ಕಡಲತೀರಗಳಲ್ಲಿ  ಬಣ್ಣಗಳ ಸಂಗಮ-ಸಂಭ್ರಮ


Team Udayavani, Mar 22, 2019, 10:35 AM IST

22-march-19.jpg

ಕಾರವಾರ: ಕಾರವಾರ ಸೇರಿದಂತೆ ಉತ್ತರ ಕನ್ನಡದ ಕರಾವಳಿಯಲ್ಲಿ ಬಣ್ಣಗಳ ಹಬ್ಬ ಹೋಳಿಯನ್ನು ಉಲ್ಲಾಸದಿಂದ ಆಚರಿಸಲಾಯಿತು. ಹಿರಿ, ಕಿರಿಯರು, ಯುವಕ ಯುವತಿಯರು, ಮಹಿಳೆಯರು ಭೇದವಿಲ್ಲದೇ ಎಲ್ಲರೂ ಓಕುಳಿಯಾಟದಲ್ಲಿ ಪಾಲ್ಗೊಂಡಿದ್ದರು.

ಮುಂಜಾನೆಯಿಂದಲೇ ಯುವಕರ ಗುಂಪು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸುತ್ತಾ ಓಕುಳಿಯಾಟದಲ್ಲಿ ತೊಡಗಿತ್ತು. ದಾರಿ ಹೋಕರು ಹಾಗೂ ಬೈಕ್‌ನಲ್ಲಿ ಸಾಗುತ್ತಿದ್ದವರಿಗೆ ಬಣ್ಣ ಹಚ್ಚಿ ‘ಹ್ಯಾಪಿ ಹೋಳಿ’ ಎನ್ನುತ್ತಾ ಸಂಭ್ರಮಿಸಿದರು. ಕೆಲವರು ರಸ್ತೆ ಬದಿಯಲ್ಲಿ ನಿಂತು ಬಣ್ಣದ ನೀರು ಎರಚುತ್ತಿದ್ದರು. ಕೆಲವರು ನೀರನ್ನಷೇr ಜನರ ಮೇಲೆ ಹಾರಿಸಿ ಸಡಗರಪಟ್ಟರು. ಮಕ್ಕಳು ಪಿಚ್ಕಾರಿಗಳಲ್ಲಿ ಬಣ್ಣದ ನೀರು ಹಾರಿಸಿ ಖುಷಿ ಪಟ್ಟರು. ಒಂದು ವಾರದಿಂದ ಸುಗ್ಗಿ ಮೇಳ ಕಟ್ಟಿ ತಿರುಗಾಟ ನಡೆಸಿದವರು ಹೋಳಿ ಹಬ್ಬದ ದಿನ ವರ್ಷದ ಸುಗ್ಗಿಯ ಸಡಗರಕ್ಕೆ ತೆರೆಬಿತ್ತು. 

ಕಾರವಾರದ ಹಬ್ಬುವಾಡ, ಅಂಬೇಡ್ಕರ್‌ ವೃತ್ತ, ಗೀತಾಂಜಲಿ ಚಿತ್ರಮಂದಿರದ ಬಳಿ ಬಣ್ಣ ಹಚ್ಚಲೆಂದೇ ಯುವಕರ ತಂಡ ನೆರೆದಿತ್ತು. ಕುಂಠಿ ಮಹಾಮಾಯಿ ದೇವಸ್ಥಾನ, ಕಾಜುಬಾಗ ಮತ್ತಿತರ ಕಡೆಗಳಲ್ಲಿ ಯುವಕ, ಯುವತಿಯರು ಸಿನಿಮಾ ಹಾಡುಗಳಿಗೆ ಹಜ್ಜೆ ಹಾಕಿದರು. ಕಾರವಾರದ ಕೋಣೆವಾಡ, ಕಳಸವಾಡ ಮತ್ತಿತರೆಡೆ ಗುಜರಾತಿಗಳು ಹೋಳಿಯನ್ನು ವಿಶೇಷವಾಗಿ ಆಚರಿಸಿದರು. ಎಲ್ಲರೂ ಒಂದೆಡೆ ಸೇರಿ ವಿಶೇಷ ಪಾಯಸ ಸವಿದು ಕುಣಿದು ಕುಪ್ಪಳಿಸಿದರು.

ಸಮುದ್ರಕ್ಕೂ ಸಡಗರ: ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಓಕುಳಿಯಾಡಿದ ಜನ ಜಿಲ್ಲೆಯ ವಿವಿಧ ಕಡಲತೀರಗಳಿಗೆ ತೆರಳಿ ಸಮುದ್ರ ಸ್ನಾನ ಮಾಡಿದರು. ಸಮುದ್ರದಲ್ಲಿ ಯಾವುದೇ ಅವಘಡ ಆಗದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು. ಬೆಳಗ್ಗೆಯಿಂದಲೇ ಕಾರವಾರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಸಂಜೆ ಆರರ ತನಕ ಮುಚ್ಚಿದ್ದವು. ಪ್ರಮುಖ ಬೀದಿಗಳಲ್ಲಿ ಜನಸಂಚಾರವೂ ವಿರಳವಾಗಿತ್ತು.

ಹೋಳಿ ವಸೂಲಿ ತಂಡಗಳಿಂದ ಕಿರಿಕಿರಿ: ಬುಧವಾರ ರಾತ್ರಿ ಹೋಳಿಯ ಸಲುವಾಗಿ ಮನೆ ಮನೆಗಳ ಮುಂದೆ ಬಂದ ಯುವಕರು ಹೋಳಿ ಹೋಳಿ ಎಂದು ಕೂಗಿ ಗದ್ದಲ ಎಬ್ಬಿಸಿ ಹಣ ವಸೂಲಿ ಮಾಡಿದರು. ನಗರದ ಕೆಎಚ್‌ಬಿ ಕಾಲೋನಿಯಲ್ಲಿ ಕೆಲ ಯುವಕರ ಗುಂಪುಗಳ ಹಾವಳಿ ಹೆಚ್ಚಿತ್ತು. ಕೊನೆಗೆ ಪೊಲೀಸರಿಗೆ ದೂರು ಹೋಯಿತು. ಪೊಲೀಸರು ಗಸ್ತು ಆರಂಭಿಸಿದ ನಂತರ ಪರಿಸ್ಥಿತಿ ಹತೋಟಿಗೆ ಬಂತು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.