Kumta ಅಘನಾಶಿನಿ ನದಿಯಲ್ಲಿ ವಿಸ್ಮಯ; ಅಪರೂಪದ ಏಡಿ ಕಲ್ಲು ಪತ್ತೆ


Team Udayavani, Oct 27, 2023, 11:00 PM IST

Kumta ಅಘನಾಶಿನಿ ನದಿಯಲ್ಲಿ ವಿಸ್ಮಯ; ಅಪರೂಪದ ಏಡಿ ಕಲ್ಲು ಪತ್ತೆ

ಕುಮಟಾ: ತಾಲೂಕಿನ ನುಸಿಕೋಟೆ ಬಳಿ ಮೀನುಗಾರರೊಬ್ಬರಿಗೆ ಕಲ್ಲಾಗಿ ರೂಪುಗೊಂಡ ಏಡಿಯ ದೇಹ ಸಿಕ್ಕಿದ್ದು, ಇದು ನೂರಾರು ವರ್ಷಗಳ ಹಳೆಯ ಪಳೆಯುಳಿಕೆ ಇರಬಹುದು ಎಂದು ತಜ್ಞರು ಅಂದಾಜಿಸುತ್ತಿದ್ದಾರೆ.

ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ನಡೆಸುತಿದ್ದ ವೇಳೆ ಮೀನುಗಾರ ಈಶ್ವರ ಹರಿಕಂತ್ರ ಎಂಬುವರಿಗೆ ಏಡಿ ಕಲ್ಲು ಸಿಕ್ಕಿದೆ. ಮೊದಲು ಇದು ಏಡಿ ಎಂದು ಕೈಯಲ್ಲಿ ಹಿಡಿದಾಗ ಸಾಮಾನ್ಯ ಏಡಿಯಂತೆ ಇರದೇ ಕಲ್ಲಿನಂತೆ ಸ್ಪರ್ಶ ಅನುಭವ ಆಗಿದೆ. ಹೀಗಾಗಿ ಈ ಏಡಿಯಲ್ಲಿ ವಿಶೇಷ ಏನೋ ಇದೆ ಎಂದು ಕಾರವಾರದ ಮೀನುಗಾರ ವಿನಾಯಕ ಹರಿಕಂತ್ರ ಎಂಬವರಿಗೆ ಅದನ್ನು ಕಳುಹಿಸಿಕೊಟ್ಟಿದ್ದಾರೆ. ಅವರು ಕಾರವಾರದ ಕಡಲ ಜೀವಶಾಸ್ತ್ರಜ್ಞರ ಗಮನಕ್ಕೆ ತಂದು ಹಸ್ತಾಂತರಿಸಿದ್ದಾರೆ. ಈ ವೇಳೆ ಈ ಏಡಿ ನದಿಯಲ್ಲಿ ನೂರಾರು ವರ್ಷಗಳು ಸವೆಸಿ ಕಲ್ಲಿನ ರೂಪ ಪಡೆದಿದೆ ಎಂದು ತಿಳಿಸಿದ್ದಾರೆ‌.

ಏಡಿ ಕಲ್ಲುಗಳು ಸಮಾನ್ಯವಾಗಿ ಬಂಡೆಕಲ್ಲುಗಳಿರುವ ಕಡಲತೀರದಲ್ಲಿ ಪತ್ತೆಯಾಗುತ್ತವೆ. ಆದರೆ ಸಿಹಿ ನೀರಿನ ಅಘನಾಶಿನಿ ನದಿಯಲ್ಲಿ ಕಾಣಸಿಕ್ಕಿದ್ದು ಅಪರೂಪವೆನ್ನುತ್ತಾರೆ ಕಡಲ ಜೀವಶಾಸ್ತ್ರಜ್ಞ ವಿ.ಎನ್.ನಾಯಕ.ಏಡಿ ಕಲ್ಲು ಏಡಿಯ ಪಳಿಯುಳಿಕೆಯಾಗಿದ್ದು, ನೂರು ವರ್ಷಗಳದ್ದು ಇರಬಹುದು ಎಂದು ಅಂದಾಜಿಸಲಾಗಿದೆ.

ಆದರೆ, ಕಾರ್ಬನ್ ಡೇಟಿಂಗ್‌ಗೆ ಒಳಪಡಿಸದೇ, ಅದರ ನಿಖರ ಆಯಸ್ಸು ಎಷ್ಟು ಎಂದು ಹೇಳಲು ಆಗುವುದಿಲ್ಲ. ಹೀಗಾಗಿ ಕಡಲ ಜೀವಶಾಸ್ತ್ರಜ್ಞರ ಜೊತೆ ಇದೀಗ ಪುರಾತತ್ವ ಸಂಶೋಧಕರು ಸಹ ಈ ಏಡಿ ಹಿಂದೆ ಬಿದ್ದಿದ್ದು ಇದರ ನಿಜವಾದ ಆಯುಷ್ಯವನ್ನು ಹುಡುಕುವತ್ತ ಗಮನ ಹರಿಸಿದ್ದಾರೆ.

ಒಟ್ಟಿನಲ್ಲಿ ಅಪರೂಪದ ಕಲ್ಲಾಗಿ ಪರಿವರ್ತನೆ ಗೊಂಡ ಏಡಿ ಪಳಯುಳಿಕೆ ಇದೀಗ ಸಂಶೋಧಕರಿಗೆ ಸಂಶೋಧನೆಗೆ ವಸ್ತುವಾಗಿದೆ ಮಾರ್ಪಟ್ಟಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.