ಕುಡಿವ ನೀರಿನ ಯೋಜನೆ ಹಸ್ತಾಂತರಕ್ಕೆ  ನಕಾರ 


Team Udayavani, Oct 14, 2018, 5:15 PM IST

14-october-19.gif

ಜೋಯಿಡಾ: ರಾಮನಗರ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇನ್ನೂ ಮುಗಿಯದೆ ಉಳಿದಿದ್ದು, ಕೆಲಸ ಪೂರ್ಣಗೋಳಿಸಿ ಕೊಟ್ಟರೆ ಮಾತ್ರ ಗ್ರಾಪಂ ಹಸ್ತಾಂತರಿಸಿಕ್ಕೊಳ್ಳುವುದಾಗಿ ಗ್ರಾಪಂ ಪ್ರತಿನಿಧಿಗಳು ಇಲಾಖೆಗೆ ಎಚ್ಚರಿಸಿದ ಘಟನೆ ತಾಪಂ ಕೆಡಿಪಿ ಸಭೆಯಲ್ಲಿ ನಡೆಯಿತು.

ರಾಮನಗರ ಕುಡಿಯುವ ನೀರಿನ ಯೋಜನೆಯಲ್ಲಿ ಅಧಿಕಾರಿ ಸುಳದಾಳ ಸರಿಯಾಗಿ ಕೆಲಸ ಮಾಡದೆ ನಿರ್ಲಕ್ಷಿಸಿದ್ದಾರೆ. ಯೋಜನೆಯಂತೆ ಇಲ್ಲಿ ಕಾಮಗಾರಿ ಕಳಪೆಯಾಗಿದ್ದು ಹಣದ ದುರುಪಯೋಗ ಆಗಿದ್ದ ಬಗ್ಗೆ ಜನಪ್ರತಿನಿಧಿಗಳೇ ದೂರಿದ್ದರು. ಅದಾಗ್ಯೂ ಈ ಯೋಜನೆಯನ್ನು ಗ್ರಾಪಂಗೆ ಹಸ್ತಾಂತರಿಸಿಕೊಳ್ಳುವಂತೆ ಮೇಲಾಧಿಕಾರಿಗಳಿಂದ ಒತ್ತಡ ಬಂದಿದ್ದರು ಗ್ರಾಪಂ ಒಪ್ಪಿರಲಿಲ್ಲ. ಈಗ ಮತ್ತೆ ಇದೇ ವಿಷಯದಲ್ಲಿ ಚರ್ಚೆ ನಡೆದಿದ್ದು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕಾಂಬಳೆ ಹಾಗೂ ತಾ.ಪಂ ಸದಸ್ಯ ಸರತ್‌ ಗುರಜರ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲಸ ಪೂರ್ಣಗೊಳಿಸಿಕೊಡದೆ ಹಸ್ತಾಂತರಿಸುವ ಪ್ರಶ್ನೆಯಿಲ್ಲ ಎಂದು ಖಡಕ್ಕಾಗಿ ಎಚ್ಚರಿಸಿದರು.

ಜಿಪಂ ಸದಸ್ಯ ಸಂಜಯ ಹಣಬರ ಕೆಲಸ ಪೂರ್ಣಗೊಳಿಸಿ ಕೂಡಲೆ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಅಧಿಕಾರಿಗೆ ತಿಳಿಸಿದರು. ತಾಲೂಕಿನಾದ್ಯಂತ ಸ್ವತ್ಛತಾ ಅಭಿಯಾನ ಕಾಟಾಚಾರಕ್ಕೆ ನಡೆಯುತ್ತಿದೆ ಎಂದು ಪತ್ರಿಕೆ ವರದಿ ಮಾಡಿರುವುದನ್ನು ಸಭೆಯ ಗಮನಕ್ಕೆ ತಂದ ಇಒ, ಸ್ವತ್ಛತೆ ಎಲ್ಲರ ಜವಾಬ್ದಾರಿಯಾಗಿದೆ ಎಂದರು. ತಾಲೂಕಿನಲ್ಲಿ ವೈದ್ಯರ ಕೊರತೆ ಇದ್ದು ಕೂಡಲೇ ಭರ್ತಿ ಮಾಡಲು ಕ್ರಮಕೈಗೊಳ್ಳಬೇಕೆಂದು ತಾಲೂಕು ವೈದ್ಯಾಧಿ ಕಾರಿ ಸುಜಾತಾ ಉಕ್ಕಲಿ ಸಭೆಗೆ ವಿನಂತಿಸಿದರು.

ರಾಮನಗರದ ಬಡ ಜನ ಈ ಹೆದ್ದಾರಿ ಪಕ್ಕದಲೇ ಅಂಗಡಿ ವ್ಯಾಪಾರ ನಡೆಸಿ ಬದುಕು ಕಟ್ಟಿಕೊಂಡಿದ್ದಾರೆ ಹಾಗಾಗಿ ಅವರ ಬದುಕಿಗೆ ಆಸರೆ ದೊರಕುವಂತೆ ರಾಮನಗರ ಹೆದ್ದಾರಿ ಅಭಿವೃದ್ಧಿ ಮುಂದುವರಿಸಬೇಕು ಎಂದು ಸದಸ್ಯ ಶರತ ಗುರ್ಜರ ಅಧಿಕಾರಿಗಳಿಗೆ ಒತ್ತಾಯಿಸಿದರು.

ಬೆವರಿಳಿಸಿದ ಸಭಾಂಗಣ: ತಾಪಂ ಪ್ರಗತಿ ಪರಿಶೀಲನಾ ಸಭೆ ನಡೆಯುವ ಸಭಾಂಗಣ ಗೋಡಾನ್‌ನಂತಿದ್ದು, ವಿದ್ಯುತ್‌ ಇಲ್ಲದಾಗ ಬಿಸಿಲಿನ ತಾಪಕ್ಕೆ ಬೆಂದು ಹೋಗುವಷ್ಟು ವೇದನೆ ಉಂಟುಮಾಡುತ್ತಿತ್ತು. ಪ್ರತಿನಿತ್ಯ ಎ.ಸಿ. ಚೆಂಬರನಲ್ಲಿ ಕುಳಿತುಕೊಳ್ಳುವ ಅಧಿಕಾರಿಗಳಿಗೆ ಬೆವರಿನಿಂದ ಬಸವಳಿಯುವಂತೆ ಮಾಡುತ್ತಿತ್ತು. ಮೈಕ್‌ ಇಲ್ಲದೆ ವರದಿ ವಾಚಿಸುವಲ್ಲಿ ಕೆಲ ಅಧಿಕಾರಿಗಳೂ ಇದೆ ಸೂಕ್ತ ಸಮಯ ಅಂತ ಸಣ್ಣದಾಗಿ ಗೊಣಗುಟ್ಟು ಹೋಗಲು ಅನುಕೂಲ ಕೂಡಾ ಆಗಿದ್ದು ವಿಶೇಷ. ಅಧ್ಯಕ್ಷೆ ನರ್ಮದಾ ಪಾಕ್ಲೃಕರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ತಹಶೀಲ್ದಾರ್‌ ಸಂಜಯ ಕಾಂಬಳೆ, ಜಿಪಂ ಸದಸ್ಯ ರಮೇಶ ನಾಯ್ಕ, ತಾಪಂ ಉಪಾಧ್ಯಕ್ಷ ವಿಜಯ ಪಂಡಿತ ಹಾಗೂ ಸದಸ್ಯರು, ಗ್ರಾಪಂ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.