ಅವೈಜ್ಞಾನಿಕ ಮೀನುಗಾರಿಕೆಯಿಂದ ಕ್ಷಾಮ

ಲಂಗುರ ಹಾಕಿರುವ ಬೋಟ್‌ಗಳು | ಆಳ ಸಮುದ್ರ ಮೀನುಗಾರಿಕೆ ನಿರ್ಬಂಧಿಸಲು ಒತ್ತಾಯ

Team Udayavani, Feb 13, 2020, 3:43 PM IST

13-February-19

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಕ್ಷಾಮದಿಂದ ಮೀನುಗಾರಿಕೆಗೆ ತೆರಳಿದ ಪರ್ಶಿನ್‌ ಹಾಗೂ ಟ್ರಾಲರ್‌ ಬೋಟ್‌ಗಳು ಖಾಲಿ ಬಲೆಯೊಂದಿಗೆ ಹಿಂದಿರುಗಿವೆ. ಬೈತಖೋಲ್‌ ಮೀನುಗಾರಿಕಾ ಬಂದರಿನಲ್ಲಿ ಬೋಟ್‌ ಗಳು ಲಂಗುರ ಹಾಕಿವೆ. ಸಮುದ್ರ ಬೆಳೆಯಿಲ್ಲದೇ ಮೀನುಗಾರರು ಆತಂಕ ಪಡುವಂತಾಗಿದೆ.

ಅವೈಜ್ಞಾನಿಕ ಮತ್ತು ಕಾನೂನುಬಾಹಿರವಾಗಿ ಲೈಟ್‌ ಫಿಶಿಂಗ್‌, ಬುಲ್‌ ಟ್ರಾಲ್‌ ಮೀನುಗಾರಿಕೆ ಮತ್ತು ಮೀನು ಹಿಡಿಯಲು ಆಳ ಸಮುದ್ರದಲ್ಲಿ ಕ್ಯಾಸುರಿನಾ ಗಿಡಗಳನ್ನು ಬೆಳಸುತ್ತಿರುವ ವಿಧಾನಗಳು ಮೀನು ಕ್ಷಾಮಕ್ಕೆ ಕಾರಣವಾಗಿವೆ ಎಂದು ಮೀನುಗಾರರು ಆರೋಪಿಸಿದ್ದಾರೆ.

ಕಳೆದ ಹದಿನೈದು ದಿನಗಳ ಹಿಂದೆ ಸಾಗರಮಾಲಾ ಯೋಜನೆಯಡಿ ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಹದಿಮೂರು ದಿನಗಳ ಕಾಲ ಮೀನುಗಾರಿಕೆ ಚಟುವಟಿಕೆಗಳನ್ನು ಮೀನುಗಾರರು ಸಂಪೂರ್ಣ ಸ್ಥಗಿತ ಮಾಡಿದ್ದರು. ಈಗ ಸಮುದ್ರದಲ್ಲಿ ಮೀನು ಬೇಟೆ ಯಶಸ್ವಿಯಾಗದೇ ಖಾಲಿ ಬೋಟ್‌ಗಳಲ್ಲಿ ಮರಳುತ್ತಿದ್ದಾರೆ ಎಂದು ಮೀನುಗಾರರು ತಿಳಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ 24 ನಾಟಿಕಲ್‌ ಮೈಲಿ ಮೀರಿದ ಮೀನುಗಾರಿಕೆ ಚಟುವಟಿಕೆ ನಿಷೇಧಿಸಲಾಗಿದೆ. ಆದರೆ ಗೋವಾ ಮತ್ತು ಕರ್ನಾಟಕದಲ್ಲಿ ಇದಕ್ಕೆ ಅನುಮತಿ ನೀಡಲಾಗಿದೆ. ಇದರಿಂದ ಇತರ ರಾಜ್ಯಗಳ ಮೀನುಗಾರರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೊರ ರಾಜ್ಯದವರು ನಿರಾತಂಕದಿಂದ ರಾಜ್ಯದ ಸಮುದ್ರ ಗಡಿಯೊಳಗಿನ ಆಳ ಸಮುದ್ರದ ಮಧ್ಯದಲ್ಲಿ ಅಪಾರ ಪ್ರಮಾಣದ ಮೀನುಗಳನ್ನು ಹಿಡಿಯುತ್ತಿದ್ದಾರೆ.

ಇದಲ್ಲದೇ ಹಗ್ಗಗಳನ್ನು ಕಟ್ಟಿ ಕ್ಯಾಸುರಿನಾ ಗಿಡಗಳನ್ನು ಸಮುದ್ರ ಮಧ್ಯದಲ್ಲಿ ಎಸೆದು ಕೊಳೆಯಲು ಬಿಡಲಾಗುತ್ತದೆ. ಇದು ಅಪಾರ ಪ್ರಮಾಣದ ಮೀನುಗಳನ್ನು ಆಕರ್ಷಿಸುತ್ತದೆ. ನಂತರ ಹೊರ ರಾಜ್ಯದವರು ಅದರ ಸುತ್ತಲೂ ಬಲೆ ಹರಡಿ ಮೀನು ಹಿಡಿಯುತ್ತಾರೆ. ಆದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿಕೊಂಡಿದೆ ಎಂದು ಮೀನುಗಾರ ಯುವ ಮುಖಂಡ ವಿನಾಯಕ ಹರಿಕಂತ್ರ ಆರೋಪಿಸಿದ್ದಾರೆ.

ನಾವು ಅದನ್ನು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಏನೂ ಪ್ರಯೋಜನವಾಗಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಳ ಸಮುದ್ರದಲ್ಲಿ ಇತರೆ ರಾಜ್ಯದವರ ಅವೈಜ್ಞಾನಿಕ ಮೀನುಗಾರಿಕೆಯಿಂದ ಇದರ ದುಷ್ಪರಿಣಾಮಗಳಿಂದ ಸಮುದ್ರದಲ್ಲಿ ಮೀನು ಸಿಗುತ್ತಿಲ್ಲ. ಮೀನುಗಾರರಿಗೆ ಇದು ಮತ್ಸ್ಯ ಬೇಟೆ ಸಮಯವಾಗಿದ್ದು, ಮೀನುಗಾರಿಕೆಯಿಂದ ಹಣ ಸಂಪಾದಿಸುವ ಕಾಲವಾಗಿದೆ.ಆದರೆ ಈಗ ನಮ್ಮ ಸಾಂಪ್ರದಾಯಿಕ ದೋಣಿಗಳು ಹಾಗೂ ಆಳ ಸಮುದ್ರ ಮೀನುಗಾರಿಕೆಯ ಯಾಂತ್ರಿಕೃತ ಬೋಟ್‌ಗಳು ಮೀನು ಇಲ್ಲದೇ ಖಾಲಿ ಮರಳುತ್ತಿವೆ. ಈ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಅಕ್ರಮ ಮೀನುಗಾರಿಕೆ ನಿಷೇಧಿಸಬೇಕು. ರಾಜ್ಯದ ಸಾಗರ ಗಡಿಯೊಳಗೆ ಬಂದು ಕಾನೂನು ಬಾಹಿರವಾಗಿ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ತಮಿಳುನಾಡು, ಕೇರಳ ಮೀನುಗಾರಿಕಾ ಬೋಟ್‌ಗಳನ್ನು ನಿರ್ಬಂಧಿಸಬೇಕು ಎಂದು ಇಲ್ಲಿನ ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.