Karwar: ಮಣ್ಣಿನ ಮುದ್ದೆಯನ್ನು ಬಾವಿಗೆ ಹಾಕಲು ಹೋಗಿ ನೀರುಪಾಲಾದ ಮಗು
Team Udayavani, Aug 26, 2023, 4:23 PM IST
ಕಾರವಾರ: ಮಗುವೊಂದು ಮನೆಯ ಮುಂದೆ ಆಟವಾಡುತ್ತಾ ಬಾವಿಗೆ ಬಿದ್ದು ಮೃತಪಟ್ಟ ದುರ್ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ.
ಸೂರಜ್ ಬಂಟ್ ಮತ್ತು ವಿನುತಾ ಅವರ ಮೂರು ವರ್ಷದ ಮಗಳು ಸ್ತುತಿ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಳು. ಮಣ್ಣಿನ ಮುದ್ದೆಯನ್ನು ಗಣಪ ಎಂದು ಬಾವಿಗೆ ಹಾಕಲು ಹೋಗಿ ಆಯ ತಪ್ಪಿ ಬಾವಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ನಗರಸಭೆಗೆ ಸೇರಿದ ಬಾವಿ ಕಟ್ಟೆ ಸುರಕ್ಷಿತ ಎತ್ತರದಲ್ಲಿರದ ಕಾರಣ ಮಗು ಬಾವಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ದಂಪತಿಗಳು, ಹರಿದೇವನಗರದ ಜನ ತಲ್ಲಣಕ್ಕೆ ಒಳಗಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಕ್ಕಳಿಗೆ ಸುರಕ್ಷಿತವಲ್ಲದ ಬಾವಿ ಕಟ್ಟೆ ಎತ್ತರವನ್ನು ಹೆಚ್ಚಿಸಲು ಹರಿದೇವನಗರದ ಜನರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?