ಕಿಸಾನ್‌ ಸಮ್ಮಾನ್‌: ಶಿರಸಿಯಲ್ಲೇ ಹೆಚ್ಚು ನೋಂದಣಿ

•ಇನ್ನೂ ದಾಖಲಾತಿಗೆ ಸಮಯವಿದೆ•ಅರ್ಜಿ ಸಲ್ಲಿಕೆಗೆ ಬಹುತೇಕ ರೈತರು ಅರ್ಹರು

Team Udayavani, Jun 23, 2019, 12:40 PM IST

Udayavani Kannada Newspaper

ಶಿರಸಿ: ಪ್ರಧಾನ ಮಂತ್ರಿಗಳ ಕಿಸಾನ್‌ ಸಮ್ಮಾನ ಯೋಜನೆ ಬರಲಿರುವ ಜೂ.30 ಕ್ಕೆ ಕೊನೆಗೊಳ್ಳಲಿದ್ದು, ಜಿಲ್ಲಾಡಳಿತ ಅರ್ಹ ರೈತರು ದಾಖಲೆ ಸಹಿತ ಅರ್ಜಿ ಸಲ್ಲಿಕೆಗೆ ಮನವಿ ಮಾಡಿದೆ. ಇಡೀ ಜಿಲ್ಲೆಯಲ್ಲಿ ಶಿರಸಿಯಲ್ಲೇ ಅಧಿಕ ರೈತರು ಕಿಸಾನ್‌ ಸಮ್ಮಾನ ಯೋಜನೆಗೆ ಹೆಸರು ನೊಂದಾಯಿಸಿದ್ದಾರೆ.

ಪ್ರಧಾನ ಮಂತ್ರಿಗಳು ಲೋಕಸಭಾ ಚುನಾವಣೆಗೆ ಮೊದಲೇ ಘೋಷಣೆ ಮಾಡಿದ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳನ್ನು ಮೂರು ಕಂತಿನಲ್ಲಿ ನೀಡುವ ಯೋಜನೆ ಇದು. ಪಹಣಿ ಪತ್ರಿಕೆ, ಆಧಾರ ಕಾರ್ಡ್‌ ಪ್ರತಿ, ಫೋಟೊ, ಬ್ಯಾಂಕ್‌ ಪಾಸ್‌ಬುಕ್‌ಗಳ ಪ್ರತಿ ಜೊತೆ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ, ವಿವಿಧ ಇಲಾಖೆ ಅಥವಾ ಗ್ರಾಪಂಗಳ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ರೈತರು ಮುದ್ರಿತ ಅರ್ಜಿ ಭರಣ ಮಾಡಿ ಸಲ್ಲಿಸಿದರೆ ಆಯಾ ಕೇಂದ್ರದಲ್ಲಿ ಕಂಪ್ಯೂಟರ್‌ನಿಂದ ದಾಖಲಿಸುತ್ತಾರೆ. ಇದಕ್ಕೆಂದೇ ಪ್ರತ್ಯೇಕ ಪಿಎಂ ಕಿಸ್ಸಾನ್‌ ಎಂಬ ವೆಬ್‌ಸೈಟ್ ಕೂಡ ಕಾರ್ಯಮಾಡುತ್ತಿದೆ. ಗ್ರಾಮ ಲೆಕ್ಕಾಧಿಕಾರಿಗಳ ಬಳಿ ಕೂಡ ಅರ್ಜಿ ಸಲ್ಲಿಸಬಹುದು.

ಕೆಲವು ತಾಲೂಕುಗಳಲ್ಲಿ ಶೇ.55ಕ್ಕಿಂತ ಅಧಿಕ ರೈತರು ಅರ್ಜಿ ಭರಣ ಮಾಡಬೇಕಿದ್ದು, ಆದಷ್ಟು ಶೀಘ್ರ ತುಂಬಿ ಕೊಡುವಂತೆ ಜಿಲ್ಲಾಡಳಿತ ಸೂಚಿಸಿದೆ.

ಶಿರಸೀಲೇ ಹೆಚ್ಚು: ಜಿಲ್ಲೆಯ ಎಲ್ಲಡೆ ಅರ್ಜಿ ಭರಣ ಕಾರ್ಯ ನಡೆಯುತ್ತಿದ್ದರೂ ಶಿರಸಿ ತಾಲೂಕಿನಲ್ಲಿ ಈವರೆಗೆ ಶೇ.40ರಷ್ಟು ಅರ್ಜಿ ಭರಣ ಆಗಿದೆ. ಕೆಲವರ ಖಾತೆಗಳಿಗೆ ಪ್ರಥಮ ಕಂತಾಗಿ 2 ಸಾವಿರ ರೂ. ಬಂದಿದೆ. ಇನ್ನು ಕೆಲವರಿಗೆ ಹಣ ದಾರಿಯಲ್ಲಿದೆ.

ಕಳೆದ ಮಾರ್ಚ್‌ನಲ್ಲಿ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸ್ವೀಕಾರ ಆರಂಭಿಸಲಾಗಿತ್ತು. ಆಗಲೂ ಶಿರಸಿಯಲ್ಲಿ ಸರತಿ ಸಾಲಿತ್ತು. ಚುನಾವಣೆ ವೇಳೆ ನೀತಿ ಸಂಹಿತೆ ಕಾರಣದಿಂದ ಬಂದ್‌ ಆಗಿತ್ತು. ಈಗ ಮತ್ತೆ ಆರಂಭವಾಗಿದ್ದು, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕೆಲಸ ಮಾಡುತ್ತಿದ್ದಾರೆ. ಮೊದಲು ಐದು ಎಕರೆ ಒಳಗೆ ಇದ್ದವರಿಗೆ ಮಾತ್ರ ಅವಕಾಶ ಇತ್ತು. ಈಗ ಎಲ್ಲ ರೈತರಿಗೂ ಇದರ ಅವಕಾಶ ಸೃಷ್ಟಿಯಾಗಿದೆ.

ಎಲ್ಲೆಲ್ಲಿ ಎಷ್ಟೆಷ್ಟು? : ಜಿಲ್ಲೆಯಲ್ಲಿ 1,99,241 ರೈತರಿದ್ದಾರೆ. ಈ ಪೈಕಿ 47,812 ರೈತರು ತಮ್ಮ ಅರ್ಜಿಗಳನ್ನು ಸಲ್ಲಿಸಿ ಕಂಪ್ಯೂಟರ್‌ನಲ್ಲಿ ದಾಖಲಾಗಿದೆ. ಇನ್ನೂ ಶೇ.60ರಷ್ಟು ರೈತರ ವಿವರಗಳು ದಾಖಲಾಗಬೇಕಿದೆ.

ಅಂಕೋಲಾದದಲ್ಲಿ 22,763 ರೈತರಿದ್ದು 3059 ರೈತರು ಅರ್ಜಿ ಸಲ್ಲಿಸಿದ್ದಾರೆ. ಭಟ್ಕಳದಲ್ಲಿ 18033 ರೈತರಿದ್ದು 2636 ರೈತರು ಅರ್ಜಿ ಸಲ್ಲಿಸಿದ್ದಾರೆ. ದಾಂಡೇಲಿ ಹಾಗೂ ಹಳಿಯಾಳ ಸೇರಿ 11, 550 ರೈತರಿದ್ದು, 4432 ರೈತರು ಅರ್ಜಿ ಹಾಕಿದ್ದಾರೆ.

ಹೊನ್ನಾವರದಲ್ಲಿ 27,299 ರೈತರಲ್ಲಿ 5370 ರೈತರು, ಕಾರವಾರದಲ್ಲಿ 24,464ರಲ್ಲಿ 1745 ರೈತರು ಅರ್ಜಿ ಸಲ್ಲಿಸಿದ್ದಾರೆ. ಕುಮಟಾದಲ್ಲಿ 29,696ರಲ್ಲಿ 4233 ರೈತರು ಅರ್ಜಿ ಹಾಕಿದ್ದಾರೆ. ಮುಂಡಗೋಡದಲ್ಲಿ 11,073 ರೈತರಿದ್ದು 6201 ಅರ್ಜಿ ಸಲ್ಲಿಸಿದ್ದಾರೆ. ಸಿದ್ದಪುರದಲ್ಲಿ 17,971 ರೈತರಲ್ಲಿ 6058 ರೈತರು ಅರ್ಜಿ ಹಾಕಿದಾರೆ. ಶಿರಸಿಯಲ್ಲಿ 22,009 ರೈತರಿದ್ದು, ಈ ಪೈಕಿ 8737 ರೈತರು ದಾಖಲಿಸಿದ್ದಾರೆ. ಜೋಯಿಡಾದಲ್ಲಿ 5,596 ರೈತರಲ್ಲಿ 1908 ರೈತರು ಅರ್ಜಿ ಹಾಕಿದ್ದರೆ, ಯಲ್ಲಾಪುರದಲ್ಲಿ 8787ರಲ್ಲಿ 3421 ಅರ್ಜಿ ಹಾಕಿದ್ದಾರೆ.

 

•ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.