ಕಟ್ಟಕಡೆ ವ್ಯಕ್ತಿಗಾಗಿ ಕೆಲಸ ಮಾಡಿದ್ದೇನೆ


Team Udayavani, Mar 16, 2018, 6:13 PM IST

3.jpg

ಹೊನ್ನಾವರ: ಘಂಟಾ ಘೋಷವಾಗಿ ಹೇಳುತ್ತೇನೆ. ನಾನು ಈ ಐದು ವರ್ಷ ಶಾಸಕನಾಗಿ ಜನಸಾಮಾನ್ಯರಿಗಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಆಶಯಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದೇನೆ. ಸ್ವಂತಕ್ಕಾಗಿ, ಕುಟುಂಬಕ್ಕಾಗಿ ಏನೂ ಮಾಡಿಲ್ಲ ಎಂದು ಶಾಸಕ ಮಂಕಾಳ ವೈದ್ಯ ಹೇಳಿದರು. ಅವರು ತಾಪಂ ಸಭಾಭವನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ತಮ್ಮ 12ವರ್ಷದ
ರಾಜಕೀಯ ಜೀವನದಲ್ಲಿ ಐದು ವರ್ಷ ಈ ಶಾಸಕತ್ವದ ಅವಧಿ ಅಂತಿಮವಾಗಲು 2ತಿಂಗಳು ಬಾಕಿ ಇದೆ. ಈ ಐದು ವರ್ಷದಲ್ಲಿ ಕೈಗೊಂಡಿರುವ ಅಭಿವೃದ್ಧಿ ಗಮನಾರ್ಹ ಸಾಧನೆ ತೃಪ್ತಿ ಸಂತೋಷ ತಂದಿದೆ ಎಂದರು.

ಜಿಲ್ಲಾಡಳಿತ ನೀಡಿದ ಪಟ್ಟಿಯಂತೆ ಕ್ಷೇತ್ರದಲ್ಲಿ ಪ್ರಸಕ್ತ 1266ಕೋಟಿ ರೂ, ಅನುದಾನದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡುವ ಮೂಲಕ ಇವೆಲ್ಲ ಸುಳ್ಳು ಎನ್ನುವವರಿಗೆ ಉತ್ತರ ನೀಡಿದ್ದಾರೆ. ಕ್ಷೇತ್ರದಲ್ಲಿ 50ಸೇತುವೆ ಮಂಜೂರಿ 
ತಂದಿದ್ದೇನೆ.ನಮ್ಮ ಹಳ್ಳಿ ನಮ್ಮಗ್ರಾಮ ಯೋಜನೆಯಡಿ 150ಕೋಟಿ ರೂ.ಗಳಿಗೂ ಅಧಿಕ ಅನುದಾನ ಮಂಜೂರಿ ತಂದು 15ಸೇತುವೆ, 45ಕಿ. ಮೀ. ಕಾಂಕ್ರೀಟ್‌ ರಸ್ತೆ ಕಾಮಗಾರಿ ನಡೆದಿದೆ. ಕ್ಷೇತ್ರದಲ್ಲಿನ ಅನಾರೋಗ್ಯ ಪೀಡಿತರ ನೆರವಿಗೆ 3.5ಕೋಟಿ ರೂ,ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ವಿತರಿಸಲಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯಲು ಬಡಮಕ್ಕಳಿಗೆ ಅನುಕೂಲ ಆಗುವಂತೆ ಹೊನ್ನಾವರ ತಾಲೂಕಿಗೆ 2ಅಂಬೇಡ್ಕರ ಶಾಲೆ ಮಂಜೂರಿ ತಂದಿದ್ದು,ಮಂಕಿಯಲ್ಲಿ 17ಕೊಟಿ 70ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ನಡೆದಿದೆ. ಸ್ವಂತ ನಿವೇಶನವನ್ನೂ ಮಂಜೂರಿ ಪಡೆಯಲಾಗಿದೆ. ಹೆರಂಗಡಿಯಲ್ಲಿ 22ಕೋಟಿ ಅಂದಾಜು ವೆಚ್ಚದಲ್ಲಿ ಅಂಬೇಡ್ಕರ ಶಾಲೆ ಅನುಷ್ಠಾಗೊಳ್ಳಲಿದೆ. ಕಳೆದ 25ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಆಗಿರದ ಸಾಧನೆಯನ್ನು ಈ ಐದು ವರ್ಷದಲ್ಲಿ ಮಾಡಿರುವ ಬಗ್ಗೆ ಹೆಮ್ಮೆ ಇದೆ. ಅಭಿವೃದ್ಧಿ ವಿಷಯದಲ್ಲಿ ಪಕ್ಷ ರಾಜಕಾರಣ ಸಲ್ಲದು. ತಮ್ಮ ಈ ಎಲ್ಲ ಸಾಧನೆಗಳಿಗೆ ವಿವಿಧ ಇಲಾಖೆ ಅಧಿಕಾರಿಗಳ, ಮಾಧ್ಯಮದವರ, ಬಡವರ, ಇಲ್ಲಿನ ಪರಿಸ್ಥಿತಿ, ಜನಪ್ರತಿನಿಧಿಗಳ ಸಹಕಾರ ಕಾರಣವಾಗಿದೆ ಎಂದರು.

ಮಾಗೋಡ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಮಾಗೋಡ ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ಅದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರಲ್ಲೇ ಕೇಳಬೇಕಿದೆ. ತಮ್ಮ ಕುಮ್ಮಕ್ಕಿದೆ ಎನ್ನುವವರು ದಾಖಲೆ ನೀಡಲಿ. ಮಾಧ್ಯಮಗಳು ಹೇಳಿಕೆಗಳನ್ನು ಆರೋಪಗಳನ್ನು ಪುರಾವೆ ಇಲ್ಲದೇ ಪ್ರಕಟಿಸಬಾರದು. ಆ ಹುಡುಗ ಬೀನಾ ವೈದ್ಯ
ಶಿಕ್ಷಣ ಸಂಸ್ಥೆಯಲ್ಲಿ 10ತಿಂಗಳು ಕೆಲಸ ಮಾಡಿದ್ದಾನೆ. ಪಗಾರು ಕೊಡಲಿಲ್ಲ ಎನ್ನುವವರು ದಾಖಲೆ ನೀಡಲಿ. ಆತ 2ತಿಂಗಳ ವೇತನ ತೆಗೆದುಕೊಂಡು ಹೋದಬಗ್ಗೆ ದಾಖಲೆ ಶಿಕ್ಷಣ ಸಂಸ್ಥೆಯಲ್ಲಿದೆ. ಬೀನಾ ವೈದ್ಯ ಶಿಕ್ಷಣ ಸಂಸ್ಥೆ ಕಟ್ಟಲು 15ಕೋಟಿ ಸಾಲ ಮಾಡಿದ್ದೇನೆ. ಶಿಕ್ಷಣ ಕ್ಷೇತ್ರದಲ್ಲಿ ಕೀಳು ರಾಜಕೀಯ ಮಾಡಬಾರದು ಎಂದು ಮಾಗೋಡು ಮಹಿಳಾ ವಾಹಿನಿಯ ಆರೋಪಗಳಿಗೆ ಮಂಕಾಳ ವೈದ್ಯರು
ಪ್ರತಿಕ್ರಿಯಿಸಿದರು.

ತಾಪಂ ಅಧ್ಯಕ್ಷ ಉಲ್ಲಾಸ ನಾಯ್ಕ, ಉಪಾಧ್ಯಕ್ಷೆ ಲಲಿತಾ ಈಶ್ವರ ನಾಯ್ಕ, ತಾಪಂ ಇಒ, ಜಿಪಂ ಸದಸ್ಯರಾದ ಶಿವಾನಂದ ಹೆಗಡೆ ಕಡತೋಕಾ, ಸವಿತಾ ಕೃಷ್ಣ ಗೌಡ, ಕೆಪಿಸಿಸಿ ಸದಸ್ಯ ವಿನೋದ ನಾಯ್ಕ ಕರ್ಕಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.