ಶಂಭು ಹೆಗಡೆ ಯಕ್ಷರಂಗದ ರಾಜ


Team Udayavani, Feb 6, 2019, 10:52 AM IST

6-february-19.jpg

ಹೊನ್ನಾವರ: ಶಂಭು ಹೆಗಡೆಯವರು ಯಕ್ಷಗಾನದ ಡಾ| ರಾಜಕುಮಾರ್‌ ಎಂದರು. ಶಂಭು ಹೆಗಡೆಯವರೆಂದರೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಅವರ ಮೇಲೆ ಪಿಎಚ್‌ಡಿ ಮಾಡಬಹುದು. ಗುಣವಂತೆಯನ್ನು ಸಿರಿವಂತೆ ಮಾಡಿದವರು ಕೆರೆಮನೆ ಶಂಭು ಹೆಗಡೆಯವರು. ನಾನು ಕೂಡ ಕೆರೆಮನೆ ಕುಟುಂಬದ ಅಭಿಮಾನಿಗಳಲ್ಲಿ ಒಬ್ಬ ಎಂದು ರಂಗಭೂಮಿ ಹಾಗೂ ಕಿರುತೆರೆ ಕಲಾವಿದ ಶಂಕರ ಭಟ್ ನುಡಿದರು.

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಅತಿಥಿಗಳಾಗಿ ಮಾತನಾಡಿದರು. ಜಯರಾಮ ಪಾಟೀಲ್‌, ಬೆಂಗಳೂರು ಮಾತನಾಡಿ ಕಲೆ ಎಂದರೆ ಬೆಳಕಿದ್ದಂತೆ. ಅದು ಎಲ್ಲರನ್ನು ಬೆಳಗುತ್ತದೆ. ರಂಗಭೂಮಿಯ ಸೇವೆ ಹೀಗೆ ಮುಂದುವರೆಯಬೇಕಿದೆ ಎಂದರು.

ಶೇಷಗಿರಿ ಭಟ್ ಗುಂಜಗೋಡು, ಸಿದ್ಧಾಪುರ ಮಾತನಾಡಿ ಶಿವಾನಂದರು ಯಕ್ಷಗಾನಕ್ಕೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ದೇಹಕ್ಕೆ ಆಹಾರ ಮುಖ್ಯವಾದರೆ ಮನಸ್ಸಿಗೆ ಕಲೆ ಅಷ್ಟೇ ಮುಖ್ಯ ಎಂದರು.

ಶಂಭು ಗೌಡ ಅಡಿಮನೆ ಮಾತನಾಡಿ ಈ ಕಾರ್ಯಕ್ರಮ ಶಿವಾನಂದರ ಪ್ರಯತ್ನದ ಫಲ ಎಂದರು. ನಾಟ್ಯೋತ್ಸವ ಶಾಶ್ವತವಾಗಿ ನಡೆಯಬೇಕಿದೆ. ಈ ಪರಂಪರೆ ಯಕ್ಷಗಾನದ ಕೇಂದ್ರವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ, ಇಂದು ಅರ್ಹರಿಗೆ ಗಜಾನನ ಹೆಗಡೆ ಪ್ರಶಸ್ತಿ ಹಾಗೂ ಕಲಾಪೋಷಕ ಪ್ರಶಸ್ತಿ ನೀಡಿದ್ದಾರೆ. ನಾಟ್ಯೋತ್ಸವಕ್ಕೆ ಸರ್ಕಾರದ ಸಹಾಯದ ನಿರೀಕ್ಷೆ ಇದೆ. ಆದರೆ ಈವರೆಗೆ ಯಾವುದೇ ಸಹಕಾರ ದೊರೆತಿಲ್ಲ ಎಂದರು.

ಪುಷ್ಪಾರ್ಚನೆ ಮತ್ತು ಗಣಪತಿ ಪೂಜೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಸಭಾಧ್ಯಕ್ಷರು ಮತ್ತು ಮುಖ್ಯ ಅತಿಥಿಗಳು ಕಾರ್ಯಕ್ರಮ ಉದ್ಘಾಟಿಸಿದರು.

ನಾರಾಯಣ ಯಾಜಿ ಸಾಲೇಬೈಲು ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಪುರಸ್ಕೃತ ತಿಮ್ಮಣ್ಣ ಯಾಜಿಯವರಿಗೆ ಅಭಿನಂದನಾ ನುಡಿ ಸಲ್ಲಿಸಿದರು. ಹಿರಿಯ ಯಕ್ಷಗಾನ ಕಲಾವಿದ ತಿಮ್ಮಣ್ಣ ಯಾಜಿ, ಮಣ್ಣಿಗೆಯವರಿಗೆ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ-2018 ನೀಡಿ ಗೌರವಿಸಿದರು.

ಪ್ರಶಸ್ತಿ ಸ್ವೀಕರಿಸಿದ ತಿಮ್ಮಣ್ಣ ಯಾಜಿ, ಯಕ್ಷಗಾನ ಕನ್ನಡದ ಕಲೆ. ಇದು ಕಲಾವಿದನೂ ಸಂತಸಪಟ್ಟು, ನೋಡುವವರಿಗೂ ಸಂತಸ ಕೊಡುವ ಕಲೆಯಾಗಿದೆ ಎಂದರು.

ನಾರಾಯಣ ಭಟ್ ಮೇಲಿನಗಂಟಿಗೆ ಮತ್ತು ಕೆ.ಜಿ. ಹೆಗಡೆ ಅಣ್ಣುಹಿತ್ತಲು ಅವರಿಗೆ ಶ್ರೀಮಯ ಕಲಾಪೋಷಕ ಪ್ರಶಸ್ತಿ ನೀಡಲಾಯಿತು.

ನಾರಾಯಣ ಭಟ್ಟರು ಮಾತನಾಡಿ ಕಲೆಗೆ ಬೆಲೆ ತಂದುಕೊಟ್ಟವರು ಕೆರೆಮನೆ ಮನೆತನದ ಹಿರಿಯರು. ಕೆರೆಮನೆ ಕುಟುಂಬ ಯಕ್ಷಗಾನ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದರು. ಶಂಭು ಹೆಗಡೆಯವರು ಸೋತುಗೆದ್ದವರು. ಸತ್ತು ಬದುಕಿದವರು ಎಂದು ಸ್ಮರಿಸಿದರು.

ಕೆ.ಜಿ. ಹೆಗಡೆ ಅಣ್ಣುಹಿತ್ತಲು ಮಾತನಾಡಿ ಯಕ್ಷಗಾನದಿಂದ ನಾನು ತೃಪ್ತಿ ಪಡೆದಿದ್ದೇನೆ. ಯಕ್ಷಗಾನ ನನಗೆ ಸಂತಸ ತಂದಿದೆ. ಅದಕ್ಕಾಗಿ ಯಕ್ಷಗಾನಕ್ಕೆ ನಾನು ನನ್ನ ಕೈಲಾದಷ್ಟು ನಾನು ಕೊಡುಗೆ ನೀಡಲು ಪ್ರಯತ್ನಿಸಿದ್ದೇನೆ ಎಂದರು. ಲಕ್ಷ್ಮೀನಾರಾಯಣ ಕಾಶಿ ಸ್ವಾಗತಿಸಿದರು. ಶಿವಾನಂದ ಹೆಗಡೆ ವಂದಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.