![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!
ಪ್ರವಾಸಕ್ಕೆ ತೆರಳಿದ್ದ ಹುಬ್ಬಳ್ಳಿಯ ಕುಟುಂಬ...ಒಬ್ಬಳ ರಕ್ಷಣೆಗೆ ಮುಂದಾಗಿ ಐವರು ನೀರುಪಾಲು
Team Udayavani, Apr 21, 2024, 6:50 PM IST
![1-weqwwqe](https://www.udayavani.com/wp-content/uploads/2024/04/1-weqwwqe-1-620x330.jpg)
ಜೋಯಿಡಾ :ಪಿಕ್ನಿಕ್ ತೆರಳಿದ್ದ ವೇಳೆ ಕಾಳಿ ನದಿಯಲ್ಲಿ ಮುಳುಗಿದ ಆರು ವರ್ಷದ ಮಗುವನ್ನು ರಕ್ಷಿಸಲು ಹೋಗಿ ನಾಲ್ವರು ಮಕ್ಕಳ ಸಹಿತ ಆರು ಮಂದಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಾಂಡೇಲಿ ಬಳಿ ರವಿವಾರ ಸಂಭವಿಸಿದೆ.
ದಾಂಡೇಲಿ ಬಳಿಯ ಬಿರಂಪಾಲಿ ಗ್ರಾಮ ಸಮೀಪದ ಅಕೋಡಾ ಮಜಿರೆಯಲ್ಲಿ ಈ ದುರಂತ ನಡೆದಿದೆ. ಹುಬ್ಬಳ್ಳಿಯ ಈಶ್ವರ ನಗರದ ನಜೀರ್ ಅಹ್ಮದ್ ಹೊನ್ನಂಬಲ್ (40), ಇವರ ಪುತ್ರಿಯರಾದ ಮೊಹಿನ್ ಅಹ್ಮದ್ (6), ಅಲ್ಪಿಯಾ ಅಹ್ಮದ್ (10) ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದ ನಜೀರ್ ಅವರ ಸಹೋದರಿ ರೇಷ್ಮಾ ಉನ್ನೀಸಾ ತೌಫಿಕ್ ಅಹ್ಮದ್ (38), ಅವರ ಪುತ್ರ ಅಬೀದ್ ಅಹ್ಮದ್ (12), ಪುತ್ರಿ ಇಫ್ರಾ ಅಹ್ಮದ್ (15) ಮೃತಪಟ್ಟವರು. ಇವರ ಜತೆಗಿದ್ದ ಇನ್ನಿಬ್ಬರು ನದಿ ದಡದಲ್ಲಿಯೇ ನಿಂತಿದ್ದರಿಂದ ಸುರಕ್ಷಿತವಾಗಿದ್ದಾರೆ.
ದುರಂತವಾದ ಪಿಕ್ನಿಕ್
ನಜೀರ್ ಅವರ ಸಹೋದರಿ ರೇಷ್ಮಾ ಬೆಂಗಳೂರಿನಿಂದ ಸಂಬಂಧಿ ಕರ ಭೇಟಿಗಾಗಿ ಹುಬ್ಬಳ್ಳಿಗೆ ಆಗಮಿಸಿ ದ್ದರು. ಹುಬ್ಬಳ್ಳಿಯಿಂದ ದಾಂಡೇಲಿ ಮಾರ್ಗವಾಗಿ ನಜೀರ್ ಹಾಗೂ ರೇಷ್ಮಾ ಕುಟುಂಬಸ್ಥರು ಕಾರವಾರಕ್ಕೆ ತೆರಳು
ತ್ತಿದ್ದರು. ಮಾರ್ಗಮಧ್ಯೆ ಅಕೋಡಾ ಬಳಿ ಕಾಳಿ ನದಿ ನೋಡಲು ಇಳಿದಿದ್ದರು. ಇದು ಅತ್ಯಂತ ದುರ್ಗಮ ಪ್ರದೇಶ
ವಾಗಿದ್ದು, ಯಾರೂ ನದಿಗೆ ಇಳಿಯ ಬಾರದು ಎಂಬ ಎಚ್ಚರಿಕೆ ಇದ್ದರೂ ಮಕ್ಕಳ ಸಹಿತ ನದಿಗೆ ಇಳಿದಿದ್ದರು.
ಮಗು ರಕ್ಷಿಸಲು ಹೋಗಿ ಅವಘಡ
ಕಾಳಿ ನದಿ ದಡದಲ್ಲಿ ನಜೀರ್ ಅವರ ಪುತ್ರಿ ಮೊಹಿನ್ ಅಹ್ಮದ್ ಆಟವಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿದಳು.ಜತೆಗಿದ್ದ ಅಲ್ಪಿಯಾ ಅಹ್ಮದ್, ಅಬೀದ್ ಅಹ್ಮದ್, ಇಫ್ರಾ ಅಹ್ಮದ್ ಆಕೆಯನ್ನು ರಕ್ಷಿಸಲು ಯತ್ನಿಸಿದರು. ನೋಡ ನೋಡುತ್ತಿದ್ದಂತೆ ನಾಲ್ವರೂ ನೀರಿನ ಸೆಳೆತಕ್ಕೆ ಸಿಲುಕಿದ್ದು, ಇದನ್ನು ಗಮನಿಸಿದ ನಜೀರ್ ಮಕ್ಕಳ ರಕ್ಷಣೆಗೆ ಧಾವಿಸಿದ್ದರು. ಆಗ ಅವರು ಕೂಡ ನೀರಿನ ಸೆಳೆತಕ್ಕೆ ಸಿಲುಕಿದರು. ದಡದಲ್ಲಿದ್ದ ರೇಷ್ಮಾ ಅಹ್ಮದ್ ಕೂಡ ರಕ್ಷಣೆಗೆ ಇಳಿದಾಗ ಅವರೂ ನೀರುಪಾಲಾದರು.
ಮೃತದೇಹಗಳನ್ನು ಮೇಲೆತ್ತಿ ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.