Karwar; ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
Team Udayavani, Jan 18, 2024, 4:57 PM IST
ಕಾರವಾರ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಘಟಕದಿಂದ ಕಾರವಾರದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾದು ಬಂತು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಸ್ . ಫಕೀರಪ್ಪ ನೇತೃತ್ವದಲ್ಲಿ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿದ ನಂತರ ಸರ್ಕಾರಕ್ಕೆ ಜಿಲ್ಲಾಡಳಿತದ ಮೂಲಕ ಮನವಿ ನೀಡಲಾಯಿತು. ಜಿಲ್ಲಾಧಿಕಾರಿಯ ಅನುಪಸ್ಥಿತಿಯಲ್ಲಿ ಜಿಲ್ಲಾ ಸರ್ವೆ ಇಲಾಖೆಯ ಉಪ ನಿರ್ದೇಶಕ ರಾಜು ಪೂಜಾರಿ ಮನವಿ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಫಕ್ಕೀರಪ್ಪ ಲಕ್ಷಾಂತರ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ ಮಾತನಾಡಿದ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಬಂಧಿಸಲು ಸರ್ಕಾರವನ್ನು ಒತ್ತಾಯಿಸಿದರು. ಕೋಮು ಸೌಹಾರ್ದ ಹಾಳು ಮಾಡುವ ಕಲ್ಲಡಕನ್ನು ಮಾತಾಡಲು ಬಿಟ್ಟದ್ದೇ ಸರಿಯಲ್ಲ. ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ, ಶಾಂತತೆಗೆ ಭಂಗ ತರುವ ಆತನನ್ನು ಬಂಧಿಸಬೇಕೆಂದು ಒತ್ತಾಯಿಸಿದರು .
ಲಿಂಗಾಯತರು, ಒಕ್ಕಲಿಗರು ವರದಿ ನೋಡದೆ, ಕಾಂತರಾಜು ಆಯೋಗದ ವರದಿ ತಿರಸ್ಕರಿಸಿ ಎನ್ನುತ್ತಾರೆ. ಇದು ಸರಿಯಲ್ಲ. ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸುವಾಗ, ಎಂಎಲ್ಎ, ಎಂಪಿ ಟಿಕೆಟ್ ಕೇಳುವಾಗ, ಮಂತ್ರಿಗಳಾಗುವಾಗ ಜಾತಿ ಹೆಸರಲ್ಲಿ ಬೇಡಿಕೆ ಇಡುತ್ತಾರೆ. ಆದರೆ ಬಡವರು ಜಾತಿ ಹೆಸರಲ್ಲಿ ಸೌಲಭ್ಯ ಪಡೆಯವ ಕಾಂತಾರಾಜು ವರದಿ ವಿರೋಧಿಸುತ್ತಾರೆ. ಇದೇ ವಿಪರ್ಯಾಸ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಾಮಾಜಿಕ ಸಮೀಕ್ಷೆ ವರದಿ ಸ್ವೀಕಾರಮಾಡಿ, ಬಡವರಿಗೆ ಹೆಚ್ಚಿನ ಸೌಕರ್ಯ ನೀಡಬೇಕು ಎಂದರು.
ಚಿಕ್ಕಮಗಳೂರು ಜಿಲ್ಲೆಯ ಗೊಲ್ಲರ ಹಟ್ಟಿಗೆ ದಲಿತರ ಯುವಕ ಹೋದ ಎಂದು ಹಲ್ಲೆಯಾಗಿದೆ. ಚಿತ್ರದುರ್ಗದ ಗೊಲ್ಲರ ಹಟ್ಟಿ ದೇವಸ್ಥಾನಕ್ಕೆ ದಲಿತರನ್ನು ಒಳಗೆ ಬಿಡದೆ ಅಸ್ಪೃಶ್ಯತೆ ಆಚರಿಸಿದವರನ್ನು ಬಂಧಿಸಲು ಆಗ್ರಹಿಸಿದರು. ಇದು ಸಂವಿಧಾನ ವಿರೋಧ ಕ್ರಮವಾಗಿದೆ. ಅಸ್ಪೃಶ್ಯತೆ ಆಚರಿಸುವವರನ್ನು ಬಂಧಿಸಬೇಕು ಎಂದು ಫಕ್ಕೀರಪ್ಪ ಹೇಳಿದರು.
ಪ್ರತಿಭಟನೆಯಲ್ಲಿ ಹುಲಿಗೆಪ್ಪ ಬೋವಿ ವಡ್ಡರ, ಮಂಜುನಾಥ ಹಳ್ಳೇರ, ಗೋಪಾಲ ನಡಕಿನ ಮನಿ, ಬಸವರಾಜ ಹಳ್ಳಮ್ಮನವರ, ಸಂತೋಷ ಕಟ್ಟಿಮನಿ,ಸಂಗೀತಾ ವಾಗ್ಮೋರೆ, ಪರಶುರಾಮ ಸಗರ ನಾಯಕ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ