Kadambotsava: ವೇದಿಕೆ ಚುನಾವಣಾ ಪ್ರಚಾರ ಸಭೆಯಾಗಿದ್ದು ದುರ್ದೈವ: ಕಾಗೇರಿ ಕಿಡಿ
Team Udayavani, Mar 11, 2024, 6:31 PM IST
ಶಿರಸಿ: ಜಿಲ್ಲೆಗೆ ಆಗಮಿಸಿದ್ದ ಸಿಎಂ ಸಿದ್ಧರಾಮಯ್ಯ ಅವರು ಕನ್ನಡಿಗರ ಹೆಮ್ಮೆಯ ಕದಂಬೋತ್ಸವ ವೇದಿಕೆಯನ್ನು ಚುನಾವಣಾ ಪ್ರಚಾರ ಸಭೆಯಾಗಿಸಿಕೊಂಡಿದ್ದು ದುರ್ದೈವ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಧಾನ ಹೊರ ಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ಕದಂಬೋತ್ಸವ ಭಾವಹಿಸಿದ್ದು ಸಂತಸ. ಆದರೆ, ಅವರು ಪಂಪ ಪ್ರಶಸ್ತಿ ಇಲ್ಲೇ ಕೊಡಬೇಕಿತ್ತು. ಬೇರೆಲ್ಲೋ ನೀಡಿದ್ದು ಕನ್ನಡಿಗರ ಹೆಮ್ಮೆಯ ಉತ್ಸವಕ್ಕೆ, ಜಿಲ್ಲೆಗೆ ಶೋಭೆಯಲ್ಲ. ನಮ್ಮ ಜಿಲ್ಲೆಗೆ ಬಂದಾಗ ಜಿಲ್ಲೆಯ ಅಭಿವೃದ್ದಿ, ಕನ್ನಡನಾಡಿನ ಸಂಸ್ಕೃತಿ, ಅದರ ಬೆಳವಣಿಗೆ ಸರಕಾರದ ಬದ್ಧತೆ ಆಗಿತ್ತು. ಆ ಬಗ್ಗೆ ಮಾತನಾಡಬೇಕಿತ್ತು. ಆದರೆ, ಇಡೀ ವೇದಿಕೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ವೇದಿಕೆ ಮಾಡಿಕೊಂಡರು. ಇದು ಸರಕಾರಕ್ಕೂ ಗೌರವ ಅಲ್ಲ ಎಂದು ಆಕ್ಷೇಪಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ವಿವಿಧ ಹಂತದ ಪದಾಧಿಕಾರಿಗಳಾದ ಗುರುಪ್ರಸಾದ ಹೆಗಡೆ, ಶಿವಾಜಿ ನರಸಾನಿ, ಅಶೋಕ ಚಲವಾದಿ, ಪ್ರಶಾಂತ ನಾಯ್ಕ, ಸದಾನಂದ ಭಟ್ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ