ಅಕಾಡೆಮಿಗಳು‌ ಅಕಾಡಮ್ಮಿಗಳಾಗಿವೆ: ಕದಂಬ ಸೈನ್ಯ ಆರೋಪ


Team Udayavani, Oct 9, 2021, 4:05 PM IST

ಅಕಾಡೆಮಿಗಳು‌ ಅಕಾಡಮ್ಮಿಗಳಾಗಿವೆ: ಕದಂಬ ಸೈನ್ಯ ಆರೋಪ

ಶಿರಸಿ: ಅಕಾಡೆಮಿಗಳನ್ನು ಅಕಾಡೆಮ್ಮಿಗಳಾಗಿವೆ. ಕನ್ನಡಿಗರಿಗೆ ಮುಟ್ಟುವಂತಹ ಯಾವುದೇ ಕೆಲಸ ಆಗುತ್ತಿಲ್ಲ ಎಂದು ಕದಂಬ ಸೈನ್ಯದ ರಾಜ್ಯ ಅಧ್ಯಕ್ಷ ರಮೇಶ ಬೇಕ್ರೀ ಹೇಳಿದರು.

ಅವರು‌ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ‌ ಮಾತ‌ನಾಡಿ, ಕನ್ನಡ ನೆಲದ ಸರ್ಕಾರಿ ಅಕಾಡೆಮಿಗಳು ಕನ್ನಡ, ಸಂಸ್ಕೃತಿ ಬೆಳಿಸಿಲ್ಲ ಎಂದರು.

ಸಂವಿಧಾನದಲ್ಲಿರುವ ಭಾಷಾ ವಿಧಿಗಳು ಕಲಂ 343-351 ರವರೆಗೆ ತಿದ್ದುಪಡಿಯಾಗಲೇಬೇಕು. ಅದೇ ಭಾಷೆ ರಾಷ್ಟ್ರೀಯ ಪಕ್ಷಗಳು ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಕದಂಬ ಸೈನ್ಯ ತೀವ್ರವಾಗಿ ವಿರೋಧಿಸುತ್ತದೆ ಎಂದ ಅವರು, ಅಸಮಾನತೆಗೆ ಮದ್ದು, ರಾಜ್ಯ ಸರ್ಕಾರ ಮತ್ತು ವಿರೋಧ ಪಕ್ಷಗಳು ತೀವ್ರ ಒತ್ತಡ ತರಬೇಕು. ಕನ್ನಡ ನಾಡಿನಲ್ಲಿ ನಾಮಫಲಕಗಳು ಮತ್ತು ಜಾಹೀರಾತುಗಳು ದಪ್ಪ ಅಕ್ಷರಗಳಲ್ಲಿ ಪ್ರಕಟವಾಗಲೇಬೇಕು ಎಂದರು.

ನಾವು ಕನ್ನಡಿಗರು ಎಂದು ಸ್ವಾಭಿಮಾನದಿಂದ ಹೇಳಬೇಕು, ಆಮೇಲೆ ನಿಮ್ಮ ಜನಾಂಗದ ಹೆಸರು ಹೇಳಿಕೊಳ್ಳಿ ನಾವು ಮೊದಲು ಕನ್ನಡಿಗರು ನಂತರ ಭಾರತೀಯರು. ಕನ್ನಡ ನೆಲದಲ್ಲಿ ಬದುಕು ಸಾಗಿಸುತ್ತಿರುವ ಹಿಂದಿ, ತಮಿಳು, ಉರ್ದು, ತೆಲುಗು, ಇಂಗ್ಲಿಷ್, ರಾಜಸ್ತಾನಿ, ಮರಾಠಿ ಮತ್ತಿತರ ಭಾಷಿಕರು ಸಾರ್ವತ್ರಿಕವಾಗಿ ಕನ್ನಡ ಮಾತನಾಡಬೇಕು ಹಾಗೂ ವ್ಯವಹರಿಸಬೇಕು. ನಿಮ್ಮ ಭಾಷೆ ಪ್ರೀತಿಸಿ, ನಿಮ್ಮ ಜೀವ ಭಾಷೆ ಕನ್ನಡ ಬಳಸಿ, ಕನ್ನಡ ಬೇಡವೇ? ಎಂದೂ ಹೇಳಿದರು.

ಕನ್ನಡ ನಾಡಿನ ನಿರಾಭಿಮಾನಿ ಕನ್ನಡಿಗರು, ಕನ್ನಡ ರಾಜಕೀಯ ಇಚ್ಛಾಶಕ್ತಿ ಇಲ್ಲದ ರಾಜಕಾರಣಿಗಳು, ಕನ್ನಡ,  ಕನ್ನಡ ಮಾತನಾಡದೇ ಇರುವ ಪರಭಾಷಿಕರು, ಕನ್ನಡ ವಿರೋಧಿಸುವವರು ಕೌರವರು. ಸ್ವಾಭಿಮಾನಿ ಕನ್ನಡಿಗರು, ಕನ್ನಡಕ್ಕಾಗಿ ಹೋರಾಟ ಮಾಡುವವರು, ಕನ್ನಡ ರಾಜಕೀಯ ಇಚ್ಛಾಶಕ್ತಿ ಇರುವ ಕನ್ನಡಿಗರು, ಕನ್ನಡವನ್ನು ಪ್ರೀತಿಸುವ ಪರಭಾಷಿಕರು, ಪಾಂಡವರು. ಅಧರ್ಮದ ವಿರುದ್ಧ ಧರ್ಮದ ಹೋರಾಟ.

ಕನ್ನಡ ನೆಲದ ನಟ-ನಟಿಯರು, ಕಿರುತೆರೆಯ ನಟ-ನಟಿಯರು, ನಿರೂಪಕರು ಕನ್ನಡವನ್ನು ಕಡ್ಡಾಯವಾಗಿ ಮಾತನಾಡಲೇಬೇಕು ಎಂದರು. ಕನ್ನಡ ನೆಲದ ಉನ್ನತ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕನ್ನಡ ಮಾತನಾಡಿ, ವ್ಯವಹರಿಸಬೇಕು. ಕರ್ನಾಟಕದ ಎಲ್ಲಾ ಸರ್ಕಾರಿ ನೌಕರರ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂಬ ಕಾಯಿದೆ ಕಡ್ಡಾಯವಾಗಿ ಜಾರಿಗೆ ತರಬೇಕು. ಸಚಿವಾಲಯ ಅಧಿಕಾರಿಗಳಿಂದ ಕನ್ನಡಕ್ಕೆ  ಕುತ್ತು ಬರುತ್ತಿದೆ ರಾಜ್ಯ ಸರ್ಕಾರ ಜಾಗೃತಿ ವಹಿಸಬೇಕು ಎಂದರು.

ಕನ್ನಡ ನೆಲದ ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕುಗಳು ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಪರಭಾಷಿಕರಿಗಲ್ಲ. ಕನ್ನಡ ಬಳಸಬೇಕು ಹಾಗೂ ವ್ಯವಹರಿಸಬೇಕು. ಸರ್ಕಾರಿ ವಾಹನಗಳಿಗೆ ಮಾತ್ರ ಕನ್ನಡ ಮತ್ತು ಆಂಗ್ಲ ಭಾಷೆಯ ಅಂಕಿಗಳಿವೆ. ಖಾಸಗಿ ವಾಹನಗಳಿಗೂ ಕೂಡ ಕಡ್ಡಾಯವಾಗಿ ಕನ್ನಡ ಮತ್ತು ಆಂಗ್ಲ ಭಾಷೆಯ ಅಂಕಿಗಳನ್ನು ಬಳಸುವಂತೆ ನಿಯಮ ಜಾರಿಗೆ ತರಬೇಕು ಎಂದರು.

ಕರ್ನಾಟಕದ ಕನ್ನಡಿಗರ ಅಭಿಮಾನವೇ ಅದರ ಅಸ್ಥಿತ್ವದ ದಾರಿದೀಪ. ಎರಡು ಶತಮಾನ ಬ್ರಿಟೀಷರ ಆಡಳಿತದಲ್ಲೂ ಕನ್ನಡ ಅಳಿಯಲಿಲ್ಲ. ಆದರೆ ಕನ್ನಡಿಗರ ಸರ್ಕಾರಗಳಲ್ಲೇ ಸಂಪೂರ್ಣವಾಗಿ ಕಡೆಗಣನೆಯಾಗಿದೆ. ದುರಾದೃಷ್ಟಕರವೆಂದರೆ ಬಹುತೇಕ ಕನ್ನಡಿಗರಷ್ಟು ಪರಭಾಷೆ ವ್ಯಾಮೋಹಿಗಳು. ಯಾವ ಭಾಷೆಯವರು ಇಲ್ಲ. ಕನ್ನಡಿಗರು ಸಾರ್ವತ್ರಿಕವಾಗಿ ಕಡ್ಡಾಯವಾಗಿ ಕನ್ನಡ ಮಾತನಾಡಬೇಕು ಹಾಗೂ ವ್ಯವಹರಿಸಬೇಕು, ಕನ್ನಡವು ಅನ್ಯ ಭಾಷೆಗಳಿಗೆ ಆಹಾರವಾಗದಂತೆ ನೋಡಿಕೊಳ್ಳಬೇಕಾದ್ದು ಕನ್ನಡಿಗರ ಕರ್ತವ್ಯ ಎಂದರು.

ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು-ವ್ಯವಹರಿಸಬೇಕು. ಸರ್ಕಾರಿ ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ ಬಳಕೆಯು ವಿಸ್ತಾರವಾಗುವಂತೆ ಮಾಡಬೇಕು ಎಂದ ಅವರು,

ಕನ್ನಡಿಗರ ಉದ್ಯೋಗದಾತೆ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಕಾಯಿದೆಯಾಗಿ ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸದೆ ಮಹಿಷಿ ವರದಿ ಬಗ್ಗೆ ತಾತ್ಸಾರ ಮೊದಲು ಬಿಡಬೇಕು ಎಂದರು.

ಕನ್ನಡ ಕನ್ನಡಿಗರ ಬಗ್ಗೆ ಸರ್ಕಾರಗಳು ತಾತ್ಸಾರ ಮನೋಭಾವ ತೋರುತ್ತಿರುವುದರಿಂದ ಸಮಸ್ತ ಕನ್ನಡಿಗರು ಅಂಥ ಸರ್ಕಾರಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲೇಬೇಕಿದೆ‌ ಎಂದೂ ಹೇಳಿದರು.

ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ , ಮೈಸೂರು ಜಿಲ್ಲಾಧ್ಯಕ್ಷ ಎ.ನಾಗೇಂದ್ರ, ಜಾತ್ಯಾತೀತ ಮಹಿಳಾ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷೆ ಕನ್ನಡ ರತ್ನ ರಾಜ್ಯ ಸಂಚಾಲಕಿ ಶಾಂತಮ್ಮ ಮತ್ತು ಕದಂಬ ಸೈನ್ಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.