ಜಾತ್ಯತೀತ ನಿಲುವಿಗೆ ಕಾರವಾರ ಸಾಕ್ಷಿ: ಹೊರಟ್ಟಿ


Team Udayavani, Aug 25, 2019, 11:41 AM IST

uk-tdy-2

ಕಾರವಾರ: ಮತ್ತೆ ಕಲ್ಯಾಣ ಕಾರ್ಯಕ್ರಮದಲ್ಲಿ ಬಸವರಾಜ ಹೊರಟ್ಟಿ ಮಾತನಾಡಿದರು.

ಕಾರವಾರ: ಸರಕಾರ ಮಾಡುವ ಕೆಲಸವನ್ನು ಪಂಡಿತಾರಾಧ್ಯ ಸ್ವಾಮೀಜಿ ಮಾಡುತ್ತಿದ್ದಾರೆ. ಇಂದು ನಮ್ಮ ನಡುವೆ ಸ್ವಾರ್ಥ ಸ್ವಾಮಿಜಿಗಳೇ ಹೆಚ್ಚು. ವಿಧಾನ ಸಭೆಯಲ್ಲಿರುವುದಕ್ಕಿಂತ ಹೆಚ್ಚಿನ ರಾಜಕಾರಣ ಸ್ವಾಮಿಗಳಲ್ಲಿದೆ. ಕಾರವಾರ ಜಿಲ್ಲೆಯಲ್ಲಿ ಭ್ರಷ್ಟಾಚಾರ ಮೊದಲು ಕಡಿಮೆ ಇತ್ತು. ಜಾತ್ಯತೀತ ನಿಲುವಿಗೆ ಕಾರವಾರ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಅವರು ಮತ್ತೆ ಕಲ್ಯಾಣ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪುನಶ್ಚೇತನ ಕಾರ್ಯಕ್ರಮಗಳು ಇರುವಂತೆ ‘ಮತ್ತೆ ಕಲ್ಯಾಣ’ ಅಭಿಯಾನ ಜನಮಾನಸದಲ್ಲಿ ನೆಲೆಯೂರಿದ್ದ ಅನುಭವ ಮಂಟಪವನ್ನು ಮತ್ತೆ ನೆನಪಿಸುತ್ತಿದ್ದಾರೆ. 12ನೇ ಶತಮಾನದಲ್ಲಿ ನಡೆದ ಅನುಭವ ಮಂಟಪದಲ್ಲಿ ನಡೆದ ವಿಚಾರ ಕ್ರಾಂತಿ ಜಗತ್ತಿಗೇ ಮಾದರಿಯಾದುದು. ಅನುಭವ ಮಂಟಪದ ಮುಖ್ಯ ಉದ್ದೇಶ ಸಮಸಮಾಜ ನಿರ್ಮಾಣ. ಜಗತ್ತಿಗೇ ಮೊಟ್ಟಮೊದಲು ಪ್ರಜಾಪ್ರಭುತ್ವವನ್ನು ಕೊಟ್ಟದ್ದು ಅನುಭವ ಮಂಟಪ. ಈಗ ಕೇಳಿದಂತೆ ಒಮ್ಮೆ ಮಕ್ಕಳು ನನ್ನನ್ನೂ ಪ್ರಶ್ನಿಸಿದ್ದರು. ಮೀಸಲಾತಿಯಲ್ಲಿರುವ ಜನರಿಗೆ ಸಹಾಯ ದೊರೆಯುತ್ತದೆ. ಆದರೆ ಸಾಮಾನ್ಯ ವಿದ್ಯಾರ್ಥಿಗಳಿಗೆ ಯಾರು ಸಹಾಯ ಮಾಡುವರು? ನಾವು ಮುಂದುವರಿದ ಜಾತಿಯಲ್ಲಿ ಹುಟ್ಟಿದ್ದೇ ತಪ್ಪೇನು? ನಮ್ಮ ಜಾತಿಯನ್ನು ಬಿಟ್ಟು ನಾವು ಮುಸ್ಲಿಂ, ಕ್ರಿಶ್ಚಿಯನ್‌ ಆಗಬೇಕೇನು? ನಾವು ಶೇ.94 ರಷ್ಟು ಅಂಕ ಪಡೆದರೂ ನಮಗೆ ಸೀಟುಗಳು ಸಿಗುವುದಿಲ್ಲ.

ಅದೇ ಮೀಸಲಾತಿಯಲ್ಲಿ ಶೇ.70ರಷ್ಟು ಅಂಕಗಳು ಬಂದರೂ ಅವರಿಗೆ ಸೀಟು ಸಿಗುವುದು. ಇದು ಅನ್ಯಾಯವಲ್ಲವೇ? ಸಾಮಾನ್ಯರಿಗೂ ನ್ಯಾಯ ದೊರಕುವಂತಾಗಲು ನೀವು ಶಾಸಕರಾಗಿ ಏನು ಮಾಡುವಿರಿ? ಎಂದು. ನನಗೂ ಆ ಮಕ್ಕಳು ಕೇಳುವ ಪ್ರಶ್ನೆ ಸರಿಯಿದೆ ಎನ್ನಿಸಿತು. ಅಂಥ ಮಕ್ಕಳಿಗೆ ಒಳ್ಳೆಯದಾಗಲಿ ಎನ್ನುವ ದೃಷ್ಟಿಯಿಂದ ಹೋರಾಟದ ಮುಂಚೂಣಿ ವಹಿಸಿದ್ದೆ. ಮಕ್ಕಳಿಗಾಗುವ ಇಂಥ ಅನ್ಯಾಯವನ್ನು ಸರಿಪಡಿಸಲಾಗದ ಸ್ಥಿತಿಗೆ ನಾವು ಇಂದು ಬಂದಿದ್ದೇವೆ. ಇಂಥ ಅನ್ಯಾಯಗಳನ್ನು ಬಹಳ ದಿನಗಳ ಕಾಲ ತೆಡೆಯಲು ಸಾಧ್ಯವಿಲ್ಲ. ಸಂವಿಧಾನ ರಚಿಸಿದ ಅಂಬೇಡ್ಕರ್‌ ಅವರ ಸದುದ್ದೇಶ ಇಂದು ತನ್ನ ಆಶಯವನ್ನು ಕಳೆದುಕೊಳ್ಳುತ್ತಿರುವುದು ವಿಷಾದಕರ ಸಂಗತಿ. ಹಳ್ಳಿಯಲ್ಲಿ ಹುಟ್ಟಿರುವವರಿಗೆ ಅಂಬೇಡ್ಕರ್‌ ಮೂಲ ತತ್ವದ ಆಶಯ ಈಡೇರುತ್ತಿಲ್ಲ. ಖ್ಯಾತ ಶಿಕ್ಷಣ ತಜ್ಞ ರಾಧಾಕೃಷ್ಣ 12ನೇ ಶತಮಾನದ ಅನುಭವ ಮಂಟಪವೆ ಮೊದಲ ಸಂಸತ್ತು ಎಂದರು. ಇದೇ ಮಾತನ್ನು ಇಂದು ಬ್ರಿಟೀಷ್‌ ಪಾರ್ಲಿಮೆಂಟ್ ಸ್ಪೀಕರ್‌ ಕೂಡ ಹೇಳಿದರು. ಈ ಕಾರಣಕ್ಕೇ ಇಂಗ್ಲೆಂಡಿನಲ್ಲಿ ಬಸವಣ್ಣನ ಪ್ರತಿಮೆಯನ್ನು ಸ್ಥಾಪಿಸಲು ಅವರು ಒಪ್ಪಿರುವುದು. ಅನುಭವ ಮಂಟಪದಲ್ಲಿ ಶ್ರಮಜೀವಿಗಳ ಬಗ್ಗೆ ಗೌರವ, ಕಾಯಕ ಶ್ರದ್ಧೆ, ಸಮಾನತೆ ಇತ್ತು. ಅಲ್ಲಿ ಪ್ರಧಾನ ಮಂತ್ರಿ ಬಸವಣ್ಣನವರೂ ಇದ್ದರು. ನಾನೂ ಶಾಸಕನಾಗಿ, ಮಂತ್ರಿಯಾಗಿ, ಸಭಾಪತಿಯಾಗಿ ಕೆಲಸ ಮಾಡಿದ್ದೇನೆ. ಆದರೆ ಆ ಅನುಭವ ಮಂಟಪದ ಶಿಸ್ತು, ಸಂಯಮ, ಸೌಹಾರ್ದತೆ, ದೂರಾಲೋಚನೆ, ಸಕಲಜೀವಾತ್ಮರಿಗೂ ಲೇಸಾಗಬೇಕೆಂಬ ಹಂಬಲ, ಸಮಾಜದ ಹಿತದೃಷ್ಟಿಯಿಂದ ಅರ್ಥಪೂರ್ಣ ಚರ್ಚೆಗಳು ನಡೆಯುತ್ತಿಲ್ಲ.

ಈಗ ನಮ್ಮ ರಾಜ್ಯದಲ್ಲಿ ಯಾವ ರೀತಿಯ ಚುನಾವಣೆಗಳು ನಡೆಯುತ್ತಿವೆ. ಯಾವ ರೀತಿ ಕಲಾಪಗಳು ನಡೆಯುತ್ತಿವೆ ಎನ್ನುವು ದನ್ನು ಬಿಡಿಸಿ ಹೇಳಬೇಕಾಗಿಲ್ಲ. ಇದಕ್ಕೆ ಮತದಾರರೂ ಕಾರಣ. ಮೂರೂ ಪಕ್ಷಗಳಿಂದ ಹಣ ತೆಗೆದುಕೊಂಡು ಒಬ್ಬರಿಗೆ ಮತ ಹಾಕಿ, ಇಬ್ಬರಿಗೆ ಟೋಪಿ ಹಾಕುವರು. ಹೀಗಾಗಿಯೇ ಜನಪ್ರತಿನಿಧಿಗಳೂ ಹೊಣೆಗೇಡಿಗಳಾಗಿ ವರ್ತಿಸುತ್ತಿದ್ದಾರೆ. ಜಾತಿಯನ್ನು ಬಿಟ್ಟು ಮಾತೇ ಇಲ್ಲ ಎನ್ನುವಂತಾಗಿದೆ. ಬಸವಣ್ಣ ಪ್ರತಿಯೊಬ್ಬರೂ ದುಡಿದು ತಿನ್ನಿಬೇಕೆಂಬ ಕಾಯಕ ಸಿದ್ಧಾಂತವನ್ನು ಜಾರಿಗೆ ತಂದರು. ಆದರೆ ಇಂದಿನ ಸರಕಾರಗಳು ಅನೇಕ ಭಾಗ್ಯಗಳನ್ನು ಕೊಡುವ ಮೂಲಕ ಸೋಮಾ ರಿಗಳನ್ನಾಗಿ ಮಾಡುತ್ತಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.