Karwar: ಅಪಾಯಕ್ಕೆ ಸಿಲುಕಿದ ಮಂಗಳೂರಿನ 7 ಮೀನುಗಾರರ ರಕ್ಷಿಸಿದ ಕೋಸ್ಟ್ ಗಾರ್ಡ್
ಮೀನುಗಾರಿಕಾ ಬೋಟ್ ಗೆ ನೀರು ನುಗ್ಗಿ ಸಂಕಷ್ಟಕ್ಕೆ ಸಿಲುಕಿದ್ದ ಮೀನುಗಾರರು
Team Udayavani, Jan 17, 2024, 8:18 PM IST
ಕಾರವಾರ: ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ನಲ್ಲಿ ನೀರು ನುಗ್ಗಿ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿರುವ ಘಟನೆ ಕಾರವಾರದ ಬೈತ್ ಖೋಲ್ ಬಂದರಿನಲ್ಲಿ ಬುಧವಾರ ನಡೆದಿದೆ.
ಮಂಗಳೂರಿನ ಏಳು ಮಂದಿ ಮೀನುಗಾರರಿದ್ದ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ರಾಯಲ್ ಬ್ಲ್ಯೂ, ಕಾರವಾರದ ಬೈತಖೋಲ್ ಬಂದರಿನಿಂದ 40 ನಾಟಿಕಲ್ ಮೈಲು ದೂರದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಅಪಾಯಕ್ಕೆ ಸಿಲುಕಿತ್ತು.
ಇದರಿಂದಾಗಿ ಆತಂಕಕ್ಕೊಳಗಾದ ಮೀನುಗಾರರು ಕರಾವಳಿ ಕಾವಲು ಪೊಲೀಸ್, ಕೋಸ್ಟ್ ಗಾರ್ಡ್ ಗೆ ಸಂದೇಶ ರವಾನಿಸಿದ್ದರು. ಬೋಟ್ ಒಳಗಡೆ ನೀರು ನುಗ್ಗುತ್ತಿರುವ ಬಗ್ಗೆ ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಹಾಗೂ ಗೋವಾ ಕೋಸ್ಟ್ ಗಾರ್ಡ್ ರಕ್ಷಣ ಕಾರ್ಯಾಚರಣೆಗೆ ಮುಂದಾಗಿತ್ತು. ಕೊನೆಗೆ ಆರು ಬೋಟ್ ಗಳ ಸಹಾಯದಿಂದ ಮುಳುಗುತ್ತಿದ್ದ ಬೋಟನ್ನು ಎಳೆದು ಕಾರವಾರದ ಬಂದರಿಗೆ ತರಲಾಗಿದ್ದು, ಮೀನುಗಾರರು ಸುರಕ್ಷಿತವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ