ಪಶ್ಚಿಮ ಘಟ್ಟದಲ್ಲೂ ಕಳಿಂಗ ಕಪ್ಪೆ ಪತ್ತೆ

ಪೂರ್ವ ಘಟ್ಟದಲ್ಲಿ ಕಾಣಸಿಗುವ ಅಪರೂಪದ ಸರಿಸೃಪ ಇದು

Team Udayavani, Aug 28, 2020, 6:52 PM IST

uk-tdy-1

ಶಿರಸಿ: ಭಾರತದ ಪೂರ್ವ ಘಟ್ಟದಲ್ಲಿ ಕಾಣಸಿಗುತ್ತಿದ್ದ ಕಳಿಂಗ ಕಪ್ಪೆ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಪತ್ತೆಯಾಗಿದೆ. ಜೀವವೈವಿಧ್ಯ ಸಂಶೋಧಕ ತಾಲೂಕಿನ ವರ್ಗಾಸರದ ಅಮಿತ ಹೆಗಡೆ ತಂಡ ಇದನ್ನು ಪತ್ತೆ ಹಚ್ಚಿದ್ದಾರೆ.

ಕವಿವಿ ಧಾರವಾಡದ ಸಂತಾನೋತ್ಪತ್ತಿ ನಡವಳಿಕೆ ಮತ್ತು ಜೀವ ಸಂವಹನ ಪ್ರಯೋಗಾಲಯದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಪಿಎಚ್‌ಡಿ ಅಧ್ಯಯನ ನಡೆಸುತ್ತಿರುವ ಇವರು ಪ್ರೊ| ಗಿರೀಶ ಕಾಡದೇವರು ಅವರ ಮಾರ್ಗದರ್ಶನದಲ್ಲಿ ಹಾಗೂ ಪುಣೆಯ ಝೂವಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾದ ವಿಜ್ಞಾನಿ ಕೆ.ಪಿ. ದಿನೇಶ ಅವರ ಸಹಯೋಗದಲ್ಲಿ ಈ ಕಪ್ಪೆ ಪತ್ತೆ ಹಚ್ಚಿದ್ದಾರೆ.

ಶಿರಸಿ ಭಾಗದಲ್ಲಿ ಈ ವಿಶಿಷ್ಟ ತಳಿಯ ಕಪ್ಪೆ ಪತ್ತೆಯಾಗಿದ್ದು, ಜೀವವೈವಿಧ್ಯ-ಸಮೃದ್ಧ ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತದೆ, ಈ ಸಂಶೋಧನೆಯು ಕೇವಲ ಒಂದು ಶ್ರೇಣಿಯ ವಿಸ್ತರಣೆಯಲ್ಲ. ಆದರೆ ಇದು ರೂಪವಿಜ್ಞಾನದಲ್ಲಿ ಸಂಪೂರ್ಣ ಭಿನ್ನವಾಗಿ ಕಾಣುವ ಶೋಧ ಕಾರ್ಯವಾಗಿದೆ. ಈ ಕಪ್ಪೆಯನ್ನು ಸಂಶೋಧಕರ ತಂಡದಿಂದ 2018ರಲ್ಲಿ ಪೂರ್ವ ಘಟ್ಟದ ಉತ್ತರ ಭಾಗವಾದ ಓರಿಸ್ಸಾ ಹಾಗೂ ಆಂಧ್ರಪ್ರದೇಶದಲ್ಲಿ ಪತ್ತೆ ಮಾಡಲಾಗಿತ್ತು.

ಅಚ್ಚರಿ ಎಂಬಂತೆ ಈ ಕಳಿಂಗ ಕಪ್ಪೆ ಇದೇ ಮೊದಲ ಬಾರಿಗೆ ಪಶ್ಚಿಮ ಘಟ್ಟದಲ್ಲಿ ಕಂಡುಬಂದಿರುವುದು ನಿಜಕ್ಕೂ ವಿಸ್ಮಯ ಮೂಡಿಸಿದೆ ಎಂದು ತಿಳಿಸಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಕಂಡುಬಂದ ಕಳಿಂಗ ಕಪ್ಪೆ ಕೇವಲ ಶ್ರೇಣಿ ವಿಸ್ತರಣೆ ಸಂಶೋಧನೆಯಲ್ಲ, ಬದಲಾಗಿ ತನ್ನ ದೇಹ ವಿನ್ಯಾಸದಲ್ಲಿ ಸಂಪೂರ್ಣವಾಗಿ ಭಿನ್ನವಾಗಿದೆ.

ಈ ದೊಡ್ಡ ಗಾತ್ರದ ಕ್ರಿಕೆಟ್‌ ಕಪ್ಪೆ ಹೆಚ್ಚಿನ ಫಿನೋಟೈಫಿಕ್‌ ಪ್ಲಾಸ್ಟಿಟಿಯನ್ನು ತೋರಿಸುತ್ತದೆ. ವ್ಯವಂಶಿಕವಾಗಿ ಒಂದೇ ಜಾತಿಯ ಕಪ್ಪೆಗಳು ನೋಡಲು ಬೇರೆ ಬೇರೆ ಪ್ರಕಾರವಾಗಿ ಕಂಡುಬರುತ್ತವೆ. ಈ ಸಂಶೋಧನೆಯಲ್ಲಿ ಪೂರ್ವ ಹಾಗೂ ಪಶ್ಚಿಮ ಘಟ್ಟಗಳ್ಳಲ್ಲಿ ಕಂಡು ಬರುವ ಕಳಿಂಗ ಕಪ್ಪೆಗಳು ಅನುವಂಶಿಕವಾಗಿ ಒಂದೇ ಆಗಿದ್ದು ನೋಡಲು ರೂಪದಲ್ಲಿ ಸಾಕಷ್ಟು ಬದಲಾವಣೆಗಳನ್ನು ತೋರಿಸುತ್ತಿವೆ ಎಂದು ವಿವರಿಸಿದ್ದಾರೆ.

ನೈಸರ್ಗಿಕ ಪರಿಸರದ ವ್ಯತ್ಯಾಸಗಳು ಅಥವಾ ಪ್ರಚೋದಕಗಳಿಗೆ ಪ್ರತಿಕ್ರಿಯೆಯಾಗಿ ತೀವ್ರವಾದ ರೂಪವಿಜ್ಞಾನದ ದೇಹ ವ್ಯತ್ಯಾಸಗಳನ್ನು ತೋರಿಸುವ ಜೀವಿ ಸಾಮರ್ಥ್ಯ. ಸಂಶೋಧಕ ಅಮಿತ್‌ ಈವರೆಗೆ ನಡೆಸಿರುವ ಅಧ್ಯಯನದ ಅನುಭವದಲ್ಲಿ, ಪಶ್ಚಿಮ ಘಟ್ಟದಲ್ಲಿ ನಾನು ಹಲವಾರು ಬಾರಿ ಈ ಕಪ್ಪೆಯನ್ನು ಕಂಡಿದ್ದೇನೆ. ಇದು ಪಶ್ಚಿಮ ಘಟ್ಟದಿಂದ ತಿಳಿದಿರುವ ಫೆಜೆವರಾಯ ಮಿನರ್ವರಿಯಾ ಪ್ರಭೇದಗಳಿಗಿಂತ ಸಂಪೂರ್ಣ ಭಿನ್ನವಾಗಿದೆ. 21ನೇ ಶತಮಾನದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯದಲ್ಲಿ ಅನೇಕ ಜೀವವೈವಿಧ್ಯಗಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಆದಾಗ್ಯೂ ಪ್ರಸ್ತುತ ನಮ್ಮ ದೇಶದಲ್ಲಿ ಹೊಸ ಪ್ರಭೇದಗಳು ಇತ್ತೀಚೆಗಷ್ಟೇ ಬೆಳಕಿಗೆ ಬರುತ್ತಿವೆ. ಈ ಹೊಸ ಅನ್ವೇಷಣೆ ಸಕಾರಾತ್ಮಕವಾಗಿದೆ. ಆದರೆ ಹೊಸ ಜಾತಿಗಳು, ಪ್ರಭೇದಗಳು ಹೇಗೆ ವರ್ತಿಸುತ್ತವೆ, ಅವುಗಳ ಸ್ವಭಾವಗಳೇನು ಅಥವಾ ವಿಭಿನ್ನ ಜೈವಿಕ ಭೌಗೋಳಿಕ ಶ್ರೇಣಿಗಳಿಗೆ ಅವು ಹೇಗೆ ಹೊಂದಿಕೊಳ್ಳುತ್ತವೆ ಎಂಬುದರ ಬಗ್ಗೆ ನಮಗೆ ಇನ್ನೂ ಹೆಚ್ಚು ತಿಳಿದಿಲ್ಲ. ಇವುಗಳನ್ನು ಸಂರಕ್ಷಿಸುವುದು ನಮಗೆ ಕಷ್ಟ ಎಂದಿದ್ದಾರೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.