ಹಿಂದಿ ಹೆಸರುಗಳಿಗೆ ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ


Team Udayavani, Jun 15, 2022, 3:55 PM IST

15

ಕಾರವಾರ: ನಗರ ವ್ಯಾಪ್ತಿಯಲ್ಲಿ ವಾರ್ಡ್‌ಗಳ ರಸ್ತೆ ನಾಮಫಲಕಗಳಲ್ಲಿ ಕನ್ನಡದ ಜೊತೆಗೆ ಕೊಂಕಣಿ- ಮರಾಠಿ ಭಾಷೆಗೆ ತರ್ಜುಮೆ ಮಾಡಿ ಹಿಂದಿಯಲ್ಲಿ ರಸ್ತೆ ನಾಮಫಲಕ ಬರೆಯಿಸಿದ ನಗರ ಸಭೆ ಸುಖಾ ಸುಮ್ಮನೆ ಇಲ್ಲದ ವಿವಾದ ಒಂದನ್ನು ಮೈಮೇಲೆ ಎಳೆದು ಕೊಂಡಿದೆ. ಹಿಂದಿ ಅಕ್ಷರಗಳಿರುವ ಕೊಂಕಣಿ, ಮರಾಠಿ ಭಾಷೆಯ ರಸ್ತೆ ನಾಮಫಲಕಗಳ ಬದಲಾ ವಣೆಗೆ ವಾರದ ಗಡುವು ನೀಡಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಸ್ತೆಯಲ್ಲಿನ ಹಿಂದಿ ಭಾಷೆಯ ಅಕ್ಷರಗಳಿಗೆ ಮಂಗಳವಾರ ಮಸಿ ಬಳಿದರು.

ಸೋಮವಾರ ಕನ್ನಡಪರ ಸಂಘಟನೆಗಳು ರಸ್ತೆಯ ಮಾರ್ಗಸೂಚಿ ಫಲಕಗಳಲ್ಲಿನ ಹಿಂದಿ ಅಕ್ಷರ ತೆಗೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದವು. ಕೊಂಕಣಿ ಹಾಗೂ ಮರಾಠಿ ಭಾಷೆಯಲ್ಲಿ ರಸ್ತೆ ಹೆಸರುಗಳನ್ನು ದೇವನಾಗರಿ ಲಿಪಿ ಹಿಂದಿಯಲ್ಲಿ ಬರೆದಿರುವುದನ್ನು ತೆರವುಗೊಳಿಸಲು ಆಗ್ರಹಿಸಿತ್ತು. ಈ ಸಂಬಂಧ ನಗರಸಭೆಯ ಪೌರಾಯುಕ್ತರು ಮತ್ತು ಅಧ್ಯಕ್ಷರ ಉದ್ಧಟತನ ಖಂಡಿಸಿತ್ತು. ನಗರಸಭೆಗೆ ರಸ್ತೆ ಹೆಸರು ಫಲಕ ಬದಲಿಸಲು ನೀಡಿದ ಗಡುವು ಮುಗಿದ ಕಾರಣ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ ಶೆಟ್ಟಿ ಬಣದ ಕಾರ್ಯಕರ್ತರಯ ನಾಮಫಲಕಗಳಲ್ಲಿನ ಹಿಂದಿ ಅಕ್ಷರಗಳಿಗೆ ಮಸಿ ಬಳಿಯುವ ಮೂಲಕ ನಗರಸಭೆ ಹಾಗೂ ಪೌರಾಯುಕ್ತರ ವಿರುದ್ಧ ಘೋಷಣೆಗಳನ್ನ ಕೂಗಿದರು.

ಮೊದಲು ಕನ್ನಡದಲ್ಲಿತ್ತು ರಸ್ತೆ ನಾಮಫಲಕ: ಕಾರವಾರ ನಗರದ ವಿವಿಧ ವಾರ್ಡ್‌ಗಳ ರಸ್ತೆ ನಾಮಫಲಕಗಳು ಈ ಮುಂಚೆ ಕನ್ನಡದಲ್ಲಿದ್ದವು. ಕೆಲವು ಕಡೆ ಕನ್ನಡ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿದ್ದವು. ಆದರೆ ಕಾರವಾರ ನಗರಸಭೆಯ ಪೌರಾಯುಕ್ತ ಆರ್‌.ಪಿ. ನಾಯಕ ಕಾರವಾರದಲ್ಲಿ ಕೊಂಕಣಿಗರಿರುವ ಕಾರಣ ಅವರಿಗೆ ಅರ್ಥವಾಗಲೆಂದು ಕೆಲ ವಾರ್ಡ್ ಗಳ ಹೆಸರುಗಳನ್ನು ಕೊಂಕಣಿ- ಮರಾಠಿ ಅರ್ಥ ಬರುವಂತೆ ಕನ್ನಡದ ಜೊತೆಗೆ ಹಿಂದಿಯಲ್ಲಿ ಬೋರ್ಡ್‌ಗಳನ್ನು ಬರೆಯಿಸಿದ್ದರು.

ಈ ಸಂಬಂಧ ಕರವೇ ಕಾರವಾರ ಕಾರ್ಯಕರ್ತರಿಂದ ಮಾಹಿತಿ ಪಡೆದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪೌರಾಯುಕ್ತ ಆರ್‌.ಪಿ.ನಾಯಕಗೆ ಕರೆ ಮಾಡಿ ಇದನ್ನು ತೆರವುಗೊಳಿಸಲು ಒತ್ತಾಯಿಸಿದ್ದರು.

ನಗರಸಭೆ ಭಾಷಾ ವಿವಾದ ಹುಟ್ಟು ಹಾಕಿದ ಬಗ್ಗೆ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ತು, ಜನಶಕ್ತಿ ವೇದಿಕೆ, ಕರುನಾಡು ರಕ್ಷಣಾ ವೇದಿಕೆಯಂಥ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರಸಭೆಯ ಈ ನಡೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ನೀಡಿದ್ದರು. ಅಲ್ಲದೇ ಹಿಂದಿ, ಕೊಂಕಣಿ, ಮರಾಠಿ ಬೋರ್ಡ್‌ಗಳನ್ನು ತೆರವು ಮಾಡಲು ಗಡುವು ನೀಡಿದ್ದರು. ಆದರೆ ಎಚ್ಚರಿಕೆ ನೀಡಿ ಐದಾರು ದಿನ ಕಳೆದರೂ ಬೋರ್ಡ್‌ಗಳನ್ನು ತೆರವು ಮಾಡದ ಕಾರಣ ಮಂಗಳವಾರ ಏಕಾಎಕಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ ಶೆಟ್ಟಿ ಬಣದ ಕಾರ್ಯಕರ್ತರು ವಿವಿಧ ವಾರ್ಡ್‌ಗಳಿಗೆ ತೆರಳಿ ಹಿಂದಿ ಹೆಸರುಗಳಿಗೆ ಮಸಿ ಬಳಿದಿದ್ದಾರೆ.

ಕರವೇ (ಪ್ರವೀಣ್‌ ಶೆಟ್ಟಿ ಬಣ) ಮಸಿ ಬಳಿದಿರುವ ನಾಮಫಲಕಗಳನ್ನ ನಗರಸಭೆ ತೆರವು ಮಾಡಲಿದೆಯೇ ಅಥವಾ ಭಾಷಾ ವಿವಾದ ಬೆಂಕಿಯನ್ನು ಹಾಗೆ ಬಿಡಲಿದೆಯೋ ಎಂಬುದನ್ನು ಕನ್ನಡ ಸಂಘಟನೆಗಳು ಕಾದು ನೋಡುತ್ತಿವೆ. ಅಲ್ಲದೆ ಈತನಕ ಜನಪ್ರತಿನಿಧಿಗಳು ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಕನ್ನಡದ ವಿರುದ್ಧ ಹೋದರೆ ಬರುವ ಚುನಾವಣೆಯಲ್ಲಿ ಅದು ಮುಳುವಾಗುವ ಸ್ಪಷ್ಟಸೂಚನೆಗಳು ಜನಪ್ರತಿನಿಧಿಗಳಿಗೆ ತಿಳಿದ ಕಾರಣ ನಾಮಫಲಕ ವಿವಾದಕ್ಕೆ ಅಧಿಕಾರಿಯನ್ನು ಹೊಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.