ಅತಿಕ್ರಮಣದಾರರಿಗೆ ಕಿರುಕುಳ ನೀಡದಿರಿ


Team Udayavani, Apr 14, 2021, 4:38 PM IST

Untitled-4

ಭಟ್ಕಳ: ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯಾಗಿ ಜನರಿಗೆ ಉತ್ತಮ ಸೇವೆ ನೀಡುತ್ತಿರುವ ಇಲ್ಲಿನ ತಾಲೂಕು ಆಸ್ಪತ್ರೆ ವಾತಾವರಣವನ್ನು ಹಾಳುಮಾಡುವ ಪಿತೂರಿ ನಡೆಯುತ್ತಿದ್ದು, ಅದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಶಾಸಕ ಸುನೀಲ್‌ ನಾಯ್ಕ ಹೇಳಿದರು.

ಇಲ್ಲಿನ ತಾಪಂ ಸಭಾ ಭವನದಲ್ಲಿ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಸವಿತಾ ಕಾಮತ್‌ ಅವರಿಂದ ವಿವರ ಪಡೆದರು.

ಕೋವಿಡ್‌ ಲಸಿಕೆಯನ್ನು ಪ್ರಸ್ತುತ ನಿಯಮದಂತೆ ಸರ್ಕಾರಿ ಕಟ್ಟಡದಲ್ಲಿಯೇ ವ್ಯವಸ್ಥೆ ಮಾಡಬೇಕು. ಮುಂದಿನ ದಿನಗಳಲ್ಲಿ ನಿಯಮಾವಳಿಬದಲಾದರೆ ಖಾಸಗಿ ಕಟ್ಟಡಗಳಲ್ಲಿ ಲಸಿಕಾ ಅಭಿಯಾನ ಮಾಡಬಹುದು ಎಂದು ತಾಲೂಕುಆರೋಗ್ಯಾಧಿಕಾರಿ ಡಾ| ಮೂರ್ತಿರಾಜ ಭಟ್ಟ ಹೇಳಿದರು.

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಯೋಜನೆ ರೈತರಿಗೆ ವರದಾನವಾಗಿದ್ದರೂ ಬ್ಯಾಂಕ್‌ನವರಅಸಹಕಾರದಿಂದ ರೈತರು ಕ್ರೆಡಿಟ್‌ ಕಾರ್ಡ್‌ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೃಷಿ ಅಧಿಕಾರಿಜಿ.ಎನ್‌. ನಾಯ್ಕ ತಿಳಿಸಿದರು. ಶೀಘ್ರದಲ್ಲಿ ಬ್ಯಾಂಕ್‌ಗೆ ಭೇಟಿ ನೀಡಿ ವ್ಯವಸ್ಥಾಪಕರೊಂದಿಗೆ ಮಾತನಾಡಿಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

ಅರಣ್ಯ ಇಲಾಖೆ ಪ್ರಗತಿ ಕುರಿತು ವಲಯಅರಣ್ಯಾಧಿಕಾರಿ ಸವಿತಾ ದೇವಾಡಿಗವಿವರಿಸುತ್ತಿದ್ದಂತೆಯೇ ಶಾಸಕರು ನಿಮ್ಮ ಸಿಬ್ಬಂದಿಬಹಳ ವರ್ಷಗಳಿಂದ ಅತಿಕ್ರಮಣ ಮಾಡಿಉಳಿದುಕೊಂಡಿರುವವರು ಹಾಕಿದ ಗಿಡಗಳನ್ನುಕೀಳುತ್ತಿದ್ದಾರೆನ್ನುವ ದೂರು ಬಂದಿದೆ. ಯಾವುದೇಹೊಸ ಅತಿಕ್ರಮಣಕ್ಕೆ ನಾನೂ ಬೆಂಬಲ ನೀಡುವುದಿಲ್ಲ. ಆದರೆ ಹಲವಾರು ವರ್ಷಗಳಿಂದ ಅತಿಕ್ರಮಣ ಮಾಡಿಗಿಡ ಬೆಳೆಸಿ ಬಂದವರಿಗೆ ತೊಂದರೆ ಕೊಡದಂತೆಸಿಬ್ಬಂದಿಗೆ ತಿಳಿ ಹೇಳಿ ಎಂದು ಸೂಚಿಸಿದರು.

ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ಮಕ್ಕಳ ಮದುವೆ, ಸ್ಕಾಲರ್‌ಶಿಪ್‌ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸಿ ವರ್ಷಗಟ್ಟಲೆಯಾದರೂ ಅವರಿಗೆ ದೊರೆತಿಲ್ಲ. ತಕ್ಷಣ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದು ಕಾರ್ಮಿಕ ನಿರೀಕ್ಷಕರಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕಅಭಿಯಂತರ ಮಹೇಶ ನಾಯ್ಕ ಅವರನ್ನುಉದ್ದೇಶಿಸಿ ಮಾತನಾಡಿದ ಶಾಸಕರು, ಮುಡೇìಶ್ವರಮುಖ್ಯ ರಸ್ತೆಯ ಅವ್ಯವಸ್ಥೆಗೆ ಕಾರಣ ಏನು? ಗುತ್ತಿಗೆದಾರರಿಗೆ ಇನ್ನೆಷ್ಟು ಕಾಲಾವಕಾಶ ಬೇಕು, ಅಗೆದು ಹಾಕಿ ಎಷ್ಟು ಸಮಯವಾಗಿದೆ, ಇದೊಂದುಕಾಮಗಾರಿಯಿಂದ ಮುಜುಗರವಾಗುತ್ತಿದೆ ಎಂದು ಖಾರವಾಗಿಯೇ ಹೇಳಿದರು. ಮುಂದಿನ ಮೇ 31ರಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಭರವಸೆ ನೀಡಿದ್ದ ಅವರಿಗೆ ಪೂರ್ಣಗೊಳ್ಳದಿದ್ದಲ್ಲಿನಿಮ್ಮನ್ನೇ ಹೊಣೆಗಾರನ್ನಾಗಿ ಮಾಡುವುದಾರಿ ಎಚ್ಚರಿಕೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಮಳೆ ಬರುವ ಪೂರ್ವದಲ್ಲಿ ಮುಗಿಸುವಂತಾಗಬೇಕು. ಕುಡಿಯುವ ನೀರಿಗೆಯಾವುದೇ ಕಾರಣಕ್ಕೂ ತೊಂದರೆಯಾಗಬಾರದು.ಕಾಮಗಾರಿ ಮುಗಿಯುವ ಹಂತದಲ್ಲಿದ್ದರೆ ಶೀಘ್ರ ಮುಗಿಸಿ ನೀರು ಕೊಡುವ ಕೆಲಸ ಮಾಡಿಎಂದು ಪಂಚಾಯತ್‌ರಾಜ್‌ ಇಂಜಿನಿಯರ್‌ ಗೆ ಸೂಚಿಸಿದರು.

ಕಂದಾಯ ಇಲಾಖೆಯಲ್ಲಿಕೆಲಸ ವಿಳಂಬ ಆಗುತ್ತಿದೆ ಎನ್ನುವ ದೂರಿದೆ. ಜನರಕೆಲಸ ತ್ವರಿತಗತಿಯಲ್ಲಿ ಮಾಡಿಕೊಡಲು ಸಿಬ್ಬಂದಿಗೆ ಸೂಚಿಸಿದರು.

ಬಿಇಒ ದೇವಿದಾಸ ಮೊಗೇರ, ಮೀನುಗಾರಿಕಾ ಇಲಾಖೆಯ ರವಿ, ತೋಟಗಾರಿಕಾ ಇಲಾಖೆಯ ಸಂಧ್ಯಾ ಭಟ್ಟ, ಹೆಸ್ಕಾಂ ಇಲಾಖೆಯ ಮಂಜುನಾಥ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ವರದಿ ಮಂಡಿಸಿದರು.ತಹಶೀಲ್ದಾರ್‌ ಎಸ್‌. ರವಿಚಂದ್ರ, ತಾಪಂ ಇಒ ಪ್ರಭಾಕರ ಚಿಕ್ಕನಮನೆ ಇದ್ದರು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.