Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
Team Udayavani, Dec 9, 2023, 2:05 PM IST
ಕಾರವಾರ: ನಗರದ ಕೆ.ಇ. ಬಿ. ರಸ್ತೆಯಲ್ಲಿರುವ ಇಂದಿರಾ ಕ್ಯಾಂಟಿನ್ ಗೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಬೆಳಗಿನ ಉಪಹಾರ ಸೇವಿಸಿ, ಆಹಾರದ ರುಚಿ ಮತ್ತು ಗುಣಮಟ್ಟದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಯಾಂಟಿನ್ ನಲ್ಲಿ ಶುಚಿ ಮತ್ತು ರುಚಿಗೆ ಯಾವಾಗಲೂ ಹೆಚ್ಚಿನ ಪ್ರಥಮಾದ್ಯತೆ ನೀಡುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಕ್ಯಾಂಟಿನ್ ಉಪಯೋಗಕ್ಕೆ ನೀಡಿರುವ ಫ್ರಿಡ್ಜ್ ಮತ್ತಿತರ ಯಂತ್ರೋಪಕರಣಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಹಾಗೂ ಶುದ್ದ ಕುಡಿಯುವ ಯಂತ್ರದ ಮೂಲಕ ಗ್ರಾಹಕರಿಗೆ ನೀರು ಒದಗಿಸುವಂತೆ ಸೂಚನೆ ನೀಡಿದರು.
ಸರ್ಕಾರ ಸಾರ್ವಜನಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ಇಂದಿರಾ ಕ್ಯಾಂಟಿನ್ ಸೇವೆಯನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ ಕಡಿಮೆ ವೆಚ್ಚದಲ್ಲಿ ಶುಚಿ ಮತ್ತು ರುಚಿಯಾದ ಆಹಾರ ಸೇವನೆ ಮಾಡುವಂತೆ ತಿಳಿಸಿದರು.
ಪ್ರತಿ ದಿನದ ಮೆನು ಪ್ರಕಾರವೇ ಆಹಾರ ತಯಾರಿಸಿ, ಗ್ರಾಹಕರಿಗೆ ವಿತರಿಸುವಂತೆ ಕ್ಯಾಂಟಿನ್ ಸಿಬ್ಬಂದಿಗೆ ಸೂಚನೆ ನೀಡಿದರು.
ಇಂದಿರಾ ಕ್ಯಾಂಟಿನ್ ನಲ್ಲಿ ಪ್ರತಿ ದಿನ ಬೆಳಗ್ಗೆ ಉಪಹಾರ ಮತ್ತು ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯಿದ್ದು, ಉಪಹಾರಕ್ಕೆ ರೂ.5 ಮತ್ತು ಊಟಕ್ಕೆ ರೂ.10 ದರ ಮಾತ್ರ ನಿಗದಿಪಡಿಸಿದೆ.
ಜಿಲ್ಲಾಧಿಕಾರಿ ಅವರು ಕ್ಯಾಂಟಿನ್ ನಲ್ಲಿ ತಯಾರಿಸಿದ್ದ ಮಸಾಲ ರೈಸ್ ಸವಿದು, ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ