ವಾಯುಭಾರ ಕುಸಿತ: ಮೀನುಗಾರಿಕೆಗೆ ನಷ್ಟ


Team Udayavani, Oct 7, 2018, 5:25 PM IST

7-october-22.gif

ಕಾರವಾರ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಆಳ ಸಮುದ್ರಕ್ಕೆ ಮೀನುಗಾರರು ಅ.8ರವರೆಗೆ ತೆರಳದಂತೆ ಜಿಲ್ಲಾಡಳಿತ, ಮೀನುಗಾರಿಕಾ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಹವಾಮಾನ ವೈಪರಿತ್ಯದಿಂದ ಮೀನುಗಾರರು, ಬೋಟ್‌ ಮಾಲೀಕರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಲ ಆಗಸ್ಟ್‌ನಲ್ಲಿ ತುಂಬಾ ಮಳೆಯ ಕಾರಣ ಮೀನುಗಾರಿಕೆ ಸಾಧ್ಯವಾಗಿಲ್ಲ. ಜೂನ್‌, ಜುಲೈನಲ್ಲಿ ಮೀನುಗಾರಿಕೆ ನಿಷೇಧಿತ ಅವಧಿ. ಹಾಗಾಗಿ ಸೆಪ್ಟಂಬರ್‌ನಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದ ಮತ್ಸೋದ್ಯಮ ಇದೀಗ ಮತ್ತೆ ನಷ್ಟ ಅನುಭವಿಸುವಂತಾಗಿದೆ.

ಅ.5 ರಿಂದ 8 ರವರೆಗೆ ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಮೀನುಗಾರರಿಗೆ ಸೂಚಿಸಿದೆ. ಮೀನುಗಾರಿಕಾ ಇಲಾಖೆ ಸಹ ಇದೇ ಎಚ್ಚರಿಕೆ ನೀಡಿದೆ. ಮತ್ಸ್ಯ ಬೇಟೆ ಸಮಯದಲ್ಲಿ ಕೈ ಕಟ್ಟಿ ಕುಳಿತುಕೊಳ್ಳುವ ಪ್ರಮೇಯ ಉದ್ಬವಿಸಿದೆ.

ಅಕ್ಟೋಬರ್‌, ನವ್ಹೆಂಬರ್‌, ಡಿಸೆಂಬರ್‌ನಲ್ಲಿ ಫಿಶ್‌ ಕ್ಯಾಚಿಂಗ್‌ ಜೋರಾಗಿಯೇ ಇರುತ್ತದೆ. ಆದರೆ ಈ ಸಲ ಅಕ್ಟೋಬರ್‌ ಮೊದಲ ವಾರ ನೈಸರ್ಗಿಕ ವಿಕೋಪದಿಂದ ಫಿಶ್‌ ಕ್ಯಾಚ್‌ ಬ್ಯಾನ್‌ ಆಗಿದೆ. ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಸಮುದ್ರಕ್ಕೆ ಹೋದರೆ ಮೀನುಗಾರಿಕಾ ಬೋಟ್‌ ಮಾಲೀಕರೆ ಅನಾಹುತಕ್ಕೆ ಹೊಣೆಯಾಗಲಿದ್ದಾರೆ. ಕಾರ್ಮಿಕರ ಜೀವ ರಕ್ಷಣೆ ಸಹ ಮುಖ್ಯ. ಮುನ್ಸೂಚನೆ ಅವಧಿಯಲ್ಲಿ ದುರಂತವಾದರೆ ವಿಮೆ ಸಹ ಸಿಗುವುದಿಲ್ಲ ಎನ್ನುವುದು ಮೀನುಗಾರಿಕಾ ಇಲಾಖೆ ಅಧಿಕಾರಿಗಳ ವಾದ.

ಮತ್ಸ್ಯ ಉದ್ಯಮ ನಷ್ಟ: ಹವಮಾನ ಇಲಾಖೆ ಸೂಚನೆಯಿಂತೆ ಶುಕ್ರವಾರ ಸಂಜೆ ಭಾರೀ ಗಾಳಿ ಸಹಿತ ಮಳೆ ಸುರಿಯಿತು. ಶನಿವಾರ ವಾತಾವರಣ ಅಷ್ಟೇನು ಅಪಾಯ ಎನ್ನುವಂತಿರಲಿಲ್ಲ. ಆದರೆ ಹಠಾತ್‌ ಸಮುದ್ರದಲ್ಲಿ ಅಲೆಗಳು ಎದ್ದರೆ, ಗಾಳಿ ಬೀಸಿದರೆ ಎಂಬ ಭಯದಿಂದ ಬೋಟ್‌ ಕಡಲಿಗೆ ಇಳಿಯಲಿಲ್ಲ. ಕೆಲವರು ಸಾಹಸ ಮಾಡಿದ ಘಟನೆಗಳಿವೆ. ಆದರೆ ಇದು ಬೋಟ್‌ ಮಾಲೀಕರ ರಿಸ್ಕ್. ಮೀನುಗಾರಿಕಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ನಮ್ಮದೇ ಆದ ಯಾಂತ್ರಿಕೃತ ಬೋಟ್‌ ಇಲ್ಲ. ಏನೇ ಆದರೂ ನಾವು ಕಡಲಕಾವಲು ಪಡೆಯ ಯಾಂತ್ರಿಕ ಬೋಟ್‌ ಬಳಸಿ ಕಡಲ ವೀಕ್ಷಣೆಗೆ ಹೋಗಬೇಕು. ಹೀಗಿರುವಾಗ ಮೀನುಗಾರರಲ್ಲಿ ನಾವು ಜಾಗೃತಿ ಮೂಡಿಸುತ್ತೇವೆ ಎನ್ನುತ್ತಾರೆ.

ಸೋಮವಾರದಿಂದ ಮೀನುಗಾರಿಕೆ: ರವಿವಾರತನಕ ಕಾಯುತ್ತೇವೆ. ಹವಾಮಾನದಲ್ಲಿ ಏರುಪೇರು ಆಗದಿದ್ದರೆ, ಸೋಮವಾರ ಮೀನುಗಾರಿಕೆಗೆ ತೆರಳಿಯೇ ಸಿದ್ಧ ಎಂಬುದು ಹೆಸರು ಹೇಳಲು ಇಚ್ಛಿಸದ ಬೋಟ್‌ ಮಾಲೀಕರ ಮಾತು. ಕಾರ್ಮಿಕರಿಗೆ ದಿನದ ವೇತನ ಕೊಡಲೇಬೇಕು. ಬ್ಯಾಂಕ್‌ ಸಾಲ ಬೇರೆ ಇದೆ. ಹವಾಮಾನದ ಮುಖ ನೋಡಿ ಕುಳಿತರೆ ಸಾಲ ಮೈಮೇಲೆ ಬರುತ್ತದೆ. ನಾವು ಬದುಕುವುದಾದರೂ ಹೇಗೆ ಎಂಬುದು ಬೋಟ್‌ ಮಾಲೀಕರ ಅಳಲು. 

ಶುಕ್ರವಾರ ಹಗಲು ಸಮುದ್ರ ಸರಿಯಾಗಿಯೇ ಇತ್ತು. ಅಲೆಗಳ ಅಬ್ಬರ ಇರಲಿಲ್ಲ. ಸಂಜೆ ಇದ್ದಕ್ಕಿಂದ್ದಂತೆ ಬಲವಾದ ಗಾಳಿ ಬೀಸಿತು. ರಭಸದ ಮಳೆ ಸುರಿಯಿತು. ಶನಿವಾರ ಹಗಲು ಸಹಜವಾಗಿದೆ. ಹೀಗಿದ್ದರೂ ನೀರಿಗೆ ಇಳಿಯದ ಪರಿಸ್ಥಿತಿ. ಮೀನುಗಾರಿಕಾ ಬೋಟ್‌ ಮಾಲೀಕರದ್ದು ಇಕ್ಕಟ್ಟಿನ ಸಂದರ್ಭ ಬಿಕ್ಕಟ್ಟಿನ ವಾತಾವರಣ ಸನ್ನಿವೇಶ ಎಂಬಂತಾಗಿದೆ.

ಹವಮಾನ ಇಲಾಖೆ ಸೂಚನೆ ಕಡೆಗಣಿಸಲಾಗದು: ಮನ್ಸೂಚನೆ ಸಮಯದಲ್ಲಿ ಕಡಲಿಗೆ ಇಳಿಯುವಂತಿಲ್ಲ. ಇಳಿದರೆ, ಏನಾದರೂ ಅನಾಹುತವಾದಲ್ಲಿ ಪರಿಹಾರ ಸಿಗದು. ಇಂಥ ಪರಿಸ್ಥಿತಿಯನ್ನು ಮೀನುಗಾರಿಕಾ ಬೋಟ್‌ ಮಾಲೀಕರು ಅರ್ಥ ಮಾಡಿಕೊಳ್ಳಬೇಕು ಎಂಬುದು ಅಪರ ಜಿಲ್ಲಾಧಿಕಾರಿ ಡಾ| ಸುರೇಶ್‌ ಹಿಟ್ನಾಳರ ಮಾತು.

ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ 
ಹವಮಾನ ವೈಪರಿತ್ಯ ಇದ್ದರೂ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್‌ ನಡೆಯುತ್ತಿದೆ ಎಂಬ ಮೀನುಗಾರಿಕಾ ಬೋಟ್‌ಗಳ ಓರ್ವ ಮಾಲೀಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾಡಳಿತ, ಪ್ರವಾಸಿಗರು ಆನ್‌ ಲೈನ್‌ನಲ್ಲಿ ಮೊದಲೇ ಸ್ಕೂಬಾಕ್ಕೆ ಬರುವುದಾಗಿ ಹೆಸರು ನೊಂದಾಯಿಸಿ ಹಣ ತುಂಬಿರುತ್ತಾರೆ. ಅವರು ದೂರದ ಊರುಗಳಿಂದ ಬಂದಾಗ ಹವಾಮಾನ ಕಾರಣ ನೀಡಿ ವಾಪಸ್‌ ಕಳಿಸಿದರೆ, ಗ್ರಾಹಕರ ವೇದಿಕೆಗೆ ತೆರಳಿ ಒಂದಕ್ಕೆ ಹತ್ತರಷ್ಟು ಹಣ ಕೇಳುತ್ತಾರೆ. ಅವರಿಗೆ ಅಪಾಯವಾಗದಂತೆ ಸ್ಕೂಬಾ ಮಾಡಿಸುವುದು ಅನಿವಾರ್ಯ. ಆನ್‌ಲೈನ್‌ನಲ್ಲಿ ಪ್ರವಾಸಿಗ ಬುಕ್‌ ಮಾಡಿದಾಗ ಹವಮಾನ ವೈಪರಿತ್ಯದ ಮಾಹಿತಿ ಬಂದಿರಲಿಲ್ಲ. ಇಂಥ ಸಂದರ್ಭಗಳನ್ನು ನಿಭಾಯಿಸಬೇಕಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.