ಲಿ ನಾಗಾ ಸಾಧುಗಳಿಗೆ ಸಂಬಂಧಪಟ್ಟ ಕೆಲವು ವಿಕೃತ ದೃಶ್ಯಗಳಿವೆ. ಸಂಸ್ಕೃತೀಯ ವಸ್ತುಸ್ಥಿತಿಯನ್ನು ಬದಿಗಿಟ್ಟು ಹಿಂದೂ ಧರ್ಮಕ್ಕಾಗಿ ಪ್ರಾಣ ಪಣಕ್ಕಿಡುವ ನಾಗಾಸಾಧುಗಳನ್ನು ಚಲನಚಿತ್ರಗಳ ಮೂಲಕ ಅವಮಾನಿಸುವ ಪ್ರಯತ್ನವಾಗುತ್ತಿದೆ. ಇದನ್ನು ಶ್ರದ್ಧಾವಂತ ಹಿಂದೂಗಳು ಎಂದಿಗೂ ಸಹಿಸುವುದಿಲ್ಲ. ಆದ್ದರಿಂದ ‘ಲಾಲ್ ಕಪ್ತಾನ್‌’ ಚಲನಚಿತ್ರವನ್ನು ನಿಷೇಧಿಸುವಂತೆ ಆಗ್ರಹಿಸಲಾಗಿದೆ.

ಗೋಹತ್ಯಾ ನಿಷೇಧ ಕಾನೂನು ಜಾರಿಯಾಗಲಿ: ಮಹಾರಾಷ್ಟ್ರದ ಗೋ ರಕ್ಷಕ ಚೇತನ ಶರ್ಮಾ, ವಿಕಾಸ ಗೋಮಸಾಳೆ, ಮಯೂರ ವಿಭಾಂಡಿಕರ ಮೇಲೆ ಮತಾಂಧ ಕಟುಕರು ನಡೆಸಿದ ಮಾರಣಾಂತಿಕ ಹಲ್ಲೆ ಖಂಡಿಸಿರುವ ಹಿಂಜ ಸಮೀತಿ ಗೋಮಾತೆ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಕಾರ್ಯ ಮಾಡುವ ಗೋರಕ್ಷಕರಿಗೆ ಇಂದು ದೇಶದಲ್ಲಿ ಯಾವ ರಕ್ಷಣೆಯು ಇಲ್ಲವಾಗಿದೆ. ಆದ್ದರಿಂದ ಗೋರಕ್ಷಕರ ಮೇಲೆ ಹಲ್ಲೆಯನ್ನು ಮಾಡುವ ಮತಾಂಧರ ಮೇಲೆ ಕಠಿಣಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಮಂಜುನಾಥ ಎನ್‌.ಕೆ, ನಿಥೀನ ಡಾಂಗೆ, ಕಾಂಚನಾ ರಜಪೂತ, ಮನೋಜ ಹೆಳವರ, ಮಂಜುನಾಥ ಬಾರ್ಕಿ, ಮೋಹಿನ ಹೊಂದೂರಕರ, ಗುರು ಬಾರ್ಕಿ ವಿವಿಧ ಹಿಂದೂಪರ ಸಂಘಟನಾಕಾರರು ಇತರರು ಇದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.