![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪ್ರಕೃತಿ ವಿಕೋಪ ನಿರ್ಲಕ್ಷಿಸದಿರಲು ಅಧಿಕಾರಿಗಳಿಗೆ ಸೂಚನೆ
Team Udayavani, May 28, 2020, 8:02 AM IST
![ಪ್ರಕೃತಿ ವಿಕೋಪ ನಿರ್ಲಕ್ಷಿಸದಿರಲು ಅಧಿಕಾರಿಗಳಿಗೆ ಸೂಚನೆ](https://www.udayavani.com/wp-content/uploads/2020/05/UK-1-620x387.jpg)
ಸಿದ್ದಾಪುರ: ಮಳೆಗಾಲ ಪೂರ್ವಸಿದ್ಧತಾ ಸಭೆಯಲ್ಲಿ ಡಾ| ಈಶ್ವರ ಉಳ್ಳಾಗಡ್ಡಿ ಮಾತನಾಡಿದರು.
ಸಿದ್ದಾಪುರ: ಹವಾಮಾನ ಇಲಾಖೆ ವರದಿ ಪ್ರಕಾರ ಈ ಬಾರಿ ಹೆಚ್ಚಿನ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಪ್ರಕೃತಿ ವಿಕೋಪದ ಬಗ್ಗೆ ನಿರ್ಲಕ್ಷ ಬೇಡ. ಆ ಕುರಿತಂತೆ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ. ಯಾವುದೇ ಅಗತ್ಯವಿದ್ದರೂ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ. ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಹಾಯಕ ಕಮೀಷನರ್ ಡಾ|ಈಶ್ವರ ಉಳ್ಳಾಗಡ್ಡಿ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ತಾಪಂ ಸಭಾಭವನದಲ್ಲಿ ನಡೆದ ಮಳೆಗಾಲದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ ಮಳೆಗಾಲದ ಮೊದಲು ರಸ್ತೆ ಪಕ್ಕದ ಗಟಾರಗಳ ಸ್ವತ್ಛತೆ, ರಸ್ತೆ ಅಕ್ಕಪಕ್ಕದ ಮರಗಳ ಟೊಂಗೆಗಳನ್ನು ಕತ್ತರಿಸಲು ಕ್ರಮ ತೆಗೆದುಕೊಳ್ಳಿ, ಮಳೆ, ಗಾಳಿಯಿಂದ ರಸ್ತೆ ಮೇಲೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗುವುದನ್ನು ಕೂಡಲೇ ಸರಿಪಡಿಸಿ. ಗುಡ್ಡ ಕುಸಿತ, ನೆರೆಹಾವಳಿ ಪ್ರದೇಶಗಳ ಬಗ್ಗೆ ನಿಗಾವಹಿಸಿ. ಪ್ರಕೃತಿ ವಿಕೋಪದ ಬಗ್ಗೆ ಯಾರೂ ನಿರ್ಲಕ್ಷ ವಹಿಸಬೇಡಿ. ಏನಾದರೂ ಅಗತ್ಯವಿದ್ದರೆ ನನ್ನನ್ನ, ತಹಶೀಲ್ದಾರರನ್ನು ಸಂಪರ್ಕಿಸಿ ನೆರವು ಪಡೆದುಕೊಳ್ಳಿ ಎಂದರು.
ಕೋವಿಡ್-19 ಹಾಗೂ ಕೆಎಫ್ಡಿಗೆ ಸಂಬಂಧಿಸಿದಂತೆ ಶಿರಸಿ ಉಪವಿಭಾಗದ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು ಇದು ಮುಂದೆಯೂ ಇದೇ ರೀತಿ ಸಮರ್ಪಕವಾಗಿ ಕೆಲಸ ಮಾಡಬೇಕಿದೆ. ಈ ತಾಲೂಕಿನಲ್ಲಿಯೂ ಉತ್ತಮವಾದ ನಿರ್ವಹಣೆಯಾಗಿದೆ. ಹೊರ ರಾಜ್ಯದಿಂದ ಜನರು ಬರುತ್ತಿದ್ದು ಅವರನ್ನು ಕ್ವಾರಂಟೈನ್ ಮಾಡುವಲ್ಲಿ ಪಿಡಿಒಗಳ ಜವಾಬ್ದಾರಿ ಹೆಚ್ಚಿನದು. ಕೂಡಲೇ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಇನ್ನು 3-4 ತಿಂಗಳು
ಹೆಚ್ಚಿನ ಲಕ್ಷ ವಹಿಸಬೇಕಿದೆ. ಯಾರೇ ಹೊರಗಿನಿಂದ ಬಂದರೂ ಆ ಬಗ್ಗೆ ತೀವ್ರ ನಿಗಾ ವಹಿಸಿ, ನಮ್ಮ ಗಮನಕ್ಕೆ ತನ್ನಿ ಎಂದರು. ಪಟ್ಟಣದಲ್ಲಿ ರಸ್ತೆ ಪಕ್ಕದ ಮರಗಳ ಅಡಚಣೆ ಮಾಡಬಹುದಾದ ಮರಗಳ ರೆಂಬೆಗಳನ್ನು ಕತ್ತರಿಸಲು ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು. ತಹಶೀಲ್ದಾರ್ ಮಂಜುಳಾ ಭಜಂತ್ರಿ,
ತಾಪಂ ಇಓ ಪ್ರಶಾಂತರಾವ್ ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.