Karwar; ದ್ವೇಷ ಭಾಷಣ ಮಾಡಿದ ಅನಂತ ಕುಮಾರ್ ಹೆಗಡೆ ವಿರುದ್ಧ ಸೆ.505 ಅಡಿ ಪ್ರಕರಣ ದಾಖಲು
Team Udayavani, Jan 14, 2024, 3:42 PM IST
ಕಾರವಾರ: ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ.
ದ್ವೇಷ ಭಾಷಣದ ಕಾರಣಕ್ಕೆ ಸೆಕ್ಷನ್ 505, ಶಾಂತಿ ಕದಡುವ ಮಾತಿನ ಕಾರಣಕ್ಕೆ ಸೆಕ್ಷನ್ 153 ಎ ಅಡಿಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳೀಯ ಮತ್ತು ರಾಜ್ಯ ಮಟ್ಟದ ದೃಶ್ಯ ಮಾಧ್ಯಮಗಳಲ್ಲಿ ಪ್ರಕಟವಾದ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧಾರಾಮಯ್ಯ ಅವರ ಬಗ್ಗೆ ಸಂಸದ ಅನಂತ ಕುಮಾರ್ ಬಳಸಿದ ಭಾಷೆ, ಚಿನ್ನದ ಪಳ್ಳಿ ಮಸೀದಿಯನ್ನು ಬಾಬರಿ ಮಸೀದಿ ತರಹ ಹೊಡೆದು ಹಾಕಲಾಗುವುದು, ರಣ ಭೈರವ ಎದ್ದಿದ್ದಾನೆ. ಅಹಿಂದ ಎಂಬ ಗತಿಗೆಟ್ಟ ಮಾನಸಿಕತೆ, ಅಲ್ಪಸಂಖ್ಯಾತರಿಗೆ ಮಾರಿಕೊಂಡ ಮುಖ್ಯಮಂತ್ರಿ ಎಂಬ ವಾಕ್ಯಗಳನ್ನು ಸಂಸದ ಅನಂತ ಕುಮಾರ್ ಹೆಗಡೆ ಬಳಸಿದ್ದರು. ಅಲ್ಲದೆ ಶಿರಸಿ ಸಿಪಿ ಬಝಾರ್ ಮಸೀದಿ ವಿಜಯ ವಿಠ್ಠಲ ದೇವಸ್ಥಾನ ಆಗಿದೆ. ಶ್ರೀರಂಗಪಟ್ಟಣದ ದೊಡ್ಡ ಮಸೀದಿ ಹನುಮಂತನ ದೇವಸ್ಥಾನವಾಗಿದೆ ಎಂದಿದ್ದರು. ನಮ್ಮ ವಿರೋಧಿ ಕಾಂಗ್ರೆಸ್ ಅಲ್ಲ. ಕಾಂಗ್ರೆಸ್ ಗೆ ಬಿಜೆಪಿ ಎದುರಿಸುವ ಮಾನಸಿಕತೆ ಇಲ್ಲ, ನಮ್ಮ ವಿರೋಧ ಸಿದ್ಧಾರಾಮಯ್ಯ. ನಮ್ಮ ವಿರೋಧಿಗಳು ಸನಾತನವನ್ನು ವಿರೋಧಿಸುವವರು. ಅವರ ವಿರುದ್ಧ ನಾವು ಸೇಡು ತೀರಿಸಿಕೊಳ್ಳಬೇಕು ಎಂದಿದ್ದರು.
ಈ ಹೇಳಿಕೆ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಕಾಂಗ್ರೆಸ್ಸಿಗರು, ಸಂಸದ ಸಮಾಜದ ಕೋಮು ಸೌಹಾರ್ದತೆ ಹಾಳುಗೆಡವುತ್ತಿದ್ದಾರೆ ಎಂದು ಟೀಕಿಸಿದ್ದರು. ಗೃಹ ಸಚಿವರು ಹಾಗೂ ಆರೋಗ್ಯ ಸಚಿವರ ಪ್ರತಿಕ್ರಿಯೆಗಳು ಸಹ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಇದನ್ನೆಲ್ಲಾ ಗಮನಿಸದ ಕುಮಟಾ ಪೋಲೀಸರು, ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ