ಅರ್ಜಿಗಾಗಿ ಅತಿಕ್ರಮಣದಾರರ ಅಲೆದಾಟ

•ದಾಖಲೆ ಸಂಗ್ರಹಕ್ಕಾಗಿ ಜೀವನ ಪೂರ್ತಿ ಜಿಲ್ಲೆ-ತಾಲೂಕು ಕೇಂದ್ರಗಳಿಗೆ ನಿಲ್ಲದ ಓಡಾಟ

Team Udayavani, Jul 28, 2019, 12:18 PM IST

uk-tdy-1

ಶಿರಸಿ: ಮಳೆಯ ಮಧ್ಯೆ ಆಯುಕ್ತರ ಕಚೇರಿಗೆ ಆಗಮಿಸಿದ ಅರಣ್ಯ ಅತಿಕ್ರಮಣದಾರರು.

ಶಿರಸಿ: ಒಂದು ಕಡೆ ಆರ್ಭಟ ಮಳೆ, ಇನ್ನೊಂದು ಕಡೆ ಬೆಳೆ ನಾಶ, ಮತ್ತೂಂದೆಡೆ ಅತಿಕ್ರಮಣ ಭೂಮಿ ಮಂಜೂರಿಗೆ ಹೆಚ್ಚಿನ ದಾಖಲೆ ಒದಗಿಸಿ ನೋಟಿಸ್‌. ಜೀವನಪೂರ್ತಿ ಅತಿಕ್ರಮಣ ಮಂಜೂರಿಗೆ ದಾಖಲೆ ಕೊಡುವುದು ಅರ್ಜಿ ಹಿಡಿದು ಅಲೆದಾಟ ಸಾಕಪ್ಪಾ ಸಾಕು ಅತಿಕ್ರಮಣ ಭೂಮಿಯು ಬೇಡಾ, ಪಟ್ಟವೂ ಬೇಡಾ ಎಂದು ಅಲವತ್ತುಕೊಳ್ಳುವಂತಾಗಿದೆ. ಇದು ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಪುನರ್‌ ಪರಿಶೀಲನೆಗೆ ಯಲ್ಲಾಪುರ ತಾಲೂಕಿನಿಂದ ಶಿರಸಿ ಉಪವಿಭಾಗ ಕಚೇರಿಗೆ ಬಂದ ಅತಿಕ್ರಮಣದಾರರ ಅಳಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ಸೂಚನೆ ಮೇರೆಗೆ ತಿರಸ್ಕಾರಗೊಂಡ ಅತಿಕ್ರಮಣ ಅರ್ಜಿಗಳಿಗೆ ಪುನರ್‌ ಪರಿಶೀಲನೆಗೆ ಉಪವಿಭಾಗ ಸಮಿತಿ ಅಧ್ಯಕ್ಷರು ಹಾಗೂ ಉಪವಿಭಾಗ ಅಧಿಕಾರಿ ಕಚೇರಿಗೆ ಸಮಿತಿ ನೋಟಿಸ್‌ ನೀಡಿದೆ. ಉಪವಿಭಾಗ ವ್ಯಾಪ್ತಿಯ ಯಲ್ಲಾಪುರ, ಮುಂಡಗೋಡ, ಶಿರಸಿ ಮತ್ತು ಸಿದ್ದಾಪುರ ತಾಲೂಕು ವ್ಯಾಪ್ತಿಯ ಅತಿಕ್ರಮಣದಾರರಿಗೆ ಪುನರ್‌ ಪರಿಶೀಲನೆ ಕಾರ್ಯ ನಡೆಸಲಾಗಿದೆ. ಈ ಸಮಯದಲ್ಲಿ ಖುದ್ದಾಗಿ ಹಾಜರಿದ್ದು ಅರ್ಜಿದಾರರು ಕಾಯಿದೆಯಂತೆ 2005 ಡಿ.13 ಕ್ಕಿಂತಲೂ ಮುಂಚಿತವಾಗಿ ಕೊನೆ ಪಕ್ಷ 3 ತಲೆ ಮಾರಿನವರೆಗೆ ಪ್ರಧಾನವಾಗಿ ಅರಣ್ಯಗಳಲ್ಲಿ ವಾಸಿಸಿದ ಮತ್ತು ವಾಸ್ತವಿಕ ಜೀವನೋಪಾಯದ ಅವಶ್ಯಕತೆಗಳಿಗಾಗಿ ಅರಣ್ಯ ಅಥವಾ ಅರಣ್ಯ ಜಮೀನಿನ ಮೇಲೆ ಅವಲಂಬಿತವಾಗಿರುವ ಬಗ್ಗೆ ದೃಢೀಕೃತ ದಾಖಲೆಗಳನ್ನು ಹಾಜರು ಪಡಿಸಬೇಕಿದೆ. ಅತಿಕ್ರಮಣದಾರರು ಇದ್ದಂತಹ ದಾಖಲೆಗಳನ್ನೆಲ್ಲಾ 70, 80 ಕಿಮೀ ದಿಂದ ಶಿರಸಿಗೆ ಬಂದು ಸಮಿತಿ ಮುಂದೆ ಹಾಜರಾಗುತ್ತಿದ್ದಾರೆ. ಈ ವೇಳೆ ಇಂಥ ಅಭಿಪ್ರಾಯ ವ್ಯಕ್ತವಾಗಿದೆ.

ಪುನರ್‌ ಪರಿಶೀಲನೆ ಅರ್ಜಿ ತಾಲೂಕು ಕೇಂದ್ರದಲ್ಲಿ ವಿಚಾರಣೆ ಆಗಬೇಕಿದ್ದು ಕೇಂದ್ರ ಸರ್ಕಾರದ ನಿರ್ದೇಶನದಂತೆ ಅರ್ಜಿದಾರರ ಹಕ್ಕುಗಳು ಮತ್ತು ಪರಿಗಣಿಸಬಹುದಾದ ಸಾಕ್ಷಿಗಳ ಬಗ್ಗೆ ಕಂದಾಯ ಮತ್ತು ಅರಣ್ಯ ಇಲಾಖೆಯೇ ಅತಿಕ್ರಮಣದಾರರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.

ಇರುವ ಎಲ್ಲಾ ದಾಖಲೆ ಈಗಾಗಲೇ ನೀಡಿದ್ದು ಮತ್ತೆ ದಾಖಲೆ ಒದಗಿಸಿ ಎಂದು ನೋಟಿಸ್‌ ಬಂದಿದೆ. ಇಲ್ಲದ ದಾಖಲೆ ಎಲ್ಲಿಂದ ತರುವುದು. 30-35 ವರ್ಷದಿಂದ ಅತಿಕ್ರಮಣ ಮಂಜೂರಿಗೆ ಅರ್ಜಿ ದಾಖಲೆ ನೀಡುವುದರಲ್ಲಿ ಜೀವನ ಮುಗಿದು ಹೋಗಿದೆ. ಈಗ ಮತ್ತೆ 3 ತಲೆಮಾರಿನ ದಾಖಲೆ ಕೊಡಿ ಅಂತ ನೋಟಿಸ್‌ ಬಂದಿದೆ ಎಂದು ಶಿರಸಿ ಉಪವಿಭಾಗ ಸಮಿತಿ ಪುನರ್‌ ಪರಿಶೀಲನೆ ವಿಚಾರಣೆಗೆ ಹಾಜರಾದ ಯಲ್ಲಾಪುರ ತಾಲೂಕು ಕುಂದರಗಿ ಗ್ರಾಪಂ ವ್ಯಾಪ್ತಿಯ ಅರ್ಜಿದಾರರಾದ ಬಾಲು ಗೌಳಿ, ಸಾಧು ದೇವಾಡಿಗ, ಗೋಪಾಲ ನಾಯ್ಕ, ಗೋಪಾಲ ಪೂಜಾರಿ, ಲಲಿತಾ ಭಟ್ಟ ಆನೆಗುಂಡಿ ನೋವು ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.