ಅಧಿಕಾರಿಗಳ ವಿರುದ್ಧ  ಶಾಸಕಿ ರೂಪಾಲಿ ಗರಂ

 ಕುಡಿಯುವ ನೀರು ಯೋಜನೆ ಅನುಷ್ಠಾನ ಅಸಮರ್ಪಕ! ­ಕೆಲಸ ಮಾಡಲಾಗದಿದ್ದರೆ ವರ್ಗಾವಣೆ ಪಡೆದು ಬೇರೆಡ ಹೋಗಿ

Team Udayavani, Apr 17, 2021, 8:04 PM IST

xdfbdsfsd

ಅಂಕೋಲಾ: ಕೇಂದ್ರ ಸರಕಾರದ ಪ್ರತಿಷ್ಠಿತ ಯೋಜನೆಯಾದ ಪ್ರತಿ ಮನೆಗೂ ಕುಡಿಯುವ ನೀರು ಜಲ ಜೀವನ ಮಿಶನ್‌ ಕಾರ್ಯರೂಪಕ್ಕೆ ತರುವಲ್ಲಿ ಇಲಾಖೆ ಅಧಿಕಾರಿಗಳು ಲೋಪವೆಸಗಿದ ಕಾರಣ ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳ ಬೆವರಿಳಿಸಿದ ಪ್ರಸಂಗ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಶಾಸಕಿ ರೂಪಾಲಿ ನಾಯ್ಕ ಸಭೆಯಲ್ಲಿ ಹಾಜರಿದ್ದ ಜೆಜೆಎಂ ಅನುಷ್ಠಾನ ಅಧಿಕಾರಿಗಳಾದ ಗುರುದತ್‌ ಶೇಟ್‌ ಹಾಗೂ ವಿ.ಎಸ್‌. ಬಾಲಚಂದ್ರ ಇವರ ಬಳಿ ಯೋಜನೆಯ ಮಾಹಿತಿ ಕೇಳಿದರು. ಈ ಅಧಿಕಾರಿಗಳ ವಿರುದ್ಧ ಈಗಾಗಲೇ ಹಲವಾರು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಅವರಿಂದ ಮಾಹಿತಿ ಬಯಸಿದ್ದರು. ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದೆ ಕೆಲಸ ಮಾಡದೆಯೂ ಅಲ್ಲಿ ಇಲ್ಲಿ ಕೆಲಸ ಆಗಿದೆ ಪ್ರಗತಿಯಲ್ಲಿದೆ ಮುಂತಾದ ಉಡಾಫೆ ಉತ್ತರ ನೀಡಲು ಮುಂದಾದಾಗ ಶಾಸಕಿ ಕೆರಳಿ ಕೆಂಡವಾದರು. ನೀವು ಕುಡಿಯುವ ನೀರಿನ ಯೋಜನೆ ವಿಷಯದಲ್ಲಿ ಅಸಡ್ಡೆ ತೋರಿದರೆ ತಕ್ಕ ಶಾಸ್ತಿ ಮಾಡಬೇಕಾಗುವದು ಎಂದು ಎಚ್ಚರಿಕೆಯನ್ನೂ ನೀಡಿದರು.

ತಾಲೂಕಿನ ಬಹುತೇಕ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒಗಳು ಈ ಯೋಜನೆಯ ಬಗ್ಗೆ ತಮಗೆ ಮಾಹಿತಿಯೇ ಇಲ್ಲ. ಅಧಿ ಕಾರಿಗಳು ತಮ್ಮನ್ನು ಸಂಪರ್ಕಿಸುತ್ತಿಲ್ಲ ಹಾಗೂ ಸರಿಯಾಗಿ ಸರ್ವೇ ಕೂಡ ನಡೆಸಿಲ್ಲ ಎಂದು ಆರೋಪಿಸಿದರು. 16 ಕೋಟಿ ರೂ ಯೋಜನೆಯಾದ ಜಲ ಜೀವನ ಮಿಶನ್‌ ಅನುಷ್ಠಾನ ಮಾಡಬೇಕಾದರೆ ಜನಪ್ರತಿನಿಧಿ ಗಳನ್ನು ಸಂಪರ್ಕಿಸದೇ ತಾಲೂಕು ದಂಡಾಧಿಕಾರಿಗಳನ್ನೂ, ತಾಪಂ ಕಾರ್ಯನಿರ್ವಹಣಾ  ಧಿಕಾರಿಗಳನ್ನೂ, ಶಾಸಕರನ್ನೂ ಸಂಪರ್ಕಿಸದೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಪ್ರಮುಖ ಯೋಜನೆ ಉದ್ಘಾಟನೆಯನ್ನೂ ನಡೆಸದೆ ಇರುವ ಹಿಂದಿನ ಉದ್ದೇಶವೇನು ಎಂದು ಶಾಸಕಿ ಖಾರವಾಗಿ ಪ್ರಶ್ನಿಸಿದರು. ಒಂದು ಹಂತದಲ್ಲಿ ಸಮಜಾಯಿಶಿಯನ್ನು ನೀಡಲು ಯತ್ನಿಸಿದ ಅ ಧಿಕಾರಿಗಳ ಬೆವರಿಳಿಸಿದ ಶಾಸಕಿ ಇದು ಪ್ರಧಾನ ಮಂಗತ್ರಿಗಳ ಮಹತ್ವಾಕಾಂಕ್ಷೆ ಯೋಜನೆ ಪ್ರತೀ ಮನೆಗೂ ನೀರಿನ ಸಂಪರ್ಕ ನೀಡುವುದೇ ಉದ್ದೇಶ. ಇದನ್ನು ಹಾಳು ಮಾಡಿ ಹಣವನ್ನು ನೀರಲ್ಲಿ ಹೋಮ ಮಾಡಿದಂತಾಗಲು ಬಿಡುವುದಿಲ್ಲ. ನಿಮ್ಮಿಂದ ಆಗದಿದ್ದರೆ ರಾಜಿನಾಮೆ ನೀಡಿ ಹೋಗಿ ಬೇರೆ ಅ ಧಿಕಾರಿಗಳಿಂದ ಮಾಡಿಸುತ್ತೇವೆ ಎಂದರು.

ಈ ಹಿಂದೆ ತಾಪಂ ಸಾಮಾನ್ಯ ಸಭೆಯಲ್ಲಿ ಪ್ರತಿ ಬಾರಿಯೂ ಇದರ ಬಗ್ಗೆ ಚರ್ಚೆಯಾಗುತ್ತಲೇ ಇತ್ತು. ಅಧ್ಯಕ್ಷೆ ಸುಜಾತಾ ಗಾಂವಕರ ಕೂಡ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು. ಆದರೆ ಅಧಿಕಾರಿಗಳು ಮತ್ತೆ ಅದೇ ಚಾಳಿಯಲ್ಲಿದ್ದರು. ಕೆಲವು ಗ್ರಾಮಗಳಲ್ಲಿ ಕೆಲಸ ಪ್ರಾರಂಭಿಸಿದ್ದರೆ. ನೀರಿನ ಮೂಲವೇ ಇಲ್ಲ. ಕೆಲವು ಕಡೆ ಕೆಲಸವೇ ಅರ್ಧ ಮರ್ಧ ಆದರೂ ಕೆಲಸ ಆಗಿದೆ ಎನ್ನುವುದೇ ಅ ಕಾರಿಗಳ ವಾದ. ಹಿಲ್ಲೂರಿನಲ್ಲಿ ಶೆಡ್‌ ಮಾತ್ರ ಇದೆ ಮಶಿನ್ನೇ ಇಲ್ಲ. ರಾಮನಗುಳಿಯಲ್ಲಿ ನೀರಿನ ಸೌಕರ್ಯ ಇದ್ದಲ್ಲಿಯೇ ಮತ್ತೆ ಕೆಲಸ ಪ್ರಾರಂಭಿಸಿದ್ದಾರೆ. ಹಟ್ಟಿಕೇರಿಯಲ್ಲಿ ಸಮರ್ಪಕವಾಗಿ ಮಾಡಿಲ್ಲ ಹೀಗೆ ಎಲ್ಲೂ ಕೂಡ ಕೆಲಸ ಸರಯಾಗಿಲ್ಲ ಎಂಬ ಆರೋಪಗಳೇ ಕೇಳಿಬರುತ್ತಿವೆ. ತಹಶೀಲ್ದಾರ್‌ ಉದಯ ಕುಂಬಾರ ಸರಕಾರದ ಯಾವುದೇ ಯೋಜನೆಗಳನ್ನು ಜಾರಿಗೊಳಿಸುವಾಗ ಪ್ರೊಟೋಕಾಲ ಪ್ರಕಾರ ಜನಪ್ರತಿನಿಧಿಗಳಿಗೆ, ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕಾಗುತ್ತದೆ. ಅದನ್ನು ಯಾಕೆ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದರು.

ಜನರಿಗೆ ನೀರು ಕೊಡುವ ಯೋಜನೆ ಸರಿಯಾಗಿ ಮಾಡಿ ಎಂದರು. ತಾಪಂ ಇಒ ಪಿ.ವೈ. ಸಾವಂತ ಮಾತನಾಡಿ ಪ್ರತೀ ವಾರಕ್ಕೊಮ್ಮೆ ಕೆಲಸದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಕೆಲವು ಪಂಚಾಯತಗಳಲ್ಲಿ ನೀರಿನ ಅಭಾವವಿದೆ ಟ್ಯಾಂಕರ್‌ಗಳಿಂದ ನೀರು ಸರಬರಾಜು ಮಾಡಲು ಜಿಲ್ಲಾಧಿಕಾರಿಗಳಿಂದ ಆದೇಶ ಬಂದಿಲ್ಲ. 14 ನೇ ಹಣಕಾಸಿನಲ್ಲಿ ಹಣವಿಲ್ಲ ತಾತ್ಕಾಲಿಕವಾಗಿ ಗ್ರಾಪಂಗಳಿಂದಲೇ ನೀರು ಪೂರೈಸುವ ಕ್ರಮದ ಬಗ್ಗೆ ಚರ್ಚಿಸಲಾಗುವದು ಎಂದರು. ಮಳೆಗಾಲದಲ್ಲಿ ನೆರೆ ಭೀತಿಯಿರುವ ಕುರ್ವೆಯ 14 ಕುಟುಂಬಗಳಿಗೆ ಈಗಾಗಲೇ ಬೇರೆ ಕಡೆ ಜೂಗದ ಸ.ನಂ. 12/ಅ ದಲ್ಲಿ 14 ಗುಂಟೆ ಮೀಸಲಿಡಲಾಗಿದೆ. ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.