ಸಿದ್ಧಾರ್ಥ ಎಜ್ಯುಕೇಶನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಕ್ಯಾಪ್ಟನ್ ಕೆ. ಆರ್. ನಾಯ್ಕ ನಿಧನ
Team Udayavani, Aug 28, 2021, 3:35 PM IST
ಭಟ್ಕಳ: ನಿವೃತ್ತ ಸೈನಿಕ ಹಾಗೂ ಸಿದ್ಧಾರ್ಥ ಎಜ್ಯುಕೇಶನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಕ್ಯಾಪ್ಟನ್ ಕೆ. ಆರ್. ನಾಯ್ಕ ಅವರು ಇಂದು ಮದ್ಯಾಹ್ನ ತಮ್ಮ ಸ್ವಗ್ರಹದಲ್ಲಿ ವಯೋಸಹಜ ಕಾಯಿಲೆಯಿಂದ ಮೃತ ನಿಧನರಾಗಿದ್ದಾರೆ.
ಮೃತರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ಭಟ್ಕಳದಲ್ಲಿಯೇ ಉಳಿದುಕೊಂಡಿದ್ದರು. ಕಳೆದ ಸುಮಾರು ಹತ್ತು ವರ್ಷಗಳ ಹಿಂದೆ ಸಿದ್ಧಾರ್ಥ ಎಜ್ಯುಕೇಶನ್ ಟ್ರಸ್ಟ್ ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ ಮಾಡಿದ್ದಲ್ಲದೇ ಅನೇಕ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ ಅವರ ಇಚ್ಚೆಯ ಕೋರ್ಸ್ ಗಳನ್ನು ಪಡೆಯಲು ಸಹಕಾರಿಯಾಗಿದ್ದರು.
ಇದನ್ನೂ ಓದಿ:ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪತ್ನಿಗೆ ಇ.ಡಿ ಸಮನ್ಸ್
ನಿವೃತ್ತ ಸೈನಿಕರ ಸಂಘದ ಗೌರವಾಧ್ಯಕ್ಷರಾಗಿದ್ದಲ್ಲದೇ ಇನ್ನೂ ಅನೇಕ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.