ನೀರಿನ ಸಮಸ್ಯೆಗೆ ಜಲಧಾರಾ ಪರಿಹಾರ

•ಬನವಾಸಿಯಲ್ಲಿ 2.5 ಕೋಟಿ ರೂ. ವೆಚ್ಚದ ಯೋಜನೆಯ ಸರ್ವೇ ಕಾರ್ಯಕ್ಕೆ ಚಾಲನೆ

Team Udayavani, Aug 2, 2019, 10:39 AM IST

uk-tdy-1

ಶಿರಸಿ: ವರದಾ ನದಿ ದಂಡೆಯ ಮೇಲಿದ್ದರೂ ತಾಲೂಕಿನ ಬನವಾಸಿಯ ಜನತೆ ಬೇಸಿಗೆ ಬಂದರೆ ಕುಡಿಯುವ ನೀರಿನ ತೊಂದರೆ ಅನುಭವಿಸುತ್ತಿದ್ದಾರೆ. ಈಗ ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಜಲಧಾರಾ ಯೋಜನೆ ಸರ್ವೇ ಕಾರ್ಯ ನಡೆದಿದ್ದು, ಬನವಾಸಿ ಜನತೆಯಲ್ಲಿ ಆಶಾಭಾವ ಮೂಡಿದೆ.

8 ಸಾವಿರ ಜನರಿರುವ ಬನವಾಸಿಗೆ ಕುಡಿಯುವ ನೀರು ಪೂರೈಸುವುದು ದೊಡ್ಡ ಸಮಸ್ಯೆಯಾಗಿತ್ತು. ಇಲ್ಲಿ 2147 ಮನೆಗಳಿದ್ದರೂ ಬನವಾಸಿ ಗ್ರಾಪಂ 547 ಮನೆಗಳಿಗಷ್ಟೇ ನಲ್ಲಿ ನೀರು ಒದಗಿಸಿತ್ತು. 106 ಸಾರ್ವಜನಿಕ ನಲ್ಲಿಯ ಮುಂದೆ ಉಳಿದವರು ಕೊಡ ಹಿಡಿದು ನಿಲ್ಲಬೇಕಿತ್ತು. ಹೊಸ ನಲ್ಲಿ ಸಂಪರ್ಕಕ್ಕೆ ಸಾರ್ವಜನಿಕರಿಂದ ಅರ್ಜಿ ಬಂದರೂ ಅದನ್ನು ಈಡೇರಿಸಲು ಗ್ರಾಪಂನಿಂದ ಸಾಧ್ಯವಾಗಿರಲಿಲ್ಲ. ಇಲ್ಲಿಯ ಮಧುಕೇಶ್ವರ ದೇವಾಲಯದ ಬಳಿ ವರದಾ ನದಿಯಿಂದ ಮತ್ತು ಎರಡು ಬೋರ್‌ವೆಲ್ ಮೂಲಕ ನೀರು ಸಂಗ್ರಹಿಸಿ ಬನವಾಸಿ ಜನತೆಗೆ ಪೂರೈಸುವಷ್ಟರಲ್ಲಿ ಇಲ್ಲಿಯ ಗ್ರಾಪಂ ಹೈರಾಣಾಗುತ್ತಿತ್ತು.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ವರದಾ ನದಿ ನೀರು ಬತ್ತುತ್ತಿದ್ದ ಕಾರಣ ನೀರು ಸರಬರಾಜು ಮಾಡುತ್ತಿದ್ದ ಪಂಪ್‌ಗ್ಳ ಜಾಕ್‌ವೆಲ್ ಮಟ್ಟಕ್ಕಿಂತ ನೀರು ಕೆಳಗಿಳಿದು ಗ್ರಾಪಂ ಅಸಹಾಯಕತೆ ವ್ಯಕ್ತಪಡಿಸುವ ಸ್ಥಿತಿ ಉಂಟಾಗುತ್ತಿತ್ತು.

ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ರಾಜ್ಯ ಸರ್ಕಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆ-2 ಅಡಿಯಲ್ಲಿ ಕಳೆದ ವರ್ಷ 95 ಲಕ್ಷ ರೂ. ಬಿಡುಗಡೆ ಮಾಡಿದೆ. ಆದರೆ, ಈ ಹಣದಲ್ಲಿ ಕೈಗೊಳ್ಳುವ ಕಾಮಗಾರಿ ಬನವಾಸಿಯ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವಂತಿರಲಿಲ್ಲ. ಹೀಗಾಗಿ, ಬನವಾಸಿಗೆ ಕುಡಿಯುವ ನೀರಿನ ಯೋಜನೆಯನ್ನು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಸೇರಿಸಲಾಗಿದೆ.

ಇದುವರೆಗೂ ನೀರು ಸಂಗ್ರಹಿಸುತ್ತಿದ್ದ ಜಾಗದ ಬದಲು ಜಲಧಾರಾ ಯೋಜನೆಯಲ್ಲಿ ಹೊಸ ಸ್ಥಳ ಗುರುತಿಸಲಾಗಿದೆ. ಒಟ್ಟು 2.5 ಕೋಟಿ ರೂ. ಈ ಯೋಜನೆಯಲ್ಲಿ ತಿಗಣಿಯಲ್ಲಿ ವರದಾ ನದಿಗೆ ಚೆಕ್‌ ಡ್ಯಾಂ ನಿರ್ಮಿಸಿ ನೀರು ಸಂಗ್ರಹಿಸಲಾಗುತ್ತಿದೆ. ಅಲ್ಲಿಂದ 2 ಕಿಮೀ ದೂರದ ಬನವಾಸಿಗೆ ಪೈಪ್‌ ಮೂಲಕ ನೀರು ತಂದು 1.5 ಲಕ್ಷ ಲೀಟರ್‌ ಸಾಮರ್ಥ್ಯದ ಟ್ಯಾಂಕ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಈ ಟ್ಯಾಂಕ್‌ನಿಂದ ಬನವಾಸಿಯ ಎಲ್ಲ ಮನೆಗಳಿಗೆ ಪೈಪ್‌ಲೈನ್‌ ಅಳವಡಿಸಿ ನೀರು ಸರಬರಾಜು ಮಾಡಲಾಗುತ್ತದೆ. ಯೋಜನೆ ಜಾರಿಯಾದ ಬಳಿಕ ಬನವಾಸಿಯ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಂತಾಗಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.