ಡಿಸಿಯಿಂದ ಕುಮಟಾ-ಭಟ್ಕಳ ಕ್ಷೇತ್ರ ವೀಕ್ಷಣೆ
Team Udayavani, Apr 21, 2019, 4:42 PM IST
ಕಾರವಾರ: ಉತ್ತರ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕುಮಟಾ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣೆ ಅಂತಿಮ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ| ಹರೀಶ್ಕುಮಾರ್ ಕೆ. ವೀಕ್ಷಿಸಿದರು.
ಶುಕ್ರವಾರ ಕುಮಟಾ ಮತ್ತು ಭಟ್ಕಳ ವ್ಯಾಪ್ತಿಯ ವಿವಿಧೆಡೆ ಪ್ರವಾಸ ಮಾಡಿದ ಜಿಲ್ಲಾಧಿಕಾರಿ, ಮತಗಟ್ಟೆಯಲ್ಲಿ ನಡೆದಿರುವ ಪೂರ್ವ ತಯಾರಿಯನ್ನು ಖುದ್ದು ಪರಿಶೀಲಿಸಿದರು. ಅಲ್ಲದೆ ಕುಮಟಾದ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಅಲ್ಲದೆ ತಾಲೂಕು ಕೇಂದ್ರ ಸ್ಥಾನದಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಸಂಚಾರಿ ಜಾಗೃತಿ ದಳದ ನೋಡಲ್ ಅಧಿಕಾರಿಗಳು, ಮಾದರಿ ನೀತಿ ಸಂಹಿತೆ ಸಹಾಯಕ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.
ನಂತರ ಅವರು, ಏ.21 ರಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತೀವ್ರ ಎಚ್ಚರ ವಹಿಸಬೇಕು. ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್, ಮತಗಟ್ಟೆ ಅಧಿಕಾರಿಗಳ ಜವಾಬ್ದಾರಿ ನಿರ್ವಹಣೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು. ಚುನಾವಣಾ ಸಂಬಂಧಿ ಗೊಂದಲಗಳಿದ್ದಲ್ಲಿ ತಕ್ಷಣ ಮಾಹಿತಿ ರವಾನಿಸಬೇಕು ಹಾಗೂ ಸಂಬಂಧಿಸಿದ ಪರ್ಯಾಯ ವ್ಯವಸ್ಥೆ ಮಾಡುವುದು ಸಹಾಯಕ ಚುನಾವಣಾಧಿಕಾರಿಗಳ ಜವಾಬ್ದಾರಿ ಎಂದು ಅವರು ಹೇಳಿದರು.
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ವಿಶೇಷವಾಗಿ ರೂಪಿಸಿರುವ ವಿಕಲಚೇತನ ಮತದಾರರ ಸೌಲಭ್ಯ ಕಲ್ಪಿಸುವ ಸಂಬಂಧ ವಿಶೇಷ ಗಮನ ಹರಿಸಬೇಕು. ಚುನಾವಣಾ ವೀಕ್ಷಕರು ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಕೋರುವ ಮಾಹಿತಿಯನ್ನು ತಕ್ಷಣ ಕೊಡಲು ತಯಾರಿರಬೇಕು ಎಂದರು.
ಕುಮಟಾ ಸಹಾಯಕ ಕಮಿಷನರ್ ಪ್ರೀತಿ ಗೆಹ್ಲೂಟ್, ಐಎಎಸ್ ಪ್ರಭಾರಿ ದಿಲೀಶ್ ಸಸಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ