ಅಂಚೆ ಕಚೇರಿ ಸ್ಥಳಾಂತರಕ್ಕೆ ಪರಿಶೀಲನೆ
Team Udayavani, Jul 7, 2020, 4:41 PM IST
ಕುಮಟಾ: ಮಣಕಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಖಾಸಗಿ ಕಟ್ಟವೊಂದರಲ್ಲಿರುವ ಅಂಚೆ ಕಚೇರಿ ಶಾಖೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಶಾಸಕ ದಿನಕರ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಚೆ ಕಚೇರಿಯಿರುವ ಕಟ್ಟಡದಲ್ಲಿ ಈಗ ಬಾರ್ ಮತ್ತು ರೆಸ್ಟೋರೆಂಟ್ ಆರಂಭಗೊಂಡ ಹಿನ್ನೆಲೆಯಲ್ಲಿ ಅಂಚೆ ಕಚೇರಿಗೆ ತೆರಳಲು ಮಹಿಳೆಯರು ಹಾಗೂ ಯುವತಿಯರಿಗೆ ಮುಜುಗರವೆನಿಸುತ್ತಿತ್ತು. ಹೀಗಾಗಿ ಸ್ಥಳೀಯರು ಅಂಚೆ ಕಚೇರಿ ಕಟ್ಟಡವನ್ನು ಬೇರೆಡೆ ಸ್ಥಳಾಂತರಿಸುವಂತೆ ಶಾಸಕರಿಗೆ ಮನವಿ ಮಾಡಿದ್ದರು.
ಈ ಬಗ್ಗೆ ತಕ್ಷಣ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ, ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ವಸ್ತು ಸ್ಥಿತಿಯನ್ನು ಗಮನಿಸಿ, ಹತ್ತಿರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ನಂತರ ಸಂಬಂಧಪಟ್ಟ ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ, ಈಗಿರುವ ಶಾಲೆ ಆವರಣದ ಒಂದು ಮೂಲೆಯಲ್ಲಿ ಅಂಚೆ ಕಚೇರಿ ನಿರ್ಮಿಸಲು 10-10 ಅಡಿ ಜಾಗ ನೀಡುವಂತೆ ಸೂಚಿಸಿದರು. ಇದಕ್ಕೆ ಮೇಲಧಿಕಾರಿಗಳು ಒಪ್ಪಿಗೆ ಸೂಚಿಸಿದ ನಂತರ ಸ್ಥಳಿಯರು ಕಟ್ಟಡ ನಿರ್ಮಾಣಕ್ಕೆ ನಾವೇ ಹಣ ಸಂಗ್ರಹಿಸಿ ನೀಡುವುದಾಗಿ ತಿಳಿಸಿದರು.
ಸ್ಥಳೀಯರಾದ ಜಿ.ಕೆ. ಹೆಗಡೆ, ನಾಗೇಂದ್ರ ಭಂಡಾರಿ, ದಿನೇಶ ಭಂಡಾರಿ, ಬಾಲಚಂದ್ರ ಮಣಕೀಕರ, ಪಾಂಡುರಂಗ ಭಂಡಾರಿ, ಲಿನಾಷ ಫರ್ನಾಂಡೀಸ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್