Karwar Tunnel ; ಸತಾಯಿಸುವುದು ಒಳ್ಳೆಯದಲ್ಲ: ವಿಧಾನ ಪರಿಷತ್ ಸದಸ್ಯ ಉಳ್ವೇಕರ್

ಪುಣೆಯ ಟೆಕ್ನಾಲಜಿಕಲ್ ಯುನಿವರ್ಸಿಟಿ ಯಿಂದ ಫಿಟ್ ನೆಸ್ ವರದಿ ಬಂತು...

Team Udayavani, Sep 23, 2023, 7:36 PM IST

1-aadas

ಕಾರವಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುರಂಗ ಮಾರ್ಗ ಸಂಚಾರ ಮುಕ್ತ ಮಾಡಲು ಇದೇ ವರ್ಷದ 21 ಜುಲೈ ನಲ್ಲೇ ಪತ್ರ ಬರೆದರೂ ಸುರಂಗ ತೆರೆಯದೇ ಸತಾಯಿಸುವುದು ಒಳ್ಳೆಯದಲ್ಲ ಎಂದು ವಿಧಾನ ಪ‌ರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹೇಳಿದರು‌.

ಕಾರವಾರದ ಪತ್ರಿಕಾಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾಡಳಿತ ಇಂಥ ವಿಷಯದಲ್ಲಿ ಜನರ ಹಿತ, ವಾಹನಸವಾರರ ಹಿತ ನೋಡಬೇಕು. ಹಾಲಿ ಶಾಸಕ ಮತ್ತು ಉಸ್ತುವಾರಿ ಸಚಿವರಿಗೆ ಜನರ ಅಭಿಪ್ರಾಯ ಹಾಗೂ ಪುಣೆಯ ಸಿಒಇಪಿ ಟೆಕ್ನಾಲಾಜಿಕಲ್ ಯುನಿವರ್ಸಿಟಿ ತಜ್ಞರು ಕಾರವಾರ ಸುರಂಗ ಮಾರ್ಗ ವಾಹನ ಸಂಚಾರಕ್ಕೆ ಯೋಗ್ಯವಾಗಿದೆ ಎಂದು ಎನ್ ಎಚ್ ಎ ಐ ಗೆ ನೀಡಿರುವ ವರದಿಯನ್ನು ಮನವರಿಕೆ ಮಾಡಬೇಕಿತ್ತು ಎಂದರು‌ .‌ ಪುಣೆ ಟೆಕ್ನಾಲಜಿಕಲ್ ಯುನಿವರ್ಸಿಟಿ ನೀಡಿದ ವರದಿಯನ್ನು ಎನ್ ಎಚ್ ಎಐ ಅಂಗೀಕರಿಸಿ, ಅದನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರಿಗೆ 21 ಜುಲೈ 2023 ರಂದು ಕಳುಹಿಸಿದೆ. ಅಲ್ಲದೆ ಟನಲ್ ವಾಹನ ಸಂಚಾರಕ್ಕೆ ಮುಕ್ತ ಮಾಡಲು ವಿನಂತಿಸಿದೆ. ಸಂಸದರು ಈ ಬಗ್ಗೆ ಜಿಲ್ಲಾಧಿಕಾರಿ ಜೊತೆ ಮಾತಾಡಿದ್ದಾರೆ. ಆದರೂ ಜಿಲ್ಲಾ ಉಸ್ತುವಾರಿ ಹಾಗೂ ಸ್ಥಳೀಯ ಶಾಸಕ ಈ ಸಂಗತಿಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡದ್ದು ಸರಿಯಲ್ಲ ಎಂದರು.

ಕಾರವಾರ ಬಳಿಯ ಲಂಡನ್ ಬ್ರಿಜ್ ಬಳಿಯ ಸುರಂಗ ಮಾರ್ಗ ಮುಚ್ಚುವುದರಿಂದ ಜನರಿಗೆ ಕಷ್ಟವಾಗಿದೆ. ‌ಸುರಂಗದ ಮಾರ್ಗದಲ್ಲಿದ್ದ ಬಾಕಿ ಕಾಮಗಾರಿ ಮುಗಿದಿವೆ. ಆದರೂ ಸುರಂಗ ಮಾರ್ಗ ಮುಚ್ಚಿ ನಾಲ್ಕು ಕಿಮೀ ಘಟ್ಟದಲ್ಲಿ ವಾಹನ ಸವಾರರು ಸುತ್ತುವಂತೆ ಮಾಡಿರುವುದು ಸರಿಯಲ್ಲ. ಇದರಿಂದ ನಾಲ್ಕು ಅಪಘಾತ ಗಳಾಗಿವೆ. ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದಾನೆ. ಆ ಯುವಕನ ಕುಟುಂಬಕ್ಕೆ ಪರಿಹಾರ ನೀಡುವರಾರು ಎಂದು ಉಳ್ವೇಕರ್ ಪ್ರಶ್ನಿಸಿದರು‌ .

ಸೆ.29 ರೊಳಗೆ ಟನಲ್ ( ಸುರಂಗ) ಮಾರ್ಗ ವಾಹನ ಸವಾರರಿಗೆ ಮುಕ್ತವಾಗಬೇಕು. ಇಲ್ಲದಿದ್ದರೆ ಸೆ. 29 ರಂದು ಪಕ್ಷಾತೀತವಾಗಿ ಹೋರಾಟ ಮಾಡಲಾಗುವುದು ಎಂದರು. ಜನರ ರೊಚ್ಚಿನ ಎದುರು ಕಾನೂನು ನಿಲ್ಲುವುದಿಲ್ಲ. ಮೇಲಾಗಿ ಬಿಣಗಾ ಸಾರ್ವಜನಿಕರು ಟನಲ್ ಓಪನ್ ಮಾಡಲು ಶಾಸಕ ಸೈಲ್ ಅವರಿಗೆ ವಿನಂತಿಸಿದಾಗ, ನೀವು ಟನಲ್ ಓಪನ್ ಮಾಡಿ, ನಾನು ಬಂದ್ ಮಾಡಿಸುವೆ ಎಂದಿದ್ದಾರೆ. ಇದು ಅವರ ವಯಕ್ತಿಕ ಪ್ರತಿಷ್ಠೆಗಾಗಿ ಟನಲ್ ಬಂದ್ ಮಾಡಿದ್ದು ಎಂಬುದು ಸ್ಪಷ್ಟ. ಹಾಗಾಗಿ ಈ ಹೋರಾಟವನ್ನು ನಾವು ಜನರ ಹಿತಕ್ಕಾಗಿ ಕೈಗೆತ್ತಿಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಟನಲನ್ನು ಜನರಿಗೆ, ವಾಹನಸವಬರೆದರೂ ಮುಕ್ತ ಮಾಡುವೆವು ಎಂದು ವಿಧಾನ ಪರಿಷತ್ ಸದಸ್ಯ ಉಳ್ವೇಕರ್ ಹೇಳಿದರು. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯದೆ ಜನರ ಹಿತಕ್ಕೆ ಕೆಲಸ ಮಾಡಬೇಕೆಂದು ನಗರಸಭೆಯ ಮಾಜಿ‌ ಅಧ್ಯಕ್ಷ ನಿತಿನ್ ಪಿಕಳೆ ಹೇಳಿದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.