ಕಾರವಾರ-ಹೊನ್ನಾವರ-ಭಟ್ಕಳ ಠಾಣೆ ಮೇಲ್ದರ್ಜೆಗೆ

ಮುಂದಿನ ತಿಂಗಳೊಳಗೆ ಸರ್ಕಾರದ ಆದೇಶ ಜಿಲ್ಲೆಯಲ್ಲಿ ಅನುಷ್ಠಾನ: ಎಸ್ಪಿ ಶಿವಪ್ರಕಾಶ್‌ ದೇವರಾಜ್‌

Team Udayavani, Jul 1, 2021, 8:55 PM IST

30kwr01a

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ ಹಾಗೂ ಭಟ್ಕಳ ಪೊಲೀಸ್‌ ಠಾಣೆಯನ್ನು ಶೀಘ್ರದಲ್ಲೇ ಪೊಲೀಸ್‌ ಇನ್‌ಸ್ಪೆಕ್ಟರ್‌ ಠಾಣೆಗಳನ್ನಾಗಿ ಮೇಲ್ದರ್ಜೆಗೆ ಏರಿಸಲು ಸಿದ್ಧತೆ ನಡೆದಿದೆ. ಸರ್ಕಾರದ ಆದೇಶದ ಪ್ರಕಾರ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಎಸ್ಪಿ ಶಿವಪ್ರಕಾಶ್‌ ದೇವರಾಜು ತಿಳಿಸಿದ್ದಾರೆ.

ಕಾರವಾರ ಸಿಪಿಐ ಅಡಿ ಪ್ರತ್ಯೇಕವಾಗಿ ಗ್ರಾಮೀಣ, ನಗರ ಹಾಗೂ ಸಂಚಾರ ಠಾಣೆಗಳಿದ್ದವು. ಹಾಗೆ ಹೊನ್ನಾವರ ಸಿಪಿಐ ಅಡಿಯಲ್ಲಿ ಮಂಕಿ ಪೊಲೀಸ್‌ ಠಾಣೆ ಇದ್ದು, ಭಟ್ಕಳ ಸಿಪಿಐ ಅಡಿಯಲ್ಲಿ ನಗರ, ಗ್ರಾಮೀಣ ಹಾಗೂ ಮುಡೇìಶ್ವರ ಠಾಣೆಗಳಿದ್ದವು. ಇದೀಗ ಈ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ ಏರುತ್ತಿವೆ. ಕೆಲ ತಿಂಗಳ ಹಿಂದೆ ರಾಜ್ಯ ಸರ್ಕಾರ ಹಲವು ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಿದ್ದು, ಅದರಂತೆ ಕಾರವಾರ, ಹೊನ್ನಾವರ ಹಾಗೂ ಭಟ್ಕಳ ಸಿಪಿಐ ಠಾಣೆಯನ್ನು ಪೊಲೀಸ್‌ ಇನ್‌ಸ್ಪೆಕ್ಟರ್‌ ಠಾಣೆಯನ್ನಾಗಿ ಮಾಡಿ ಪರಿವರ್ತಿಸಿ ಆದೇಶಿಸಿತ್ತು.

ಕಾರವಾರ ನಗರ ಠಾಣೆಗೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಮುಖ್ಯಸ್ಥರಾಗಿದ್ದು, ಸಂಚಾರ ಠಾಣೆಯನ್ನು ಅವರ ಅಧೀನಕ್ಕೆ ಒಳಪಡಿಸಿ ಆದೇಶಿಸಿತ್ತು. ಹಾಗೆಯೇ ಕಾರವಾರ ಗ್ರಾಮೀಣ ಠಾಣೆಗೂ ಪೊಲೀಸ್‌ ಇನ್‌ಸ್ಪೆಕ್ಟರನ್ನು ಮುಖ್ಯಸ್ಥರನ್ನಾಗಿ ಮಾಡಿ ಪರಿವರ್ತಿಸಲು ಸೂಚಿಸಿತ್ತು. ಇನ್ನೊಂದೆಡೆ ಹೊನ್ನಾವರ ಠಾಣೆಯನ್ನ ಸಹ ಪೊಲೀಸ್‌ ಇನ್‌ಸ್ಪೆಕ್ಟರ್‌ ಠಾಣೆಯನ್ನಾಗಿ ಮಾಡಲಾಗಿದೆ. ಭಟ್ಕಳ ಗ್ರಾಮೀಣ ಠಾಣೆ ವೃತ್ತ ನಿರೀಕ್ಷಕರ ಠಾಣೆಯನ್ನಾಗಿ ಮಾಡಿ ಅದರಡಿ ಹೊನ್ನಾವರ ವೃತ್ತ ನಿರೀಕ್ಷಕರ ಅಡಿಯಲ್ಲಿದ್ದ ಮಂಕಿ, ಮುಡೇìಶ್ವರ ಠಾಣೆ ಸೇರ್ಪಡೆ ಮಾಡಲಾಗುತ್ತಿದೆ.

ಇನ್ನು ಭಟ್ಕಳ ನಗರ ಠಾಣೆಯನ್ನ ಪೊಲೀಸ್‌ ಇನ್‌ಸ್ಪೆಕ್ಟರ್‌ ಠಾಣೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಆದೇಶದಲ್ಲಿ ಸೂಚಿಸಿತ್ತು. ಅದರಂತೆ ಮುಂದಿನ ತಿಂಗಳ ಒಳಗೆ ಈ ಎಲ್ಲಾ ಠಾಣೆಗಳನ್ನು ವಿಂಗಡಿಸಿ, ಮೇಲ್ದರ್ಜೆಗೆ ಏರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಹೆಚ್ಚುವರಿಯಾಗಿ 2 ಸಿಪಿಐ ಹುದ್ದೆ ಸೃಷ್ಟಿ: ಇನ್ನು ಠಾಣೆಗಳನ್ನು ಮೇಲ್ದರ್ಜೆಗೆ ಏರಿಸುವುದರಿಂದ ಕಾರವಾರ ಹಾಗೂ ಭಟ್ಕಳದಲ್ಲಿ ಇಬ್ಬರು ಇನ್‌ಸ್ಪೆಕ್ಟರ್‌ ಹುದ್ದೆಗಳು ಹೆಚ್ಚುವರಿಯಾಗಿ ಸೃಷ್ಟಿಯಾಗಲಿವೆ, ಸದ್ಯ ಈ ಹುದ್ದೆಗಳಿಗೆ ನೇಮಕ ಮಾಡುವ ಪ್ರಕ್ರಿಯೆ ನಡೆದಿದೆ ಎನ್ನಲಾಗಿದೆ. ಈ ಹಿಂದೆಯೇ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಬೇಕಿತ್ತು. ಕೊರೊನಾ ಇನ್ನಿತರ ಕಾರಣದಿಂದ ತಡವಾಗಿದ್ದು, ಸರ್ಕಾರದ ಆದೇಶದಂತೆ ಶೀಘ್ರದಲ್ಲೇ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

ಗೊಂದಲದ ಆದೇಶ: ಠಾಣೆಗಳನ್ನು ವಿಂಗಡಿಸಿ ಮೇಲ್ದರ್ಜೆಗೆ ಏರಿಸುವ ಸರ್ಕಾರದ ಆದೇಶ ಹೊನ್ನಾವರ ಭಾಗದಲ್ಲಿ ಸಾಕಷ್ಟು ಗೊಂದಲ ಮೂಡಿಸಿದೆ. ಈ ಹಿಂದೆ ಹೊನ್ನಾವರ ತಾಲೂಕಿನ ಮಂಕಿ ಠಾಣೆ ಹೊನ್ನಾವರ ವೃತ್ತ ನಿರೀಕ್ಷಕರ ಅಡಿಯಲ್ಲಿ ಬರುತ್ತಿತ್ತು. ಸದ್ಯ ಹೊನ್ನಾವರ ಠಾಣೆ ಮೇಲ್ದರ್ಜೆಗೆ ಏರಲಿದ್ದು, ಭಟ್ಕಳ ಗ್ರಾಮೀಣ ವೃತ್ತ ನಿರೀಕ್ಷಕರ ಠಾಣೆಯಡಿ ಮಂಕಿ ಠಾಣೆ ಸೇರಿಸಲು ಆದೇಶಿಸಲಾಗಿದೆ. ಮಂಕಿ ಠಾಣಾ ವ್ಯಾಪ್ತಿಯಲ್ಲಿ ಇಡಗುಂಜಿ ಸೇರಿದಂತೆ ಬಹುತೇಕ ಪ್ರದೇಶ ಹೊನ್ನಾವರ ತಾಲೂಕಿನಲ್ಲಿಯೇ ಬರಲಿದೆ. ಆದರೆ ಭಟ್ಕಳ ಗ್ರಾಮೀಣ ವೃತ್ತ ನಿರೀಕ್ಷಕರ ಅಡಿಯಲ್ಲಿ ಠಾಣೆ ಸೇರಿಸಲಿರುವುದರಿಂದ ಹೊನ್ನಾವರ ತಾಲೂಕಿನ ಜನರು ವೃತ್ತ ನಿರೀಕ್ಷರ ಕೆಲಸಕ್ಕಾಗಿ ಭಟ್ಕಳಕ್ಕೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಸಣ್ಣಪುಟ್ಟ ವಿಚಾರಕ್ಕೂ ವೃತ್ತ ನಿರೀಕ್ಷಕರ ಕಚೇರಿಗಾಗಿ ದೂರದ ಭಟ್ಕಳಕ್ಕೆ ತೆರಳುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಎದ್ದಿದೆ. ಹೊನ್ನಾವರ ಪೊಲೀಸ್‌ ಠಾಣೆಯನ್ನ ಮೇಲ್ದರ್ಜೆಗೆ ಏರಿಸುವ ಅಗತ್ಯವೇ ಇರಲಿಲ್ಲ. ಈಗಿರುವ ವೃತ್ತ ನಿರೀಕ್ಷಕರ ಕಚೇರಿ ಅಡಿಯಲ್ಲೇ ಮಂಕಿ, ಇಡಗುಂಜಿ ಪ್ರದೇಶ ಉಳಿಯಬೇಕು ಎಂಬ ಅಭಿಪ್ರಾಯ ಸಹ ಕೇಳಿ ಬಂದಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.