ಆಸ್ಪತ್ರೆ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ  

ಪಿಎಫ್‌-ಇಎಸ್‌ಐ ಕಟ್ಟದ ಏಜೆನ್ಸಿ ಕಪ್ಪು ಪಟ್ಟಿಗೆ ಸೇರಿಸಲು ಹೋರಾಟಗಾರರ ಆಗ್ರಹ

Team Udayavani, Mar 4, 2021, 6:48 PM IST

Karwar Protest

ಕಾರವಾರ: ಇಲ್ಲಿನ ಮೆಡಿಕಲ್‌ ಕಾಲೇಜು ಹಾಗೂ ಅದರ ಅಧೀನದ ಆಸ್ಪತ್ರೆಯ ಗುತ್ತಿಗೆ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಬಳಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಬುಧವಾರ ಗುತ್ತಿಗೆ ಕಾರ್ಮಿಕ ನೌಕರರ ಸಂಘಟನೆ ಅಧ್ಯಕ್ಷ ವಿಲ್ಸನ್‌ ಬೈತಖೋಲ ಅವರು ಧರಣಿಗೆ ಮುನ್ನ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಮಾಡಿ ಮೆಡಿಕಲ್‌ ಕಾಲೇಜು ಆಡಳಿತ ಗುತ್ತಿಗೆ ನೌಕರರ ವಿರೋಧಿ ಧೋರಣೆ ಏಜೆನ್ಸಿ ಜೊತೆ ಹೇಗೆ ಶಾಮೀಲಾಗಿದೆ ಎಂಬ ಸಂಗತಿ ವಿವರಿಸಿದರು.

ಕಳೆದ 18 ತಿಂಗಳಿಂದ ಗುತ್ತಿಗೆ ಕಾರ್ಮಿಕರ ಪಿಎಫ್‌ ಹಾಗೂ ಇಎಸ್‌ಐ ಕಟ್ಟಬೇಕೆಂಬ ನಿಯಮ ಪಾಲಿಸಲು ಒತ್ತಾಯಿಸುತ್ತಿದ್ದೇವೆ. ಕಾರ್ಮಿಕರ ಹಿತ ಕಾಯುತ್ತಿದ್ದ ಪ್ರಾಮಾಣಿಕ ಏಜೆನ್ಸಿಯನ್ನು ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೈ ಬಿಟ್ಟಿತು. ಆದರೆ ನಿಯಮಬಾಹಿರವಾಗಿ ಹಾಗೂ ಕಾರ್ಮಿಕರಿಗೆ ಅನ್ಯಾಯ ಮಾಡುವ, ಬ್ಲಾಕ್‌ ಲೀಸ್ಟ್‌ಗೆ ಸೇರಿಸಬೇಕಾದ ಏಜೆನ್ಸಿಯನ್ನು ಕಾಲೇಜಿನಲ್ಲಿ ಇಟ್ಟುಕೊಂಡು ಗುತ್ತಿಗೆ ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆಪಾದಿಸಿದರು.

ಕುಮಟಾದ ಮಧುರಾ ಏಜೆನ್ಸಿ ಹಾಗೂ ಅದರ ಮುಖ್ಯಸ್ಥ ದಿಲೀಪ್‌ ಎಂಬುವವರು 2012 ರಿಂದ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಬಗ್ಗೆ ಕಾರ್ಮಿಕ ಅಧಿಕಾರಿಗೆ ದೂರು ನೀಡಲಾಗಿದೆ. ಡಿಸಿ, ಎಸ್ಪಿಗೆ ದೂರು ನೀಡಲಾಗಿದೆ. ಆದರೆ ಕ್ರಮವಾಗಿಲ್ಲ. ಇದು ಮೆಡಿಕಲ್‌ ಕಾಲೇಜು ಆಡಳಿತ ನಡೆಸುವವರು, ಮಧುರಾ ಏಜೆನ್ಸಿ ಜೊತೆ ಶಾಮೀಲಾಗಿದ್ದಾರೆ ಎಂಬುದರ ಸ್ಪಷ್ಟ ನಿದರ್ಶನ ಎಂದು ಕಾರ್ಮಿಕ ಮುಖಂಡ ವಿಲ್ಸನ್‌ ಫರ್ನಾಂಡೀಸ್‌ ಆಪಾದಿಸಿದರು.

ಆಸ್ಪತ್ರೆ ರೋಗಿಗಳಿಗೆ ತೊಂದರೆ ಆಗಬಾರದು ಎಂದು ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡುತ್ತಿದ್ದೆವು. ಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಬೆದರಿಕೆ ಹಾಕಲಾಗುತ್ತಿದೆ. ನಾವು ಯಾವ ನಾಡಿನಲ್ಲಿ  ಇದ್ದೇವೆ ಎಂಬುದೇ ಗೊತ್ತಾಗುತ್ತಿಲ್ಲ. ಮಧುರ ಏಜೆನ್ಸಿಯನ್ನು ಮೆಡಿಕಲ್‌ ಕಾಲೇಜು ಗುತ್ತಿಗೆ ಏಜೆನ್ಸಿಯಿಂದ ಕೈಬಿಡಬೇಕು ಎಂಬುದು ನಮ್ಮ ಮೊದಲ ಬೇಡಿಕೆ. ನಮ್ಮ ಅಳಲನ್ನು ಶಾಸಕಿ ರೂಪಾಲಿ ನಾಯ್ಕ ಆಲಿಸಬೇಕು. ಮಹಿಳಾ ಕಾರ್ಮಿಕರ ಮೇಲಿನ ದೌರ್ಜನ್ಯವನ್ನು ಅವರು ಕೇಳಬೇಕು. ಗುತ್ತಿಗೆ ಕಾರ್ಮಿಕರಿಗೆ ಪಿಎಫ್‌ ನೀಡುತ್ತಿದ್ದ ಯುನಿವರ್ಸಲ್‌ ಏಜೆನ್ಸಿಗೆ ಮರಳಿ ಗುತ್ತಿಗೆ ನೀಡಬೇಕು. ಇಲ್ಲವೇ ನ್ಯಾಯಯುತವಾಗಿ ಪಿಎಫ್‌, ಇಎಸ್‌ಐ ಕಟ್ಟುವವರಿಗೆ ಏಜೆನ್ಸಿ ನೀಡಲಿ ಎಂದು ವಿಲ್ಸನ್‌ ಆಗ್ರಹಿಸಿದರು.

ನ್ಯಾಯ ಸಿಗುವವರೆಗೆ ಕೆಲಸ ನಿಲ್ಲಿಸಿ, ದಿನವೂ ಧರಣಿ ನಡೆಸಲಾಗುವುದು ಎಂದು ಅವರು ಹೇಳಿದರು. ಧರಣಿ ಪ್ರಾರಂಭ: ಮೆಡಿಕಲ್‌ ಕಾಲೇಜಿನ ಗುತ್ತಿಗೆ ಕಾರ್ಮಿಕ ಮಹಿಳೆಯರು, ಯುವತಿಯರು ಜಿಲ್ಲಾಧಿಕಾರಿ ಕಚೇರಿ ಬಳಿ ಬುಧುವಾರದಿಂದ ಧರಣಿ ಆರಂಭಿಸಿದ್ದಾರೆ. ಅನ್ಯಾಯ ಮಾಡಿದವರಿಗೆ ಶಿಕ್ಷೆಯಾಗಲಿ, ಮಧುರ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸಲಿ ಎಂದು ಧರಣಿ ಆರಂಭಿಸಿದ್ದಾರೆ.

ಮೆಡಿಕಲ್‌ ಕಾಲೇಜು ಆಡಳಿತ ಆರು ಏಜೆನ್ಸಿಗೆ ಹೊರಗುತ್ತಿಗೆ ಹೊಣೆ ಹೊರಿಸಿ, ಕಾರ್ಮಿಕರನ್ನು ವಿಭಜಿಸುವ ತಂತ್ರ ಮಾಡಿದೆ. ಕೆಲ ಏಜೆನ್ಸಿಯವರು ಪಿಎಫ್‌ ಕಟ್ಟುತ್ತಾರೆ, ಆದರೆ ಮಧುರಾ ಏಜೆನ್ಸಿ ವಂಚಿಸುತ್ತಲೇ ಬಂದಿದೆ. ಇದು ನಿಲ್ಲಬೇಕು. ಗುತ್ತಿಗೆ ಕಾರ್ಮಿಕರನ್ನು ನಿರ್ಲಕ್ಷಿಸಿದ, ಅವರ ಹಣ ತಿಂದವರು ನರಕಕ್ಕೆ ಹೋಗಲಿದ್ದಾರೆ ಎಂದು ಧರಣಿ ನಿರತ ಮಹಿಳಾ ಕಾರ್ಮಿಕರು ಶಾಪ ಹಾಕಿ, ಧಿಕ್ಕಾರ ಕೂಗಿದರು. ಶಾಸಕಿ ರೂಪಾಲಿ ನಾಯ್ಕ ಇಂಥ ಭ್ರಷ್ಟರನ್ನು ಕ್ಷೇತ್ರದಲ್ಲಿಟ್ಟುಕೊಂಡಿದ್ದಾರೆ ಎಂದು ಮಹಿಳಾ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ವಿಲ್ಸನ್‌, ಗುರುರಾಜ ನಾಯ್ಕ, ಕಾಂಚನಾ ಚಂದಾವಕರ್‌, ವೀಪ್ತಿ ನಾಯ್ಕ, ಸುಶಾಂತ ವಾರಿಕರ್‌ ನೇತೃತ್ವ ವಹಿಸಿದ್ದಾರೆ. 200 ಗುತ್ತಿಗೆ ಕಾರ್ಮಿಕರು ಧರಣಿಯಲ್ಲಿ ಭಾಗವಹಿಸಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು .

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.