Karwar Naval Base; ತೇಜ್ ಟಗ್ ಬೋಟ್ ನ ಇಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿ
Team Udayavani, Aug 10, 2023, 3:34 PM IST
ಕಾರವಾರ :ಕಾರವಾರದ ಕದಂಬ ನೌಕಾನೆಲೆಯ ಡಾಕ್ ಯಾರ್ಡ್ ನಲ್ಲಿ ಗುರುವಾರ ಮಧ್ಯಾಹ್ನ ಆಗ್ನಿ ಅನಾಹುತ ನಡೆದಿದೆ. ಸೀಬರ್ಡ್ ನೌಕಾನೆಲೆಯ ತೇಜ್ ಹೆಸರಿನ ಟಗ್ ಬೋಟ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು, ಶಿಫ್ಟ್ ಲಿಫ್ಟ್ ಡಾಕ್ ಯಾರ್ಡ್ ದಟ್ಟ ಹೊಗೆಯಿಂದ ತುಂಬಿ ಹೋಗಿತ್ತು.
ಬೃಹತ್ ಯುದ್ಧನೌಕೆಗಳನ್ನು ಡಾಕ್ ಯಾರ್ಡ್ ಗೆ ಕರೆತರುವ ತೇಜ್ ಹೆಸರಿನ ಟಗ್ ಬೋಟ್ ನ ಇಂಜಿನ್ ಗೆ ಬೆಂಕಿ ತಗುಲಿದ ಪರಿಣಾಮ ನೌಕಾನೆಲೆಯ ಡಾಕ್ ಯಾರ್ಡ್ ಗೆ ಬೆಂಕಿ ಹರಡುವ ಸಾಧ್ಯತೆಗಳಿದ್ದವು.
.ದೊಡ್ಡ ಮಟ್ಟದಲ್ಲಿ ಟಗ್ ಬೋಟ್ ಗೆ ಬೆಂಕಿ ಆವರಿಸುತ್ತಿದ್ದಂತೆ ಎಚ್ಚೆತ್ತ ಸಿಬಂದಿ ಕಾರವಾರದಿಂದ ಆಗ್ನಿಶಾಮಕ ದಳವನ್ನು ಕರೆಯಿಸಿ,ಬೆಂಕಿ ಆರಿಸಿತು.ಸ್ಥಳಕ್ಕೆ ಕಾರವಾರದ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ದೊಡ್ಡ ಪ್ರಮಾಣದ ಬೆಂಕಿ ಆರಿಸಲು ಶ್ರಮಿಸಿದರು.
ನೌಕಾ ಅಗ್ನಿಶಾಮಕ ಸಿಬಂದಿ ಹಾಗೂ ಕಾರವಾರ ಅಗ್ನಿಶಾಮಕ ಸಿಬಂದಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸಿ ಬೆಂಕಿ ನಂದಿಸಿದರು.ತೇಜ್ ಟಗ್ ನ ಬೆಂಕಿ ಶೀಘ್ರ ಹತೋಟಿಗೆ ಬಂದು ಹೆಚ್ಚಿನ ಅನಾಹುತ ಸಂಭವಿಸಲಿಲ್ಲ ಎಂದು ನೌಕಾನೆಲೆ ಮೂಲಗಳು ತಿಳಿಸಿವೆ.
ಟಗ್ ನ ಬೆಂಕಿ ಅನಾಹುತಕ್ಕೆ ಕಾರಣ ತಿಳಿಯಲು ನೇವಿ ಆಂತರಿಕ ತನಿಖೆ ನಡೆಸಲಿದೆ. ಬೆಂಕಿ ಅನಾಹುತ ದಿಂದ ಸಿಬಂದಿಗಳಿಗೆ ಯಾವುದೇ ಅಪಾಯವಾಗಿಲ್ಲ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಬಂಧ ದೂರು ದಾಖಲಾಗುವ ಸಂಭವ ಸಹ ಇದೆ. ಟಗ್ ನಲ್ಲಿ ಬೆಂಕಿ ಹತ್ತಲು ತಾಂತ್ರಿಕ ತೊಡಕು ಕಾರಣ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು