ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಉತ್ತರ ಕನ್ನಡದಲ್ಲಿ ಸಾಕ್ಷರತೆ ಪ್ರಮಾಣ ಶೇ.86 ; ಅನಕ್ಷರಸ್ಥರನ್ನು ನವಸಾಕ್ಷರರನ್ನಾಗಿಸುವುದೇ ಉದ್ದೇಶ: ಶ್ರೀಕಾಂತ

Team Udayavani, Sep 15, 2022, 3:26 PM IST

16

ಕಾರವಾರ: ಔಪಚಾರಿಕ ಶಿಕ್ಷಣ ಪಡೆಯದೇ ಇರುವ 15 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಅಕ್ಷರ ಜ್ಞಾನ ನೀಡಿ ನವಸಾಕ್ಷರರನ್ನಾಗಿ ಮಾಡವುದೇ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಶ್ರೀಕಾಂತ ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಪಂ ಸಭಾಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಶೇ.86 ಇದ್ದಾಗಿಯೂ ಕೂಡ ಮಹಿಳಾ ಸಾಕ್ಷರತಾ ಪ್ರಮಾಣ ಕಡಿಮೆ ಇದೆ. ದೇಶದ ಪ್ರಗತಿಗೆ ಸಾಕ್ಷರತೆ ಅತೀ ಮುಖ್ಯವಾಗಿದ್ದು, ಮಹಿಳೆಯರಿಗೂ ವಿದ್ಯೆ ನೀಡಿ ಮುಖ್ಯವಾಹಿನಿಗೆ ತರುವ ಕಾರ್ಯವಾಗಬೇಕು. ಜೊತೆಗೆ ಇಂದಿನ ದಿನಮಾನಕ್ಕೆ ಅನುಸಾರವಾಗಿ ಕಂಪ್ಯೂಟರ್‌ ಶಿಕ್ಷಣ ಅವಶ್ಯಕವಾಗಿದೆ. ಹಾಗಾಗಿ ಕಂಪ್ಯೂಟರ್‌ ಸಾಕ್ಷರತೆ ನಮ್ಮ ಯೋಜನೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

1964 ರಿಂದೀಚೆಗೆ ಸತತವಾಗಿ ಬೇರೆ ಬೇರೆ ಹೆಸರುಗಳಿಂದ ಈ ಸಾಕ್ಷರತಾ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಸಮೀಕ್ಷೆ ಮೂಲಕ ಅನಕ್ಷರಸ್ಥರನ್ನು ಗುರುತಿಸಿ ಅವರನ್ನು ನವಸಾಕ್ಷರರನ್ನಾಗಿ ಮಾಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಇದಕ್ಕೆ ಇಲಾಖಾ ಅಧಿಕಾರಿಗಳ ಜೊತೆಗೆ ಸಾರ್ವಜನಿಕರ ಸಹಕಾರವು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಬಳಿಕ ಜಿಪಂ ಮುಖ್ಯ ಲೆಕ್ಕಾಧಿಕಾರಿ ಸತೀಶ್‌ ಪವಾರ ಮಾತನಾಡಿ, ಶಿಕ್ಷಣದಿಂದ ವಂಚಿತರಾದ ಸಾಕ್ಷರತೆಗಾಗಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಎಲ್ಲರನ್ನೂ ಸಾಕ್ಷರಗೊಳಿಸಿ ಅವರ ಜೀವನಮಟ್ಟ ಸುಧಾರಿಸುವ ಹಾಗೂ ಸಾಕ್ಷರತೆ ಕುರಿತು ಅರಿವು ಮೂಡಿಸುವುದು ಈ ಯೋಜನೆಯ ಬಹುದೊಡ್ಡ ಉದ್ದೇಶವಾಗಿದೆ ಎಂದು ಹೇಳಿದರು.

ಜಿಲ್ಲಾ ಸಾಕ್ಷರತಾ ಸಂಯೋಜಕಿ ಹಾಗೂ ಶಿಕ್ಷಕಿ ಸಾಧನಾ ಬರಗಿ ಮಾತನಾಡಿ, ಮೊದಲಿನಿಂದಲೂ ರಾತ್ರಿ ಶಾಲೆ, ಮುಂದುವರಿಕೆ ಶಿಕ್ಷಣ ಕೇಂದ್ರ, ಸಾಕ್ಷರತಾ ಕಲಿಕಾ ಕೇಂದ್ರಗಳ ಮೂಲಕ ವಿವಿಧ ಸ್ಥಳಗಳಲ್ಲಿ ಸಾಕ್ಷರತಾ ಕೇಂದ್ರಗಳನ್ನು ತೆರೆದು ಸಾಕ್ಷರರನ್ನಾಗಿ ಮಾಡುವ ಕಾರ್ಯವು ವ್ಯವಸ್ಥಿತವಾಗಿ ಜರುಗುತ್ತಿದೆ ಎಂದು ತಿಳಿಸಿದರು.

ಡಯಟ್‌ ನ ಪ್ರಾಂಶುಪಾಲ ಎನ್‌.ಜಿ. ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಕ್ಷರರು ನಿರಕ್ಷರರಿಗೆ ಕಲಿಸಬೇಕು. ಕಲಿತವರು ಕಲಿಯದವರಿಗೆ ಕಲಿಸಬೇಕು. ವಿದ್ಯೆಯಿಲ್ಲದವರಿಗೆ ವಿದ್ಯೆ ನೀಡುವುದು ಸಂತಸದ ವಿಚಾರ. ಜಿಲ್ಲೆಯನ್ನು ಸಾಕ್ಷರತೆಯಲ್ಲಿ ಉತ್ತಮಪಡಿಸೋಣ ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯದರ್ಶಿ ನಾಗೇಶ ರಾಯ್ಕರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಅಧಿಕಾರಿ ನರೇಂದ್ರ ನಾಯಕ್‌, ರಾಜ್ಯ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.